<p>ದೇವನಹಳ್ಳಿ: ತಾಲೂಕಿನ ಕಾರಹಳ್ಳಿಯ ವಿಶ್ವಜ್ಯೋತಿ ಬುದ್ಧ ವಿಹಾರದಲ್ಲಿ ಈಚೆಗೆ ಬುದ್ಧ ಜಯಂತಿ ನಡೆಯಿತು.</p>.<p>ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್ ಮಾತನಾಡಿ, ಇತಿಹಾಸದಲ್ಲಿ ಬುದ್ಧನ ಸ್ಥಾನ ಅನನ್ಯವಾಗಿದ್ದು, ಮಾನವನ ದುಃಖಗಳಿಗೆ ಮೂಲ ಕಾರಣ ಆಸೆ ಎಂಬ ಸತ್ಯ ಬೋಧಿಸಿದ ಮಹಾತ್ಮ ಎಂದು ಹೇಳಿದರು.</p>.<p>ಬೌದ್ಧ ಧರ್ಮ ಸಮ ಸಮಾಜ ಮತ್ತು ಸಮಾನತೆ ಸ್ಥಾಪನೆಗೆ ಮಾರ್ಗದರ್ಶಿ. ಬುದ್ಧನ ಉಪದೇಶ ಶಾಂತಿ, ಕರುಣೆ ಹಾಗೂ ನೆಮ್ಮದಿಯ ಬದುಕಿಗೆ ದಾರಿಯಾಗಿದೆ. ಪ್ರತಿಯೊಬ್ಬರೂ ಪಂಚಶೀಲಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.</p>.<p>ಸಾವಿರಾರು ವರ್ಷಗಳ ಹಿಂದೆಯೇ ಬುದ್ಧ ಪಂಚಶೀಲಗಳ ಮೂಲಕ ಸುಖ ಜೀವನದ ಮಾರ್ಗ ತೋರಿಸಿದ್ದಾರೆ. ಶಾಂತಿ ಮತ್ತು ಸಮಾನತೆಯ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಮುಖಂಡ ಕಾರಹಳ್ಳಿ ಕೇಶವ ಹೇಳಿದರು.</p>.<p>ಬೌದ್ಧ ಧರ್ಮವು ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಬುದ್ಧರ ಆದರ್ಶಗಳು ಇಂದಿನ ಸಮಾಜಕ್ಕೂ ಅಗತ್ಯವಾಗಿವೆ ಎಂದು ವಿಹಾರದ ಕಾರ್ಯದರ್ಶಿ ಕೆಂಪಣ್ಣ ಹೇಳಿದರು.</p>.<p>ಮುನಿರಾಜು, ಕೃಷ್ಣ ತೈಲಗೆರೆ, ಮುನಿರಾಜು ಕಾರಹಳ್ಳಿ, ಆನಂದಮ್ಮ, ಅರುಣ, ಆಶಾ, ಮನೋಜ, ಯಶವಂತ, ಮಂಜುನಾಥ, ಮಾನಸ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-15-884492615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ತಾಲೂಕಿನ ಕಾರಹಳ್ಳಿಯ ವಿಶ್ವಜ್ಯೋತಿ ಬುದ್ಧ ವಿಹಾರದಲ್ಲಿ ಈಚೆಗೆ ಬುದ್ಧ ಜಯಂತಿ ನಡೆಯಿತು.</p>.<p>ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್ ಮಾತನಾಡಿ, ಇತಿಹಾಸದಲ್ಲಿ ಬುದ್ಧನ ಸ್ಥಾನ ಅನನ್ಯವಾಗಿದ್ದು, ಮಾನವನ ದುಃಖಗಳಿಗೆ ಮೂಲ ಕಾರಣ ಆಸೆ ಎಂಬ ಸತ್ಯ ಬೋಧಿಸಿದ ಮಹಾತ್ಮ ಎಂದು ಹೇಳಿದರು.</p>.<p>ಬೌದ್ಧ ಧರ್ಮ ಸಮ ಸಮಾಜ ಮತ್ತು ಸಮಾನತೆ ಸ್ಥಾಪನೆಗೆ ಮಾರ್ಗದರ್ಶಿ. ಬುದ್ಧನ ಉಪದೇಶ ಶಾಂತಿ, ಕರುಣೆ ಹಾಗೂ ನೆಮ್ಮದಿಯ ಬದುಕಿಗೆ ದಾರಿಯಾಗಿದೆ. ಪ್ರತಿಯೊಬ್ಬರೂ ಪಂಚಶೀಲಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.</p>.<p>ಸಾವಿರಾರು ವರ್ಷಗಳ ಹಿಂದೆಯೇ ಬುದ್ಧ ಪಂಚಶೀಲಗಳ ಮೂಲಕ ಸುಖ ಜೀವನದ ಮಾರ್ಗ ತೋರಿಸಿದ್ದಾರೆ. ಶಾಂತಿ ಮತ್ತು ಸಮಾನತೆಯ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಮುಖಂಡ ಕಾರಹಳ್ಳಿ ಕೇಶವ ಹೇಳಿದರು.</p>.<p>ಬೌದ್ಧ ಧರ್ಮವು ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಬುದ್ಧರ ಆದರ್ಶಗಳು ಇಂದಿನ ಸಮಾಜಕ್ಕೂ ಅಗತ್ಯವಾಗಿವೆ ಎಂದು ವಿಹಾರದ ಕಾರ್ಯದರ್ಶಿ ಕೆಂಪಣ್ಣ ಹೇಳಿದರು.</p>.<p>ಮುನಿರಾಜು, ಕೃಷ್ಣ ತೈಲಗೆರೆ, ಮುನಿರಾಜು ಕಾರಹಳ್ಳಿ, ಆನಂದಮ್ಮ, ಅರುಣ, ಆಶಾ, ಮನೋಜ, ಯಶವಂತ, ಮಂಜುನಾಥ, ಮಾನಸ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-15-884492615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>