<p>ಗುಳೇದಗುಡ್ಡ: ‘ಸಮಾಜ ಸುಧಾರಕರ, ಮಹಾತ್ಮರ ಚಿಂತನೆ, ಆದರ್ಶಗಳನ್ನುಬದುಕಿನಲ್ಲಿ ಅಳವಡಿಸಿಕೊಳ್ಳಿ’ ಎಂದು ಕಮತಗಿ ಹುಚ್ಚೇಶ್ವರ ಸಂಸ್ಥಾನ ಮಠದ ಹೊಳೆ ಹುಚ್ಚೇಶ್ವರ ಶ್ರೀಗಳು ಹೇಳಿದರು.</p>.<p>ಪಟ್ಟಣದ ಕಾಡಸಿದ್ಧೇಶ್ವರ ಮಠದಲ್ಲಿ ಮೌನಯೋಗಿಯ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಜರುಗಿದ ಜೀವನ ದರ್ಶನ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮನುಷ್ಯ ಸಂಘಜೀವಿ ಆಗಬೇಕು, ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು. ಭಗವಂತನ ಧ್ಯಾನ ಮಾಡಬೇಕು. ಆದರ್ಶರಾಗಬೇಕು’ ಎಂದು ತಿಳಿಸಿದರು.</p>.<p>ಅಭಿನವ ಕಾಡಸಿದ್ಧೇಶ್ವರ ಶ್ರೀಗಳು ಮಾತನಾಡಿ, ‘ಹಿರಿಯ ಪೂಜ್ಯರು ನಡೆದಾಡುವ ದೇವರಾಗಿದ್ದರು. ಧರ್ಮದಂತೆ ನಡೆದು ಭಕ್ತರಿಗೆ ಸಂಸ್ಕಾರ, ಸಂಸ್ಕೃತಿ ಕಲಿಸಿದ್ದಾರೆ. ಅವರ ಆಲೋಚನೆಗಳನ್ನು ನಾವು ರೂಢಿಸಿಕೊಳ್ಳಬೇಕು’ ಎಂದರು.</p>.<p>ದುಮ್ಮವಾಡದ ಸರ್ಫಭೂಷಣ ದೇವರು ಮಾತನಾಡಿ, ‘ಸದಾಚಾರ ಬೆಳೆಸಿಕೊಳ್ಳಬೇಕು. ಎಲ್ಲರೂ ಒಂದೇ ಎನ್ನುವ ಮನೋಧರ್ಮ ಹೊಂದಬೇಕು’ ಎಂದು ತಿಳಿಸಿದರು.</p>.<p>ರುದ್ರಮುನಿ ದೇವರು ಮಾತನಾಡಿದರು. ಪ್ರಕಾಶ ಅಂಕದ, ಚಿನ್ನು ಬಾರಾಟಕ್ಕೆ, ಮಲ್ಲಿಕಾರ್ಜುನ ಹಿರೇಮಠ, ಸಂಗಪ್ಪ ಜವಳಿ, ಮುತ್ತಣ್ಣ ದೇವರಮನಿ, ಭೀಮಪ್ಪ ಹಳ್ಳಿಗೋಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-19-102307287</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಳೇದಗುಡ್ಡ: ‘ಸಮಾಜ ಸುಧಾರಕರ, ಮಹಾತ್ಮರ ಚಿಂತನೆ, ಆದರ್ಶಗಳನ್ನುಬದುಕಿನಲ್ಲಿ ಅಳವಡಿಸಿಕೊಳ್ಳಿ’ ಎಂದು ಕಮತಗಿ ಹುಚ್ಚೇಶ್ವರ ಸಂಸ್ಥಾನ ಮಠದ ಹೊಳೆ ಹುಚ್ಚೇಶ್ವರ ಶ್ರೀಗಳು ಹೇಳಿದರು.</p>.<p>ಪಟ್ಟಣದ ಕಾಡಸಿದ್ಧೇಶ್ವರ ಮಠದಲ್ಲಿ ಮೌನಯೋಗಿಯ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಜರುಗಿದ ಜೀವನ ದರ್ಶನ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮನುಷ್ಯ ಸಂಘಜೀವಿ ಆಗಬೇಕು, ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು. ಭಗವಂತನ ಧ್ಯಾನ ಮಾಡಬೇಕು. ಆದರ್ಶರಾಗಬೇಕು’ ಎಂದು ತಿಳಿಸಿದರು.</p>.<p>ಅಭಿನವ ಕಾಡಸಿದ್ಧೇಶ್ವರ ಶ್ರೀಗಳು ಮಾತನಾಡಿ, ‘ಹಿರಿಯ ಪೂಜ್ಯರು ನಡೆದಾಡುವ ದೇವರಾಗಿದ್ದರು. ಧರ್ಮದಂತೆ ನಡೆದು ಭಕ್ತರಿಗೆ ಸಂಸ್ಕಾರ, ಸಂಸ್ಕೃತಿ ಕಲಿಸಿದ್ದಾರೆ. ಅವರ ಆಲೋಚನೆಗಳನ್ನು ನಾವು ರೂಢಿಸಿಕೊಳ್ಳಬೇಕು’ ಎಂದರು.</p>.<p>ದುಮ್ಮವಾಡದ ಸರ್ಫಭೂಷಣ ದೇವರು ಮಾತನಾಡಿ, ‘ಸದಾಚಾರ ಬೆಳೆಸಿಕೊಳ್ಳಬೇಕು. ಎಲ್ಲರೂ ಒಂದೇ ಎನ್ನುವ ಮನೋಧರ್ಮ ಹೊಂದಬೇಕು’ ಎಂದು ತಿಳಿಸಿದರು.</p>.<p>ರುದ್ರಮುನಿ ದೇವರು ಮಾತನಾಡಿದರು. ಪ್ರಕಾಶ ಅಂಕದ, ಚಿನ್ನು ಬಾರಾಟಕ್ಕೆ, ಮಲ್ಲಿಕಾರ್ಜುನ ಹಿರೇಮಠ, ಸಂಗಪ್ಪ ಜವಳಿ, ಮುತ್ತಣ್ಣ ದೇವರಮನಿ, ಭೀಮಪ್ಪ ಹಳ್ಳಿಗೋಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-19-102307287</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>