<p>ಹೊನ್ನಾಳಿ: ‘ಬಸವಣ್ಣನವರು ನಡೆ–ನುಡಿಗಳಲ್ಲಿ ಒಂದಾಗಿ ಬಾಳಿದ ಯುಗಪುರುಷ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಜಿ. ಧನಂಜಯ ಹೇಳಿದರು.</p>.<p>ಸೋಮವಾರ ಕಾಲೇಜಿನಲ್ಲಿ ನಡೆದ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ತಳಸಮುದಾಯಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಶೂದ್ರರೂ ದೈವತ್ವಕ್ಕೇರಬಹುದು ಎಂಬುದನ್ನು ಬಸವಣ್ಣನವರು ಸಾಧಿಸಿ ತೋರಿಸಿದರು ಎಂದರು.</p>.<p>ಬಸವಣ್ಣನವರು ಶ್ರಮ ಸಂಸ್ಕೃತಿಯ ಹರಿಕಾರರಾಗಿದ್ದರು. ತಮ್ಮ ವ್ಯಕ್ತಿತ್ವದ ವಿಕಾಸದೊಂದಿಗೆ ಜನಸಮೂಹದ ವಿಕಾಸವನ್ನೂ ಸಾಧ್ಯ ಮಾಡಿದರು. ಈ ಮೂಲಕ ಅವರು ಸ್ಥಾಪಿಸಿದ ಅನುಭವ ಮಂಟಪವು ಮುಕ್ತ ವಿಶ್ವವಿದ್ಯಾಲಯದಂತೆ ಕಾರ್ಯನಿರ್ವಹಿಸುತ್ತಿತ್ತು ಎಂದು ತಿಳಿಸಿದರು.</p>.<p>ಉಪನ್ಯಾಸಕ ಇರ್ಫಾನ್ ಬಾಷಾ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಹರಾಳು ಮಹಾಬಲೇಶ್ವರ ಸ್ವಾಗತಿಸಿದರು. ದೊಡ್ಡಪ್ಪ ವಂದಿಸಿದರು. ಪ್ರೊ. ಗೋವಿಂದಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-43-2101625640</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ‘ಬಸವಣ್ಣನವರು ನಡೆ–ನುಡಿಗಳಲ್ಲಿ ಒಂದಾಗಿ ಬಾಳಿದ ಯುಗಪುರುಷ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಜಿ. ಧನಂಜಯ ಹೇಳಿದರು.</p>.<p>ಸೋಮವಾರ ಕಾಲೇಜಿನಲ್ಲಿ ನಡೆದ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ತಳಸಮುದಾಯಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಶೂದ್ರರೂ ದೈವತ್ವಕ್ಕೇರಬಹುದು ಎಂಬುದನ್ನು ಬಸವಣ್ಣನವರು ಸಾಧಿಸಿ ತೋರಿಸಿದರು ಎಂದರು.</p>.<p>ಬಸವಣ್ಣನವರು ಶ್ರಮ ಸಂಸ್ಕೃತಿಯ ಹರಿಕಾರರಾಗಿದ್ದರು. ತಮ್ಮ ವ್ಯಕ್ತಿತ್ವದ ವಿಕಾಸದೊಂದಿಗೆ ಜನಸಮೂಹದ ವಿಕಾಸವನ್ನೂ ಸಾಧ್ಯ ಮಾಡಿದರು. ಈ ಮೂಲಕ ಅವರು ಸ್ಥಾಪಿಸಿದ ಅನುಭವ ಮಂಟಪವು ಮುಕ್ತ ವಿಶ್ವವಿದ್ಯಾಲಯದಂತೆ ಕಾರ್ಯನಿರ್ವಹಿಸುತ್ತಿತ್ತು ಎಂದು ತಿಳಿಸಿದರು.</p>.<p>ಉಪನ್ಯಾಸಕ ಇರ್ಫಾನ್ ಬಾಷಾ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಹರಾಳು ಮಹಾಬಲೇಶ್ವರ ಸ್ವಾಗತಿಸಿದರು. ದೊಡ್ಡಪ್ಪ ವಂದಿಸಿದರು. ಪ್ರೊ. ಗೋವಿಂದಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-43-2101625640</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>