<p>ಗಂಡಸಿ: ‘ಮಾರುಕಟ್ಟೆಯಲ್ಲಿ 1ಲೀಟರ್ ಶುದ್ಧೀಕರಿಸಿದ ಕುಡಿಯುವ ನೀರಿನ ಬೆಲೆ ₹20. ನಾವು 20 ಲೀಟರ್ ಶುದ್ಧೀಕರಿಸಿದ ನೀರನ್ನು ₹5 ಕ್ಕೆ ನೀಡುತ್ತೇವೆ. ಇದು ವ್ಯಾಪಾರದ ದೃಷ್ಟಿಯ ಪೈಪೋಟಿಯಲ್ಲ. ಸಮಾಜದ ಕೆಳವರ್ಗದ ಜನರಿಗೂ ಶುದ್ಧ ಕುಡಿಯುವ ನೀರು ದೊರೆಯಲಿ ಎಂಬ ಭಾವನೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯದ್ದಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು.</p>.<p>ಹೋಬಳಿಯ ಚಿಕ್ಕಯರಗನಾಳು ಗ್ರಾಮದಲ್ಲಿ ಗುರುವಾರ 612ನೇ ಶುದ್ಧಗಂಗಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹10 ಲಕ್ಷ, ಯರಗನಾಳು ಗ್ರಾಮದ ಗ್ರಾ.ಪಂ. ಮಾಜಿ ಅಧ್ಯಕ್ಷ ವೈ.ಎಂ. ಮಲ್ಲೇಶ್ ಅವರು ನೀಡಿರುವ ₹3 ಲಕ್ಷ ವೆಚ್ಚದಲ್ಲಿ ತಾಲೂಕಿನ 41ನೇ ಘಟಕ ಪ್ರಾರಂಭವಾಗಿದ್ದು, ಯರಗನಾಳು ಸುತ್ತಮುತ್ತಲ ಜನತೆ ಉಪಯೋಗ ಪಡೆದುಕೊಳ್ಳಿ ಎಂದರು.</p>.<p>‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1ಸಾವಿರ ಕೆರೆಗಳ ಹೂಳೆತ್ತುವ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು, ಕೆಲವೇ ದಿನಗಳಲ್ಲಿ ಹೂಳೆತ್ತುವ ಕಾರ್ಯ ಪ್ರಾರಂಭವಾಗಲಿದೆ. ನಮ್ಮ ಕಾರ್ಯ ವ್ಯಾಪ್ತಿಯಲ್ಲಿ ಪಾಳು ಬಿದ್ದ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಅತ್ಯಂತ ದುರ್ಬಲ ವರ್ಗದ ಕುಟುಂಬಗಳನ್ನು ಗುರುತಿಸಿ, ₹1.50 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವುದರ ಜೊತೆಗೆ ಉಚಿತವಾಗಿ ಗೃಹ ಉಪಯೋಗಿ ಕಿಟ್ ನೀಡಲಾಗುವುದು’ ಎಂದು ಹೇಳಿದರು.</p>.<p>ದೇವಾಲಯಗಳ ಜೀರ್ಣೋದ್ಧಾರ, ಸ್ಮಶಾನ ಅಭಿವೃದ್ಧಿ, ವೃದ್ಧಾಪ್ಯ ವೇತನ, ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಜ್ಞಾನ ವಿಕಾಸ ಯೋಜನೆ ಅಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್ಗಳಿಗೆ ಧನ ಸಹಾಯ ನೀಡಲಾಗುವುದು ಎಂದರು</p>.<p>ಗ್ರಾ.ಪಂ. ಮಾಜಿ ಅಧ್ಯಕ್ಷ ಯರಗನಾಳು ಮಲ್ಲೇಶ್, ತಾಲ್ಲೂಕು ಯೋಜನಾಧಿಕಾರಿ ಅಕ್ಷತಾ ರೈ, ಗ್ರಾ.ಪಂ. ಮಾಜಿ ಸದಸ್ಯ ಮಧುಸೂದನ್, ತೀರ್ಥಮ್ಮ, ಪಿಎಸಿಸಿ ಬ್ಯಾಂಕ್ ನಿವೃತ್ತ ಮ್ಯಾನೇಜರ್ ನಂಜುಂಡೇಗೌಡ, ಗ್ರಾಮದ ಮುಖಂಡ ಕಾಂತರಾಜು, ಎಲ್ಐಸಿ ರುದ್ರೇಶ್, ಶ್ರೀಕ್ಷೇತ್ರ ಧರ್ಮಸ್ಥಳ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-36-1469171802</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಡಸಿ: ‘ಮಾರುಕಟ್ಟೆಯಲ್ಲಿ 1ಲೀಟರ್ ಶುದ್ಧೀಕರಿಸಿದ ಕುಡಿಯುವ ನೀರಿನ ಬೆಲೆ ₹20. ನಾವು 20 ಲೀಟರ್ ಶುದ್ಧೀಕರಿಸಿದ ನೀರನ್ನು ₹5 ಕ್ಕೆ ನೀಡುತ್ತೇವೆ. ಇದು ವ್ಯಾಪಾರದ ದೃಷ್ಟಿಯ ಪೈಪೋಟಿಯಲ್ಲ. ಸಮಾಜದ ಕೆಳವರ್ಗದ ಜನರಿಗೂ ಶುದ್ಧ ಕುಡಿಯುವ ನೀರು ದೊರೆಯಲಿ ಎಂಬ ಭಾವನೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯದ್ದಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು.</p>.<p>ಹೋಬಳಿಯ ಚಿಕ್ಕಯರಗನಾಳು ಗ್ರಾಮದಲ್ಲಿ ಗುರುವಾರ 612ನೇ ಶುದ್ಧಗಂಗಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹10 ಲಕ್ಷ, ಯರಗನಾಳು ಗ್ರಾಮದ ಗ್ರಾ.ಪಂ. ಮಾಜಿ ಅಧ್ಯಕ್ಷ ವೈ.ಎಂ. ಮಲ್ಲೇಶ್ ಅವರು ನೀಡಿರುವ ₹3 ಲಕ್ಷ ವೆಚ್ಚದಲ್ಲಿ ತಾಲೂಕಿನ 41ನೇ ಘಟಕ ಪ್ರಾರಂಭವಾಗಿದ್ದು, ಯರಗನಾಳು ಸುತ್ತಮುತ್ತಲ ಜನತೆ ಉಪಯೋಗ ಪಡೆದುಕೊಳ್ಳಿ ಎಂದರು.</p>.<p>‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1ಸಾವಿರ ಕೆರೆಗಳ ಹೂಳೆತ್ತುವ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು, ಕೆಲವೇ ದಿನಗಳಲ್ಲಿ ಹೂಳೆತ್ತುವ ಕಾರ್ಯ ಪ್ರಾರಂಭವಾಗಲಿದೆ. ನಮ್ಮ ಕಾರ್ಯ ವ್ಯಾಪ್ತಿಯಲ್ಲಿ ಪಾಳು ಬಿದ್ದ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಅತ್ಯಂತ ದುರ್ಬಲ ವರ್ಗದ ಕುಟುಂಬಗಳನ್ನು ಗುರುತಿಸಿ, ₹1.50 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವುದರ ಜೊತೆಗೆ ಉಚಿತವಾಗಿ ಗೃಹ ಉಪಯೋಗಿ ಕಿಟ್ ನೀಡಲಾಗುವುದು’ ಎಂದು ಹೇಳಿದರು.</p>.<p>ದೇವಾಲಯಗಳ ಜೀರ್ಣೋದ್ಧಾರ, ಸ್ಮಶಾನ ಅಭಿವೃದ್ಧಿ, ವೃದ್ಧಾಪ್ಯ ವೇತನ, ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಜ್ಞಾನ ವಿಕಾಸ ಯೋಜನೆ ಅಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್ಗಳಿಗೆ ಧನ ಸಹಾಯ ನೀಡಲಾಗುವುದು ಎಂದರು</p>.<p>ಗ್ರಾ.ಪಂ. ಮಾಜಿ ಅಧ್ಯಕ್ಷ ಯರಗನಾಳು ಮಲ್ಲೇಶ್, ತಾಲ್ಲೂಕು ಯೋಜನಾಧಿಕಾರಿ ಅಕ್ಷತಾ ರೈ, ಗ್ರಾ.ಪಂ. ಮಾಜಿ ಸದಸ್ಯ ಮಧುಸೂದನ್, ತೀರ್ಥಮ್ಮ, ಪಿಎಸಿಸಿ ಬ್ಯಾಂಕ್ ನಿವೃತ್ತ ಮ್ಯಾನೇಜರ್ ನಂಜುಂಡೇಗೌಡ, ಗ್ರಾಮದ ಮುಖಂಡ ಕಾಂತರಾಜು, ಎಲ್ಐಸಿ ರುದ್ರೇಶ್, ಶ್ರೀಕ್ಷೇತ್ರ ಧರ್ಮಸ್ಥಳ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-36-1469171802</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>