<p>ಗದಗ: ‘ಪಂಚವಟಿ ಧಾರ್ಮಿಕ ಗುರುಕುಲ ಜನಕಲ್ಯಾಣ ಟ್ರಸ್ಟ್ ಹಾಗೂ ಅಖಿಲ ಭಾರತ ಜಂಗಮ ಸೇವಾ ಸಮಿತಿ ವತಿಯಿಂದ ಮೇ 1ರಂದು ಜಂಗಮ ವಟುಗಳಿಗೆ ಶಿವದೀಕ್ಷೆ, ಅಯ್ಯಾಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಕದಾಂಪೂರ, ನರಸಾಪುರ ಹಿರೇಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>‘ನರಸಾಪುರದ ತಪೋವನದಲ್ಲಿ ಮಕ್ಕಳಿಗೆ 30 ದಿನಗಳ ಉಚಿತ ಸಂಸ್ಕಾರ ಮತ್ತು ಯೋಗ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಇದರ ಸಮಾರೋಪ ಸಮಾರಂಭದ ಅಂಗವಾಗಿ ಜಂಗಮ ವಟುಗಳಿಗೆ ಶಿವದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸೊರಟೂರು ಶ್ರೀಗಳು, ಮಣಿಪುರ ಶಿವಯೋಗಿ ಸ್ವಾಮೀಜಿ ಸೇರಿದಂತೆ ಹಲವು ಮಠಗಳ ಸ್ವಾಮೀಜಿಗಳು ಶಿವದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮೇ 1ರಂದು 50 ಮಂದಿಗೆ ಶಿವದೀಕ್ಷೆ ನೀಡಲಾಗುವುದು. ಏ.26ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.</p>.<p>ಅಖಿಲ ಭಾರತ ಜಂಗಮ ಸೇವಾ ಸಮಿತಿಯ ಪದಾಧಿಕಾರಿಗಳಾದ ಕುಮಾರ ಸ್ವಾಮಿ ಹಿರೇಮಠ, ವೀರಯ್ಯ ಹೊಸಮಠ, ಸಂಗಮ್ಮ, ಮಂಜುನಾಥ, ಫಕೀರ ಹಿರೇಮಠ, ಕುಮಾರ ಸೇರಿದಂತೆ ಹಲವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-23-241146622</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಪಂಚವಟಿ ಧಾರ್ಮಿಕ ಗುರುಕುಲ ಜನಕಲ್ಯಾಣ ಟ್ರಸ್ಟ್ ಹಾಗೂ ಅಖಿಲ ಭಾರತ ಜಂಗಮ ಸೇವಾ ಸಮಿತಿ ವತಿಯಿಂದ ಮೇ 1ರಂದು ಜಂಗಮ ವಟುಗಳಿಗೆ ಶಿವದೀಕ್ಷೆ, ಅಯ್ಯಾಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಕದಾಂಪೂರ, ನರಸಾಪುರ ಹಿರೇಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>‘ನರಸಾಪುರದ ತಪೋವನದಲ್ಲಿ ಮಕ್ಕಳಿಗೆ 30 ದಿನಗಳ ಉಚಿತ ಸಂಸ್ಕಾರ ಮತ್ತು ಯೋಗ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಇದರ ಸಮಾರೋಪ ಸಮಾರಂಭದ ಅಂಗವಾಗಿ ಜಂಗಮ ವಟುಗಳಿಗೆ ಶಿವದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸೊರಟೂರು ಶ್ರೀಗಳು, ಮಣಿಪುರ ಶಿವಯೋಗಿ ಸ್ವಾಮೀಜಿ ಸೇರಿದಂತೆ ಹಲವು ಮಠಗಳ ಸ್ವಾಮೀಜಿಗಳು ಶಿವದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮೇ 1ರಂದು 50 ಮಂದಿಗೆ ಶಿವದೀಕ್ಷೆ ನೀಡಲಾಗುವುದು. ಏ.26ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.</p>.<p>ಅಖಿಲ ಭಾರತ ಜಂಗಮ ಸೇವಾ ಸಮಿತಿಯ ಪದಾಧಿಕಾರಿಗಳಾದ ಕುಮಾರ ಸ್ವಾಮಿ ಹಿರೇಮಠ, ವೀರಯ್ಯ ಹೊಸಮಠ, ಸಂಗಮ್ಮ, ಮಂಜುನಾಥ, ಫಕೀರ ಹಿರೇಮಠ, ಕುಮಾರ ಸೇರಿದಂತೆ ಹಲವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-23-241146622</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>