<p>ಹೊಸದುರ್ಗ: ಶರಣರ ವಚನಗಳು ಹಾಗೂ ಸಂವಿಧಾನದ ಆಶಯದಂತೆ 28 ವರ್ಷಗಳಿಂದ ಮಠದಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಿದ್ದು, ಈವರೆಗೂ 132 ಅಂತರ್ಜಾತಿ ವಿವಾಹಗಳಿಗೆ ಮಠ ಸಾಕ್ಷಿಯಾಗಿದೆ ಎಂದು ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು.</p>.<p>ಮಠದಲ್ಲಿ ತಾಲ್ಲೂಕಿನ ಹುಲೇನಹಳ್ಳಿ ಗ್ರಾಮದ ಕುಂಚಿಟಿಗ ಸಮಾಜದ ವರ ರಂಗನಾಥ ಹಾಗೂ ಹೊಸದುರ್ಗ ಪಟ್ಟಣದ ಭೋವಿ ಸಮಾಜದ ವಧು ನಂದಿನಿ ಅವರಿಗೆ ಶನಿವಾರ ಲಿಂಗ ದೀಕ್ಷೆ ನೀಡಿ ಮಾತನಾಡಿದರು.</p>.<p>‘ಪರಸ್ಪರ ಪ್ರೀತಿಸುತ್ತಿರುವ ರಂಗನಾಥ–ನಂದಿನಿ ಜೋಡಿ ಏಪ್ರಿಲ್ 9ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದೆ. ಅಂತರ್ ಧರ್ಮೀಯ ಮತ್ತು ಅಂತರ್ಜಾತಿ ವಿವಾಹಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಹಾಗೂ ಜಾತ್ಯತೀತ ಸಮಾಜ ನಿರ್ಮಾಣ ಮಾಡಲು ಇವು ಸಹಾಯ ಮಾಡುತ್ತವೆ ಎಂದರು.</p>.<p>‘ಮಠ ಯಾವುದನ್ನೂ ಒತ್ತಾಯ ಪೂರ್ವಕವಾಗಿ ಹೇರುವುದಿಲ್ಲ. ಸ್ವಯಂ ಪ್ರೇರಣೆಯಿಂದ ಬಂದವರಿಗೆ ದಾರಿ ತೋರುತ್ತದೆ. ಮಾತಿನಲ್ಲಿ, ಲೇಖನಗಳಲ್ಲಿ ಜಾತ್ಯತೀತತೆ ಬಗ್ಗೆ ಮಾತನಾಡುವ ಜಾಣರು ಅವಕಾಶ ಬಂದಾಗ ತಾವಷ್ಟೇ ಬೆಳೆಯುವ ಆಲೋಚನೆ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-44-1488521995</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ಶರಣರ ವಚನಗಳು ಹಾಗೂ ಸಂವಿಧಾನದ ಆಶಯದಂತೆ 28 ವರ್ಷಗಳಿಂದ ಮಠದಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಿದ್ದು, ಈವರೆಗೂ 132 ಅಂತರ್ಜಾತಿ ವಿವಾಹಗಳಿಗೆ ಮಠ ಸಾಕ್ಷಿಯಾಗಿದೆ ಎಂದು ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು.</p>.<p>ಮಠದಲ್ಲಿ ತಾಲ್ಲೂಕಿನ ಹುಲೇನಹಳ್ಳಿ ಗ್ರಾಮದ ಕುಂಚಿಟಿಗ ಸಮಾಜದ ವರ ರಂಗನಾಥ ಹಾಗೂ ಹೊಸದುರ್ಗ ಪಟ್ಟಣದ ಭೋವಿ ಸಮಾಜದ ವಧು ನಂದಿನಿ ಅವರಿಗೆ ಶನಿವಾರ ಲಿಂಗ ದೀಕ್ಷೆ ನೀಡಿ ಮಾತನಾಡಿದರು.</p>.<p>‘ಪರಸ್ಪರ ಪ್ರೀತಿಸುತ್ತಿರುವ ರಂಗನಾಥ–ನಂದಿನಿ ಜೋಡಿ ಏಪ್ರಿಲ್ 9ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದೆ. ಅಂತರ್ ಧರ್ಮೀಯ ಮತ್ತು ಅಂತರ್ಜಾತಿ ವಿವಾಹಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಹಾಗೂ ಜಾತ್ಯತೀತ ಸಮಾಜ ನಿರ್ಮಾಣ ಮಾಡಲು ಇವು ಸಹಾಯ ಮಾಡುತ್ತವೆ ಎಂದರು.</p>.<p>‘ಮಠ ಯಾವುದನ್ನೂ ಒತ್ತಾಯ ಪೂರ್ವಕವಾಗಿ ಹೇರುವುದಿಲ್ಲ. ಸ್ವಯಂ ಪ್ರೇರಣೆಯಿಂದ ಬಂದವರಿಗೆ ದಾರಿ ತೋರುತ್ತದೆ. ಮಾತಿನಲ್ಲಿ, ಲೇಖನಗಳಲ್ಲಿ ಜಾತ್ಯತೀತತೆ ಬಗ್ಗೆ ಮಾತನಾಡುವ ಜಾಣರು ಅವಕಾಶ ಬಂದಾಗ ತಾವಷ್ಟೇ ಬೆಳೆಯುವ ಆಲೋಚನೆ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-44-1488521995</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>