<p>ಹುಲಸೂರ: ‘ಮನುಕುಲದ ಮುಕುಟಮಣಿ ಜಗನ್ಮಾತೆ ಅಕ್ಕಮಹಾದೇವಿ ತಾಯಿ ಸಾವಿಲ್ಲದ, ಕೇಡಿಲ್ಲದ, ರೋಗವಿಲ್ಲದ ಪರಮಾತ್ಮನನ್ನೇ ಪತಿಯಾಗಿ ಪಡೆದ ಮಹಾನ್ ಶರಣೆ’ ಎಂದು ಪ್ರಭುದೇವ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಗೋರಟಾ (ಬಿ) ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಏಪ್ರಿಲ್ 1 ಮತ್ತು 2ರಂದು ನಡೆಯಲಿರುವ ಜಗನ್ಮಾತೆ ಅಕ್ಕಮಹಾದೇವಿ ಜಯಂತ್ಯುತ್ಸವ ನಿಮಿತ್ತ ಹಮ್ಮಿಕೊಂಡಿರುವ ಒಂದು ವಾರದ ‘ಅಕ್ಕನ ದರ್ಶನ’ ಪ್ರವಚನ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶರಣರನ್ನು ಕಾಣುವ ತವಕದಿಂದ ಕಲ್ಯಾಣಕ್ಕೆ ತೆರಳಿ ಬಸವಣ್ಣನವರ ಅಚ್ಚುಮೆಚ್ಚಿನ ಮಗಳಾಗಿ ಬೆಳೆದ ಅಕ್ಕಮಹಾದೇವಿ, ಅನುಭವ ಮಂಟಪದಲ್ಲಿ ಅಲ್ಲಮ ಪ್ರಭುದೇವರು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಮೂಲಕ ತನ್ನ ಆತ್ಮಜ್ಞಾನ ಮತ್ತು ಲೋಕಚಿಂತನೆಯ ಪಕ್ವತೆಯನ್ನು ತೋರಿದರು’ ಎಂದು ತಿಳಿಸಿದರು.</p>.<p>ಪ್ರವಚನಕಾರ ಶಿವಕುಮಾರ ಮಾಶೆಟ್ಟಿ ಮಾತನಾಡಿದರು.</p>.<p>ಕಾರ್ಯಕ್ರಮವನ್ನು ಬಸವಣ್ಣೆಪ್ಪ ಚಿಕೂರತೆ ಉದ್ಘಾಟಿಸಿದರು. ರಂಗಮ್ಮ ಭೂರೆ ಅಧ್ಯಕ್ಷತೆ ವಹಿಸಿದ್ದರು.</p>.<p>ಈ ಸಂದರ್ಭದಲ್ಲಿ ನೀಲಮ್ಮ ಬಳಗದ ಅಧ್ಯಕ್ಷೆ ವಿಜಯಲಕ್ಷ್ಮೀ ರಾಜೋಳೆ, ಚೆನ್ನಬಸಪ್ಪ ಪತಂಗೆ, ಚಂದ್ರಕಾಂತ ಕಣಜೆ, ಬಾಬುರಾವ ರಾಜೋಳೆ, ಸುಭಾಷ ಪತಂಗೆ, ಲಿಂಗಾಯತ ಸೇವಾದಳದ ಅಧ್ಯಕ್ಷ ಸುಪ್ರೀತ ಪತಂಗೆ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-33-2130461016</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ‘ಮನುಕುಲದ ಮುಕುಟಮಣಿ ಜಗನ್ಮಾತೆ ಅಕ್ಕಮಹಾದೇವಿ ತಾಯಿ ಸಾವಿಲ್ಲದ, ಕೇಡಿಲ್ಲದ, ರೋಗವಿಲ್ಲದ ಪರಮಾತ್ಮನನ್ನೇ ಪತಿಯಾಗಿ ಪಡೆದ ಮಹಾನ್ ಶರಣೆ’ ಎಂದು ಪ್ರಭುದೇವ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಗೋರಟಾ (ಬಿ) ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಏಪ್ರಿಲ್ 1 ಮತ್ತು 2ರಂದು ನಡೆಯಲಿರುವ ಜಗನ್ಮಾತೆ ಅಕ್ಕಮಹಾದೇವಿ ಜಯಂತ್ಯುತ್ಸವ ನಿಮಿತ್ತ ಹಮ್ಮಿಕೊಂಡಿರುವ ಒಂದು ವಾರದ ‘ಅಕ್ಕನ ದರ್ಶನ’ ಪ್ರವಚನ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶರಣರನ್ನು ಕಾಣುವ ತವಕದಿಂದ ಕಲ್ಯಾಣಕ್ಕೆ ತೆರಳಿ ಬಸವಣ್ಣನವರ ಅಚ್ಚುಮೆಚ್ಚಿನ ಮಗಳಾಗಿ ಬೆಳೆದ ಅಕ್ಕಮಹಾದೇವಿ, ಅನುಭವ ಮಂಟಪದಲ್ಲಿ ಅಲ್ಲಮ ಪ್ರಭುದೇವರು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಮೂಲಕ ತನ್ನ ಆತ್ಮಜ್ಞಾನ ಮತ್ತು ಲೋಕಚಿಂತನೆಯ ಪಕ್ವತೆಯನ್ನು ತೋರಿದರು’ ಎಂದು ತಿಳಿಸಿದರು.</p>.<p>ಪ್ರವಚನಕಾರ ಶಿವಕುಮಾರ ಮಾಶೆಟ್ಟಿ ಮಾತನಾಡಿದರು.</p>.<p>ಕಾರ್ಯಕ್ರಮವನ್ನು ಬಸವಣ್ಣೆಪ್ಪ ಚಿಕೂರತೆ ಉದ್ಘಾಟಿಸಿದರು. ರಂಗಮ್ಮ ಭೂರೆ ಅಧ್ಯಕ್ಷತೆ ವಹಿಸಿದ್ದರು.</p>.<p>ಈ ಸಂದರ್ಭದಲ್ಲಿ ನೀಲಮ್ಮ ಬಳಗದ ಅಧ್ಯಕ್ಷೆ ವಿಜಯಲಕ್ಷ್ಮೀ ರಾಜೋಳೆ, ಚೆನ್ನಬಸಪ್ಪ ಪತಂಗೆ, ಚಂದ್ರಕಾಂತ ಕಣಜೆ, ಬಾಬುರಾವ ರಾಜೋಳೆ, ಸುಭಾಷ ಪತಂಗೆ, ಲಿಂಗಾಯತ ಸೇವಾದಳದ ಅಧ್ಯಕ್ಷ ಸುಪ್ರೀತ ಪತಂಗೆ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-33-2130461016</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>