<p>ಹುಣಸೂರು: ‘ಜೀವನದಲ್ಲಿ ಗಳಿಸಿದ ಆದಾಯದಲ್ಲಿ ಧಾರ್ಮಿಕ ಕೆಲಸ ಕಾರ್ಯಗಳಿಗೆ ಅಲ್ಪ ಪ್ರಮಾಣವನ್ನು ವಿನಿಯೋಗಿಸುವುದರಿಂದ ಧರ್ಮ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಸಹಕಾರಿಯಾಗಲಿದೆ’ ಎಂದು ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಬಿಳಿಕೆರೆ ಹೋಬಳಿ ಬೋಳನಹಳ್ಳಿ ಗ್ರಾಮದ ಮಾಳಿಗೇಶ್ವರಿ ದೇವಸ್ಥಾನದಲ್ಲಿ 12ನೇ ವಾರ್ಷಿಕೋತ್ಸವದ ಅಂಗವಾಗಿ ನೂತನವಾಗಿ ನಿರ್ಮಿಸಿದ ಸಪ್ತಪದಿ ಮಂದಿರಕ್ಕೆ ಚಾಲನೆ ನೀಡಿದ ಬಳಿಕ ಧಾರ್ಮಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.</p>.<p>‘ಮನುಷ್ಯನಲ್ಲಿ ಆಸೆ ಹೆಮ್ಮರವಾಗಿ ಬೆಳೆಯದೆ ತನ್ನ ವೃತ್ತಿ ಜೀವನದಲ್ಲಿ ಸಂಪಾದಿಸಿದ ಹಣದಿಂದ ಇಂತಿಷ್ಟು ಪ್ರಮಾಣ ಸಾರ್ವಜನಿಕರ ಕ್ಷೇಮಾಭಿವೃದ್ಧಿಗೆ ಅಥವಾ ಧಾರ್ಮಿಕ ಸಂಪ್ರದಾಯವನ್ನು ಮತ್ತಷ್ಟು ಗಟ್ಟಿಗೊಳಿಸಿ ಭವಿಷ್ಯದ ಕುಡಿಗೆ ತಲಪಿಸಲು ಸಂಪತ್ತು ಬಳಕೆ ಆಗುವುದರಿಂದ ಸನಾತನ ಧರ್ಮ ಜೀವಂತವಾಗಿ ಉಳಿಸಿಕೊಳ್ಳಲು ಸಾಧ್ಯ’ ಎಂದರು.</p>.<p>‘ಪ್ರಪಂಚದಲ್ಲಿ ಎಲ್ಲಾ ರೀತಿಯ ಮನಸ್ಸುಗಳ ಜೊತೆ ನಿತ್ಯ ಜೀವನದ ಬದುಕು ಕಟ್ಟಿಕೊಂಡಿದ್ದೇವೆ. ಆದರೆ ನಾವು ನಾವಾಗಿಯೇ ಉಳಿಯಬೇಕಾದರೆ ನಮ್ಮ ಮನಸ್ಸಿನ ಮೇಲೆ ಹತೋಟಿ ಹೊಂದಿರಬೇಕು. ಹೀಗಾದಲ್ಲಿ ನಾವು ಕಂಡ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರವಾಗಲಿದೆ’ ಎಂದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಧಾರ್ಮಿಕ ಸಂಪತ್ತು ಸಂರಕ್ಷಿಸುವವರ ಸಂಖ್ಯೆ ವಿರಳವಾಗುತ್ತಿದ್ದು, ಈ ದಿನಮಾನದಲ್ಲಿ ತಾವು ಹುಟ್ಟಿ ಬೆಳೆದ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಿರುವ ವಕೀಲ ನಾಗರಾಜ್ ಅವರ ಆಲೋಚನೆ ಮತ್ತಷ್ಟು ಜನರಿಗೆ ಪಸರಿಸಬೇಕು. ಆ ಮೂಲಕ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದಂತಾಗಿ ನಗರಾಭಿವೃದ್ದಿ ಮುಖರಾಗುತ್ತಿರುವ ಯುವಸಮುದಾಯವನ್ನು ಗ್ರಾಮದಲ್ಲೇ ಉಳಿಸಿ ಗ್ರಾಮ ಸಂಪತ್ತು ವೃದ್ಧಿಸಲು ಸಹಕಾರವಾಗಲಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ವಕೀಲ ನಾಗರಾಜ್, ಶಿಕ್ಷಕ ರಾಮಯ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲ ಯೋಗಾನಂದಕುಮಾರ್, ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಮಾಧು, ಹನುಮಂತೋತ್ಸವ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಎನ್.ದಾಸ್ ಹಾಗೂ ಮುಖಂಡರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-38-1211112030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ‘ಜೀವನದಲ್ಲಿ ಗಳಿಸಿದ ಆದಾಯದಲ್ಲಿ ಧಾರ್ಮಿಕ ಕೆಲಸ ಕಾರ್ಯಗಳಿಗೆ ಅಲ್ಪ ಪ್ರಮಾಣವನ್ನು ವಿನಿಯೋಗಿಸುವುದರಿಂದ ಧರ್ಮ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಸಹಕಾರಿಯಾಗಲಿದೆ’ ಎಂದು ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಬಿಳಿಕೆರೆ ಹೋಬಳಿ ಬೋಳನಹಳ್ಳಿ ಗ್ರಾಮದ ಮಾಳಿಗೇಶ್ವರಿ ದೇವಸ್ಥಾನದಲ್ಲಿ 12ನೇ ವಾರ್ಷಿಕೋತ್ಸವದ ಅಂಗವಾಗಿ ನೂತನವಾಗಿ ನಿರ್ಮಿಸಿದ ಸಪ್ತಪದಿ ಮಂದಿರಕ್ಕೆ ಚಾಲನೆ ನೀಡಿದ ಬಳಿಕ ಧಾರ್ಮಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.</p>.<p>‘ಮನುಷ್ಯನಲ್ಲಿ ಆಸೆ ಹೆಮ್ಮರವಾಗಿ ಬೆಳೆಯದೆ ತನ್ನ ವೃತ್ತಿ ಜೀವನದಲ್ಲಿ ಸಂಪಾದಿಸಿದ ಹಣದಿಂದ ಇಂತಿಷ್ಟು ಪ್ರಮಾಣ ಸಾರ್ವಜನಿಕರ ಕ್ಷೇಮಾಭಿವೃದ್ಧಿಗೆ ಅಥವಾ ಧಾರ್ಮಿಕ ಸಂಪ್ರದಾಯವನ್ನು ಮತ್ತಷ್ಟು ಗಟ್ಟಿಗೊಳಿಸಿ ಭವಿಷ್ಯದ ಕುಡಿಗೆ ತಲಪಿಸಲು ಸಂಪತ್ತು ಬಳಕೆ ಆಗುವುದರಿಂದ ಸನಾತನ ಧರ್ಮ ಜೀವಂತವಾಗಿ ಉಳಿಸಿಕೊಳ್ಳಲು ಸಾಧ್ಯ’ ಎಂದರು.</p>.<p>‘ಪ್ರಪಂಚದಲ್ಲಿ ಎಲ್ಲಾ ರೀತಿಯ ಮನಸ್ಸುಗಳ ಜೊತೆ ನಿತ್ಯ ಜೀವನದ ಬದುಕು ಕಟ್ಟಿಕೊಂಡಿದ್ದೇವೆ. ಆದರೆ ನಾವು ನಾವಾಗಿಯೇ ಉಳಿಯಬೇಕಾದರೆ ನಮ್ಮ ಮನಸ್ಸಿನ ಮೇಲೆ ಹತೋಟಿ ಹೊಂದಿರಬೇಕು. ಹೀಗಾದಲ್ಲಿ ನಾವು ಕಂಡ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರವಾಗಲಿದೆ’ ಎಂದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಧಾರ್ಮಿಕ ಸಂಪತ್ತು ಸಂರಕ್ಷಿಸುವವರ ಸಂಖ್ಯೆ ವಿರಳವಾಗುತ್ತಿದ್ದು, ಈ ದಿನಮಾನದಲ್ಲಿ ತಾವು ಹುಟ್ಟಿ ಬೆಳೆದ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಿರುವ ವಕೀಲ ನಾಗರಾಜ್ ಅವರ ಆಲೋಚನೆ ಮತ್ತಷ್ಟು ಜನರಿಗೆ ಪಸರಿಸಬೇಕು. ಆ ಮೂಲಕ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದಂತಾಗಿ ನಗರಾಭಿವೃದ್ದಿ ಮುಖರಾಗುತ್ತಿರುವ ಯುವಸಮುದಾಯವನ್ನು ಗ್ರಾಮದಲ್ಲೇ ಉಳಿಸಿ ಗ್ರಾಮ ಸಂಪತ್ತು ವೃದ್ಧಿಸಲು ಸಹಕಾರವಾಗಲಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ವಕೀಲ ನಾಗರಾಜ್, ಶಿಕ್ಷಕ ರಾಮಯ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲ ಯೋಗಾನಂದಕುಮಾರ್, ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಮಾಧು, ಹನುಮಂತೋತ್ಸವ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಎನ್.ದಾಸ್ ಹಾಗೂ ಮುಖಂಡರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-38-1211112030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>