<p>ಹಾನಗಲ್: ‘ಸಮ ಸಮಾಜಕ್ಕಾಗಿ ದೇಶದ ನಾಲ್ಕು ಭಾಗಗಳಲ್ಲಿ ಸಂಚರಿಸಿದ ಶಂಕರಾಚಾರ್ಯರು ವೇದಗಳ ನಿಜಾರ್ಥ ಸಾರಿದರು. ಭೇದಭಾವ ಇಲ್ಲದ ಆಧ್ಯಾತ್ಮಿಕ ನಾಯಕರಾಗಿ ಹೊಮ್ಮಿದರು’ ಎಂದು ತಹಶೀಲ್ದಾರ್ ರೇಣುಕಾ ಎಸ್ ಹೇಳಿದರು.</p>.<p>ಇಲ್ಲಿನ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವೈಚಾರಿಕತೆ, ಧರ್ಮದ ಹೆಸರಿನಲ್ಲಿ ವೇದಗಳ ಸರಳೀಕರಣ ಮೂಲಕ ಆಚಾರ್ಯರು ಜನಮಾನಸದಲ್ಲಿ ಅಜರಾಮರರಾಗಿದ್ದಾರೆ’ ಎಂದರು.</p>.<p>ವೇ.ಮೂ.ಗಂಗಾಧರಶಾಸ್ತ್ರೀ ಕಾಶೀಕರ ಮಾತನಾಡಿ, ಧರ್ಮ ಜಾಗೃತಿಗಾಗಿ ಶಂಕರಾಚಾರ್ಯರು ಸಂಚಾರ ಕೈಗೊಂಡ ಪರಿಣಾಮ ಸನಾತನ ಧರ್ಮ ಬೆಳೆದು ಬಂದಿತು ಎಂದರು.</p>.<p>ಶಂಕರ ಸೇವಾ ಸಮಿತಿ ಅಧ್ಯಕ್ಷ ರವಿ ದೇಶಪಾಂಡೆ, ಬ್ರಾಹ್ಮಣ ಮಹಾಸಭಾ ತಾಲ್ಲೂಕು ಘಟಕದ ಕಾರ್ಯದರ್ಶಿ ರವಿ ಪೋತದಾರ, ಗಣ್ಯರಾದ ಘನಶಾಮ್ ದೇಶಪಾಂಡೆ, ಮನೋಜ್ ಸರಾಫ, ಪಾರ್ವತಿಬಾಯಿ ಕಾಶೀಕರ, ವಿದ್ಯಾ ಕಾಶೀಕರ, ಪಾಂಡುರಂಗ ಪಾರಗಾವಕರ, ಎಚ್.ಬಿ.ದೇಸಾಯಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-22-360582347</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್: ‘ಸಮ ಸಮಾಜಕ್ಕಾಗಿ ದೇಶದ ನಾಲ್ಕು ಭಾಗಗಳಲ್ಲಿ ಸಂಚರಿಸಿದ ಶಂಕರಾಚಾರ್ಯರು ವೇದಗಳ ನಿಜಾರ್ಥ ಸಾರಿದರು. ಭೇದಭಾವ ಇಲ್ಲದ ಆಧ್ಯಾತ್ಮಿಕ ನಾಯಕರಾಗಿ ಹೊಮ್ಮಿದರು’ ಎಂದು ತಹಶೀಲ್ದಾರ್ ರೇಣುಕಾ ಎಸ್ ಹೇಳಿದರು.</p>.<p>ಇಲ್ಲಿನ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವೈಚಾರಿಕತೆ, ಧರ್ಮದ ಹೆಸರಿನಲ್ಲಿ ವೇದಗಳ ಸರಳೀಕರಣ ಮೂಲಕ ಆಚಾರ್ಯರು ಜನಮಾನಸದಲ್ಲಿ ಅಜರಾಮರರಾಗಿದ್ದಾರೆ’ ಎಂದರು.</p>.<p>ವೇ.ಮೂ.ಗಂಗಾಧರಶಾಸ್ತ್ರೀ ಕಾಶೀಕರ ಮಾತನಾಡಿ, ಧರ್ಮ ಜಾಗೃತಿಗಾಗಿ ಶಂಕರಾಚಾರ್ಯರು ಸಂಚಾರ ಕೈಗೊಂಡ ಪರಿಣಾಮ ಸನಾತನ ಧರ್ಮ ಬೆಳೆದು ಬಂದಿತು ಎಂದರು.</p>.<p>ಶಂಕರ ಸೇವಾ ಸಮಿತಿ ಅಧ್ಯಕ್ಷ ರವಿ ದೇಶಪಾಂಡೆ, ಬ್ರಾಹ್ಮಣ ಮಹಾಸಭಾ ತಾಲ್ಲೂಕು ಘಟಕದ ಕಾರ್ಯದರ್ಶಿ ರವಿ ಪೋತದಾರ, ಗಣ್ಯರಾದ ಘನಶಾಮ್ ದೇಶಪಾಂಡೆ, ಮನೋಜ್ ಸರಾಫ, ಪಾರ್ವತಿಬಾಯಿ ಕಾಶೀಕರ, ವಿದ್ಯಾ ಕಾಶೀಕರ, ಪಾಂಡುರಂಗ ಪಾರಗಾವಕರ, ಎಚ್.ಬಿ.ದೇಸಾಯಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-22-360582347</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>