<p><strong>ಕೊಪ್ಪಳ: </strong>ಸಂಸ್ಥಾನ ಶ್ರೀ ಗವಿಮಠದ ಜಾತ್ರಾ ಮಹೋತ್ಸವದದ ಆಂಗವಾಗಿ ಶುಕ್ರವಾರ ಗವಿಸಿದ್ಧೇಶ್ವರ ಮೂರ್ತಿಯ ಪಲ್ಲಕ್ಕಿ ಹಾಗೂ ಕಳಸದ ಮೆರವಣಿಗೆ ಸಂಭ್ರಮದಿಂದ ನಡೆಯಿತು.</p>.<p>ಕೋಟೆಪ್ರದೇಶದ ಜಡೇಗೌಡರ ಮನೆಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದು ಗವಿಮಠ ತಲುಪುವುದು.ಮಠದ 11 ಪೀಠಾಧೀಶರಾಗಿದ್ದ ಗವಿಸಿದ್ದೇಶ್ವರಸ್ವಾಮೀಜಿಜಡೇಗೌಡರ ಮನೆಯಲ್ಲಿ ಲಿಂಗಾನುಷ್ಠಾನ ನಿರತರಾಗಿದ್ದರು. ಮಠಕ್ಕೆ ಪೀಠಾಧಿಪತಿಯಾಗಿ ಬರುವ ಪೂರ್ವದಲ್ಲಿ ಗೌಡರ ಧರ್ಮಪತ್ನಿಯವರಿಗೆ ತಮ್ಮ ಶಿಖೆ (ಜಡೆ)ಯನ್ನೇ ತೆಗೆದುಕೊಟ್ಟರು.</p>.<p>ಅಂದಿನಿಂದ ಆ ಮನೆತನಕ್ಕೆ ಜಡೇಗೌಡ್ರ ಮನೆತನ ಎಂಬ ಹೆಸರು ಬಂದಿತು. ಈ ಕಾರಣಕ್ಕಾಗಿ ಶ್ರೀಮಠದಲ್ಲಿ ಪೂಜೆಗೊಂಡ ಗವಿಸಿದ್ದೇಶ್ವರ ಮೂರ್ತಿಯನ್ನು ಜಡೇಗೌಡರ ಮನೆಯಲ್ಲಿ ಮೂಹರ್ತಗೊಳಿಸಿ ಪೂಜಾದಿಗಳನ್ನು ಸಲ್ಲಿಸಿದ ತರುವಾಯ ವಾದ್ಯಗಳ ಸಮೇತ ಪಲ್ಲಕ್ಕಿಯನ್ನು ಪ್ರಮುಖ ಬೀದಿಗಳಲ್ಲಿ ಹಲವು ಜಾನಪದ ಕಲಾ ತಂಡಗಳಾದ ಸಮಾಳ, ಮೋಜಿನ ಗೊಂಬೆ, ಹಲಗೆ ಮಜಲು, ಮಹಿಳಾ ಡೊಳ್ಳು ಕುಣಿತ, ಮಹಿಳಾ ವೀರಾಗಾಸೆ, ಕೋಲಾಟ, ಕರಡಿ ಮಜಲು, ಸಮಾಳ, ನಂದಿಕೋಲು, ಹಗಲು ವೇಷ, ಜಾಂಜ್ ಮೇಳ, ಚಿಟ್ಟಿ ಮೇಳದ ಮೂಲಕಗವಿಮಠಕ್ಕೆ ತರುವುದು ಸಂಪ್ರದಾಯ.</p>.<p>ಗವಿಮಠದಲ್ಲಿ ಅನ್ನಪೂರ್ಣೇಶ್ವರಿ ದೇವಿಗೆ ಉಡಿತುಂಬುವ ಕಾರ್ಯಕ್ರಮವು ಜರುಗಿತು.</p>.<p>ಹಲಗೇರಿ ಗ್ರಾಮದ ವೀರನಗೌಡ ಪಾಟೀಲ ಮನೆಯಿಂದ ರಥದ ಮೇಲಿನ ಕಳಸತರುವ ಕಾರ್ಯಕ್ರಮ ನಡೆಯಿತು.</p>.<p><strong>ಇಂದು ಲಘುರಥೋತ್ಸವ</strong></p>.<p>ಜ.12ರಂದು ನಡೆಯುವ ಮಹಾರಥೋತ್ಸವದ ಮುಂಚೆ ನಡೆಯುವ ಲಘುರಥೋತ್ಸವ (ಉಚ್ಚಾಯ) ಎಳೆಯುವ ಕಾರ್ಯಕ್ರಮ ಜ.11ರಂದು ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಸಂಸ್ಥಾನ ಶ್ರೀ ಗವಿಮಠದ ಜಾತ್ರಾ ಮಹೋತ್ಸವದದ ಆಂಗವಾಗಿ ಶುಕ್ರವಾರ ಗವಿಸಿದ್ಧೇಶ್ವರ ಮೂರ್ತಿಯ ಪಲ್ಲಕ್ಕಿ ಹಾಗೂ ಕಳಸದ ಮೆರವಣಿಗೆ ಸಂಭ್ರಮದಿಂದ ನಡೆಯಿತು.</p>.<p>ಕೋಟೆಪ್ರದೇಶದ ಜಡೇಗೌಡರ ಮನೆಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದು ಗವಿಮಠ ತಲುಪುವುದು.ಮಠದ 11 ಪೀಠಾಧೀಶರಾಗಿದ್ದ ಗವಿಸಿದ್ದೇಶ್ವರಸ್ವಾಮೀಜಿಜಡೇಗೌಡರ ಮನೆಯಲ್ಲಿ ಲಿಂಗಾನುಷ್ಠಾನ ನಿರತರಾಗಿದ್ದರು. ಮಠಕ್ಕೆ ಪೀಠಾಧಿಪತಿಯಾಗಿ ಬರುವ ಪೂರ್ವದಲ್ಲಿ ಗೌಡರ ಧರ್ಮಪತ್ನಿಯವರಿಗೆ ತಮ್ಮ ಶಿಖೆ (ಜಡೆ)ಯನ್ನೇ ತೆಗೆದುಕೊಟ್ಟರು.</p>.<p>ಅಂದಿನಿಂದ ಆ ಮನೆತನಕ್ಕೆ ಜಡೇಗೌಡ್ರ ಮನೆತನ ಎಂಬ ಹೆಸರು ಬಂದಿತು. ಈ ಕಾರಣಕ್ಕಾಗಿ ಶ್ರೀಮಠದಲ್ಲಿ ಪೂಜೆಗೊಂಡ ಗವಿಸಿದ್ದೇಶ್ವರ ಮೂರ್ತಿಯನ್ನು ಜಡೇಗೌಡರ ಮನೆಯಲ್ಲಿ ಮೂಹರ್ತಗೊಳಿಸಿ ಪೂಜಾದಿಗಳನ್ನು ಸಲ್ಲಿಸಿದ ತರುವಾಯ ವಾದ್ಯಗಳ ಸಮೇತ ಪಲ್ಲಕ್ಕಿಯನ್ನು ಪ್ರಮುಖ ಬೀದಿಗಳಲ್ಲಿ ಹಲವು ಜಾನಪದ ಕಲಾ ತಂಡಗಳಾದ ಸಮಾಳ, ಮೋಜಿನ ಗೊಂಬೆ, ಹಲಗೆ ಮಜಲು, ಮಹಿಳಾ ಡೊಳ್ಳು ಕುಣಿತ, ಮಹಿಳಾ ವೀರಾಗಾಸೆ, ಕೋಲಾಟ, ಕರಡಿ ಮಜಲು, ಸಮಾಳ, ನಂದಿಕೋಲು, ಹಗಲು ವೇಷ, ಜಾಂಜ್ ಮೇಳ, ಚಿಟ್ಟಿ ಮೇಳದ ಮೂಲಕಗವಿಮಠಕ್ಕೆ ತರುವುದು ಸಂಪ್ರದಾಯ.</p>.<p>ಗವಿಮಠದಲ್ಲಿ ಅನ್ನಪೂರ್ಣೇಶ್ವರಿ ದೇವಿಗೆ ಉಡಿತುಂಬುವ ಕಾರ್ಯಕ್ರಮವು ಜರುಗಿತು.</p>.<p>ಹಲಗೇರಿ ಗ್ರಾಮದ ವೀರನಗೌಡ ಪಾಟೀಲ ಮನೆಯಿಂದ ರಥದ ಮೇಲಿನ ಕಳಸತರುವ ಕಾರ್ಯಕ್ರಮ ನಡೆಯಿತು.</p>.<p><strong>ಇಂದು ಲಘುರಥೋತ್ಸವ</strong></p>.<p>ಜ.12ರಂದು ನಡೆಯುವ ಮಹಾರಥೋತ್ಸವದ ಮುಂಚೆ ನಡೆಯುವ ಲಘುರಥೋತ್ಸವ (ಉಚ್ಚಾಯ) ಎಳೆಯುವ ಕಾರ್ಯಕ್ರಮ ಜ.11ರಂದು ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>