<p>ಹುಬ್ಬಳ್ಳಿ: ‘ಸಮಾಜ ಲೌಕಿಕ ಹಾಗೂ ಬೌದ್ಧಿಕವಾಗಿ ಮುಂದೆ ಬರಬೇಕು. ಅದಕ್ಕೆ ಶಿಕ್ಷಣ ಬಹಳ ಅವಶ್ಯ’ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ವಾದಿರಾಜ ಸೇವಾ ಪ್ರತಿಷ್ಠಾನ, ಅಖಿಲ ಭಾರತ ಮಾಧ್ವ ಮಹಾ ಮಂಡಳ ವಿದ್ಯಾರ್ಥಿ ನಿಲಯದ ಷಷ್ಠಿಪೂರ್ತಿ ಮಹೋತ್ಸವ ಹಾಗೂ ನವೀಕೃತ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ, ಮಾತನಾಡಿದರು.</p>.<p>‘ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಶುದ್ಧ ಆಹಾರ ನೀಡುವ ಉದ್ದೇಶದಿಂದ ಇಲ್ಲಿಯ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಭೂಮಿ ದಾನ ಮಾಡಿದರು. ಸಮಾನ ಮನಸ್ಕರನ್ನು ಕೂಡಿಸಿ ನಮ್ಮ ಗುರುಗಳು ವಿದ್ಯಾರ್ಥಿ ನಿಲಯ ಆರಂಭಕ್ಕೆ ಕಾರಣರಾದರು’ ಎಂದರು.</p>.<p>‘ನಿಲಯದ ಹಳೇ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಈ ಸಂಸ್ಥೆಯನ್ನು ಬೆಳೆಸುತ್ತಿದ್ದಾರೆ. ಕೆಲವರು ದಾನ ನೀಡಲು ಸಾಧ್ಯ. ಇನ್ನೂ ಕೆಲವರಿಗೆ ದಾನ ಕೊಡಿಸಲು ಸಾಧ್ಯ’ ಎಂದು ಹೇಳಿದರು.</p>.<p>ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ‘ಹಿಂದು ಸಮಾಜ ಕಟ್ಟಿ ಬೆಳೆಸಿದ ವಿಶ್ವೇಶ್ವರ ಶ್ರೀಗಳು ವಿದ್ಯಾರ್ಥಿ ನಿಲಯ ಕಟ್ಟಿದರು. ಹಿಂದು ಸಮಾಜದ ಉಳಿವಿಗೆ ಇಂತಹ ವಿದ್ಯಾರ್ಥಿ ನಿಲಯ ಹಾಗೂ ಕಾಲೇಜಗಳ ಅವಶ್ಯಕತೆ ಇದೆ’ ಎಂದು ತಿಳಿಸಿದರು.</p>.<p>‘ಎಲ್ಲ ಸಮಾಜ, ಮಠ ಒಗ್ಗೂಡಿಸಿದ್ದು ಮಾಧ್ವ ಮಹಾಮಂಡಳ. ವಿದ್ಯೆಯ ಮಹತ್ವ ಹೇಳುವಾಗ ಸುಖ ಕೊನೆಯ ಹಂತ. ವಿನಯ ಮೊದಲ ಹಂತ. ಅಖಿಲ ಭಾರತ ಮಾಧ್ವ ಮಹಾಮಂಡಳದ ಅನೇಕ ಸಂಸ್ಥೆಗಳು ಹಲವೆಡೆ ಇವೆ’ ಎಂದು ಹೇಳಿದರು.</p>.<p>ಸಮಾರಂಭಕ್ಕೆ ಮೊದಲು ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ ಮೆರವಣಿಗೆ ನಡೆಯಿತು.</p>.<p>ಅನಂತ ಪದ್ಮನಾಭ ಐತಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕಾಂತ ಕೆಮತೂರ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1030741763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಸಮಾಜ ಲೌಕಿಕ ಹಾಗೂ ಬೌದ್ಧಿಕವಾಗಿ ಮುಂದೆ ಬರಬೇಕು. ಅದಕ್ಕೆ ಶಿಕ್ಷಣ ಬಹಳ ಅವಶ್ಯ’ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ವಾದಿರಾಜ ಸೇವಾ ಪ್ರತಿಷ್ಠಾನ, ಅಖಿಲ ಭಾರತ ಮಾಧ್ವ ಮಹಾ ಮಂಡಳ ವಿದ್ಯಾರ್ಥಿ ನಿಲಯದ ಷಷ್ಠಿಪೂರ್ತಿ ಮಹೋತ್ಸವ ಹಾಗೂ ನವೀಕೃತ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ, ಮಾತನಾಡಿದರು.</p>.<p>‘ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಶುದ್ಧ ಆಹಾರ ನೀಡುವ ಉದ್ದೇಶದಿಂದ ಇಲ್ಲಿಯ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಭೂಮಿ ದಾನ ಮಾಡಿದರು. ಸಮಾನ ಮನಸ್ಕರನ್ನು ಕೂಡಿಸಿ ನಮ್ಮ ಗುರುಗಳು ವಿದ್ಯಾರ್ಥಿ ನಿಲಯ ಆರಂಭಕ್ಕೆ ಕಾರಣರಾದರು’ ಎಂದರು.</p>.<p>‘ನಿಲಯದ ಹಳೇ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಈ ಸಂಸ್ಥೆಯನ್ನು ಬೆಳೆಸುತ್ತಿದ್ದಾರೆ. ಕೆಲವರು ದಾನ ನೀಡಲು ಸಾಧ್ಯ. ಇನ್ನೂ ಕೆಲವರಿಗೆ ದಾನ ಕೊಡಿಸಲು ಸಾಧ್ಯ’ ಎಂದು ಹೇಳಿದರು.</p>.<p>ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ‘ಹಿಂದು ಸಮಾಜ ಕಟ್ಟಿ ಬೆಳೆಸಿದ ವಿಶ್ವೇಶ್ವರ ಶ್ರೀಗಳು ವಿದ್ಯಾರ್ಥಿ ನಿಲಯ ಕಟ್ಟಿದರು. ಹಿಂದು ಸಮಾಜದ ಉಳಿವಿಗೆ ಇಂತಹ ವಿದ್ಯಾರ್ಥಿ ನಿಲಯ ಹಾಗೂ ಕಾಲೇಜಗಳ ಅವಶ್ಯಕತೆ ಇದೆ’ ಎಂದು ತಿಳಿಸಿದರು.</p>.<p>‘ಎಲ್ಲ ಸಮಾಜ, ಮಠ ಒಗ್ಗೂಡಿಸಿದ್ದು ಮಾಧ್ವ ಮಹಾಮಂಡಳ. ವಿದ್ಯೆಯ ಮಹತ್ವ ಹೇಳುವಾಗ ಸುಖ ಕೊನೆಯ ಹಂತ. ವಿನಯ ಮೊದಲ ಹಂತ. ಅಖಿಲ ಭಾರತ ಮಾಧ್ವ ಮಹಾಮಂಡಳದ ಅನೇಕ ಸಂಸ್ಥೆಗಳು ಹಲವೆಡೆ ಇವೆ’ ಎಂದು ಹೇಳಿದರು.</p>.<p>ಸಮಾರಂಭಕ್ಕೆ ಮೊದಲು ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ ಮೆರವಣಿಗೆ ನಡೆಯಿತು.</p>.<p>ಅನಂತ ಪದ್ಮನಾಭ ಐತಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕಾಂತ ಕೆಮತೂರ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-24-1030741763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>