<p><strong>ಕನಕಗಿರಿ:</strong> ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಮಹಾ ಶಿವರಾತ್ರಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.</p>.<p>ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಶಿವಲಿಂಗ ಸ್ಥಾಪಿಸಿ ಶಿವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ರಾಜಯೋಗ ಭವನವನ್ನು ಹೂವು, ತಳಿರು, ತೋರಣಗಳಿಂದ ಅಲಂಕಾರಗೊಳಿಸಲಾಗಿತ್ತು.</p>.<p>ಬೆಳಿಗ್ಗೆ ಶಿವಧ್ವಜಾರೋಹಣ ಕಾರ್ಯಕ್ರಮ ನಡೆಯಿತು.</p>.<p>ನೂತನ ರಾಜಯೋಗ ಭವನದಲ್ಲಿ ಬ್ರಹ್ಮಕುಮಾರಿ ಲಕ್ಷ್ಮೀ ಜಿ ಮಾತನಾಡಿ,‘ಮಾನವರು ಇಂದು ವಿವಿಧ ಕಾರಣಗಳಿಂದಾಗಿ ಒತ್ತಡದಲ್ಲಿ ಜೀವನವನ್ನು ಕಳೆಯುತ್ತಿದ್ದಾರೆ. ಮನಃ ಶಾಂತಿಗಾಗಿ ಇಲ್ಲಿ ಶಿಕ್ಷಣ ನೀಡಲಾಗುತ್ತಿದೆ’ ಎಂದರು.</p>.<p>ಪ್ರಮುಖರಾದ ಶೇಖರಗೌಡ ಪಾಟೀಲ, ಗುರುಸಿದ್ದಪ್ಪ ಹಾದಿಮನಿ, ಮುದುಕಪ್ಪ ಕಡಿ, ಮಹಾಂತೇಶ ತಾಡಪತ್ರಿ, ಗವಿಸಿದ್ದಪ್ಪ, ಸುಮಾ ಹಾಗೂ ರೇಣುಕಾ ಇದ್ದರು.</p>.<p>ಪಟ್ಟಣದ ಪಂಪಾಪತಿ ದೇವಸ್ಥಾನ, ರಾಮಲಿಂಗೇಶ್ವರ , ಅಗಸಿ ಹನುಮಪ್ಪ, ಐತಿಹಾಸಿಕ ಕನಕಾಚಲಪತಿ ದೇವಸ್ಥಾನ ಗಳಲ್ಲಿ ಹೂವಿನ ಅಲಂಕಾರ, ಅಭಿಷೇಕ, ಕುಂಕಮಾರ್ಚನೆ, ಮಂಗಳಾರುತಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಮಹಾ ಶಿವರಾತ್ರಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.</p>.<p>ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಶಿವಲಿಂಗ ಸ್ಥಾಪಿಸಿ ಶಿವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ರಾಜಯೋಗ ಭವನವನ್ನು ಹೂವು, ತಳಿರು, ತೋರಣಗಳಿಂದ ಅಲಂಕಾರಗೊಳಿಸಲಾಗಿತ್ತು.</p>.<p>ಬೆಳಿಗ್ಗೆ ಶಿವಧ್ವಜಾರೋಹಣ ಕಾರ್ಯಕ್ರಮ ನಡೆಯಿತು.</p>.<p>ನೂತನ ರಾಜಯೋಗ ಭವನದಲ್ಲಿ ಬ್ರಹ್ಮಕುಮಾರಿ ಲಕ್ಷ್ಮೀ ಜಿ ಮಾತನಾಡಿ,‘ಮಾನವರು ಇಂದು ವಿವಿಧ ಕಾರಣಗಳಿಂದಾಗಿ ಒತ್ತಡದಲ್ಲಿ ಜೀವನವನ್ನು ಕಳೆಯುತ್ತಿದ್ದಾರೆ. ಮನಃ ಶಾಂತಿಗಾಗಿ ಇಲ್ಲಿ ಶಿಕ್ಷಣ ನೀಡಲಾಗುತ್ತಿದೆ’ ಎಂದರು.</p>.<p>ಪ್ರಮುಖರಾದ ಶೇಖರಗೌಡ ಪಾಟೀಲ, ಗುರುಸಿದ್ದಪ್ಪ ಹಾದಿಮನಿ, ಮುದುಕಪ್ಪ ಕಡಿ, ಮಹಾಂತೇಶ ತಾಡಪತ್ರಿ, ಗವಿಸಿದ್ದಪ್ಪ, ಸುಮಾ ಹಾಗೂ ರೇಣುಕಾ ಇದ್ದರು.</p>.<p>ಪಟ್ಟಣದ ಪಂಪಾಪತಿ ದೇವಸ್ಥಾನ, ರಾಮಲಿಂಗೇಶ್ವರ , ಅಗಸಿ ಹನುಮಪ್ಪ, ಐತಿಹಾಸಿಕ ಕನಕಾಚಲಪತಿ ದೇವಸ್ಥಾನ ಗಳಲ್ಲಿ ಹೂವಿನ ಅಲಂಕಾರ, ಅಭಿಷೇಕ, ಕುಂಕಮಾರ್ಚನೆ, ಮಂಗಳಾರುತಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>