<p>ಗದಗ: ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ಶಾರದಾ ಪೀಠ ಶೃಂಗೇರಿ ವತಿಯಿಂದ ಏ.20ರಿಂದ ಮೇ 3ರವರೆಗೆ ಸಂಸ್ಕಾರ ಸುಧಾ 14 ದಿನಗಳ ಉಚಿತ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.</p>.<p>ನಗರದ ನಗರೇಶ್ವರ ದೇವಸ್ಥಾನ ಆವರಣದಲ್ಲಿರುವ ವಾಸವಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ (ನರಿಭಾವಿ ಓಣಿ, ವಿ.ಎನ್.ಟಿ. ರಸ್ತೆ) ಉಚಿತ ಬೇಸಿಗೆ ಶಿಬಿರ ಪ್ರತಿದಿನ ಬೆಳಿಗ್ಗೆ 10ರಿಂದ 1.30ರವರೆಗೆ ನಡೆಯಲಿದೆ. 10 ರಿಂದ 16 ವರ್ಷಗಳ ಮಕ್ಕಳು ಶಿಬಿರದಲ್ಲಿ ಭಾಗವಹಿಸಬಹುದು.</p>.<p>ಮಕ್ಕಳಲ್ಲಿ ಆಧುನಿಕತೆಯ ಜೊತೆಗೆ ಧಾರ್ಮಿಕ ಮೌಲ್ಯಗಳು, ನೈತಿಕತೆ ಹಾಗೂ ಸಂಸ್ಕಾರಗಳು ಬೆಳೆಯಬೇಕು ಎಂಬ ಉದ್ದೇಶದಿಂದ ಈ ಉಚಿತ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.</p>.<p>ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ನಮ್ಮ ಪರಂಪರೆ ಸಂಸ್ಕಾರ, ಸಂಸ್ಕೃತಿ, ಧಾರ್ಮಿಕ ಮೌಲ್ಯಗಳ ಪರಿಚಯ ಮತ್ತು ಸರಳ ನಿತ್ಯಪೂಜೆಯ ತರಬೇತಿ ನಂತರ ಪ್ರಮಾಣಪತ್ರ ಶಿಬಿರ ಕಿಟ್ ನೀಡಲಾಗುವುದು. ಶಿಬಿರ ಆರಂಭವಾಗುವ ಮುಂಚೆಯೇ ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಬೇಕು.</p>.<p>ಮಾಹಿತಿಗೆ ಸಂಚಾಲಕರಾದ ಡಾ. ಗಣೇಶ ಸುಲ್ತಾನಪುರ 99020 66252, ಸಹ ಸಂಚಾಲಕರಾದ ಸತೀಶ ಕುಂಬಾರ 80509 03407 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-23-59754683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ಶಾರದಾ ಪೀಠ ಶೃಂಗೇರಿ ವತಿಯಿಂದ ಏ.20ರಿಂದ ಮೇ 3ರವರೆಗೆ ಸಂಸ್ಕಾರ ಸುಧಾ 14 ದಿನಗಳ ಉಚಿತ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.</p>.<p>ನಗರದ ನಗರೇಶ್ವರ ದೇವಸ್ಥಾನ ಆವರಣದಲ್ಲಿರುವ ವಾಸವಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ (ನರಿಭಾವಿ ಓಣಿ, ವಿ.ಎನ್.ಟಿ. ರಸ್ತೆ) ಉಚಿತ ಬೇಸಿಗೆ ಶಿಬಿರ ಪ್ರತಿದಿನ ಬೆಳಿಗ್ಗೆ 10ರಿಂದ 1.30ರವರೆಗೆ ನಡೆಯಲಿದೆ. 10 ರಿಂದ 16 ವರ್ಷಗಳ ಮಕ್ಕಳು ಶಿಬಿರದಲ್ಲಿ ಭಾಗವಹಿಸಬಹುದು.</p>.<p>ಮಕ್ಕಳಲ್ಲಿ ಆಧುನಿಕತೆಯ ಜೊತೆಗೆ ಧಾರ್ಮಿಕ ಮೌಲ್ಯಗಳು, ನೈತಿಕತೆ ಹಾಗೂ ಸಂಸ್ಕಾರಗಳು ಬೆಳೆಯಬೇಕು ಎಂಬ ಉದ್ದೇಶದಿಂದ ಈ ಉಚಿತ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.</p>.<p>ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ನಮ್ಮ ಪರಂಪರೆ ಸಂಸ್ಕಾರ, ಸಂಸ್ಕೃತಿ, ಧಾರ್ಮಿಕ ಮೌಲ್ಯಗಳ ಪರಿಚಯ ಮತ್ತು ಸರಳ ನಿತ್ಯಪೂಜೆಯ ತರಬೇತಿ ನಂತರ ಪ್ರಮಾಣಪತ್ರ ಶಿಬಿರ ಕಿಟ್ ನೀಡಲಾಗುವುದು. ಶಿಬಿರ ಆರಂಭವಾಗುವ ಮುಂಚೆಯೇ ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಬೇಕು.</p>.<p>ಮಾಹಿತಿಗೆ ಸಂಚಾಲಕರಾದ ಡಾ. ಗಣೇಶ ಸುಲ್ತಾನಪುರ 99020 66252, ಸಹ ಸಂಚಾಲಕರಾದ ಸತೀಶ ಕುಂಬಾರ 80509 03407 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-23-59754683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>