<p>ಧಾರವಾಡ: ‘ಬಸವಣ್ಣನವರು ಶೋಷಣೆ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸಿದರು. ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಪಂಡಿತ ಎಂ. ವೆಂಕಟೇಶ ಕುಮಾರ ಹೇಳಿದರು.</p>.<p>ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಈಚೆಗೆ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣ ಉಪನ್ಯಾಸ ಹಾಗೂ ವಚನ ಸಂಗೀತ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ಬಸವಣ್ಣನವರು ಅರಿವು–ಆಚಾರ–ಅನುಭಾವದ ಮೂಲಕ ಸಾಮಾಜಿಕ, ರಾಜಕೀಯ, ಧಾರ್ಮಿಕ, ಆರ್ಥಿಕ, ಸಾಹಿತ್ಯಿಕ, ಸಾಂಸ್ಕೃತಿಕ ಕ್ರಾಂತಿ ಮಾಡಿದರು’ ಎಂದರು.</p>.<p>ಪ್ರಾಧ್ಯಾಪಕಿ ವೀಣಾ ಹೂಗಾರ ಮಾತನಾಡಿ, ‘ಬಸವಾದಿ ಶರಣರು ಸಮಾಜದಲ್ಲಿನ ಅಂಧಕಾರ, ಮೂಢನಂಬಿಕೆ ಹೋಗಲಾಡಿಸಲು ಪ್ರಯತ್ನಿಸಿದರು’ ಎಂದು ತಿಳಿಸಿದರು.</p>.<p>ಮಹಾಸಭಾದ ಅಧ್ಯಕ್ಷ ಪ್ರದೀಪಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ, ಪ್ರೊ.ವಿ.ಸಿ. ಸವಡಿ, ಬಸವರಾಜ ಗೋಲಪ್ಪನವರ, ಮಹೇಶ ಬಿಳಿಹಾಳ, ಶಂಕರ ಕುಂಬಿ, ಪಾರ್ವತಿ ಹಾಲಭಾವಿ, ಸುವರ್ಣಾ ಬಿರಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-24-696993819</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಬಸವಣ್ಣನವರು ಶೋಷಣೆ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸಿದರು. ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಪಂಡಿತ ಎಂ. ವೆಂಕಟೇಶ ಕುಮಾರ ಹೇಳಿದರು.</p>.<p>ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಈಚೆಗೆ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣ ಉಪನ್ಯಾಸ ಹಾಗೂ ವಚನ ಸಂಗೀತ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ಬಸವಣ್ಣನವರು ಅರಿವು–ಆಚಾರ–ಅನುಭಾವದ ಮೂಲಕ ಸಾಮಾಜಿಕ, ರಾಜಕೀಯ, ಧಾರ್ಮಿಕ, ಆರ್ಥಿಕ, ಸಾಹಿತ್ಯಿಕ, ಸಾಂಸ್ಕೃತಿಕ ಕ್ರಾಂತಿ ಮಾಡಿದರು’ ಎಂದರು.</p>.<p>ಪ್ರಾಧ್ಯಾಪಕಿ ವೀಣಾ ಹೂಗಾರ ಮಾತನಾಡಿ, ‘ಬಸವಾದಿ ಶರಣರು ಸಮಾಜದಲ್ಲಿನ ಅಂಧಕಾರ, ಮೂಢನಂಬಿಕೆ ಹೋಗಲಾಡಿಸಲು ಪ್ರಯತ್ನಿಸಿದರು’ ಎಂದು ತಿಳಿಸಿದರು.</p>.<p>ಮಹಾಸಭಾದ ಅಧ್ಯಕ್ಷ ಪ್ರದೀಪಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ, ಪ್ರೊ.ವಿ.ಸಿ. ಸವಡಿ, ಬಸವರಾಜ ಗೋಲಪ್ಪನವರ, ಮಹೇಶ ಬಿಳಿಹಾಳ, ಶಂಕರ ಕುಂಬಿ, ಪಾರ್ವತಿ ಹಾಲಭಾವಿ, ಸುವರ್ಣಾ ಬಿರಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-24-696993819</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>