ಕನಕಗಿರಿ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಮಹಾ ಶಿವರಾತ್ರಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.
ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಶಿವಲಿಂಗ ಸ್ಥಾಪಿಸಿ ಶಿವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ರಾಜಯೋಗ ಭವನವನ್ನು ಹೂವು, ತಳಿರು, ತೋರಣಗಳಿಂದ ಅಲಂಕಾರಗೊಳಿಸಲಾಗಿತ್ತು.
ಬೆಳಿಗ್ಗೆ ಶಿವಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ನೂತನ ರಾಜಯೋಗ ಭವನದಲ್ಲಿ ಬ್ರಹ್ಮಕುಮಾರಿ ಲಕ್ಷ್ಮೀ ಜಿ ಮಾತನಾಡಿ,‘ಮಾನವರು ಇಂದು ವಿವಿಧ ಕಾರಣಗಳಿಂದಾಗಿ ಒತ್ತಡದಲ್ಲಿ ಜೀವನವನ್ನು ಕಳೆಯುತ್ತಿದ್ದಾರೆ. ಮನಃ ಶಾಂತಿಗಾಗಿ ಇಲ್ಲಿ ಶಿಕ್ಷಣ ನೀಡಲಾಗುತ್ತಿದೆ’ ಎಂದರು.