<p>ಇಂಡಿ : ಸುಖ-ದುಃಖ, ಅಂಬಲಿ-ಅಮೃತ, ಶತ್ರು-ಮಿತ್ರ, ಸ್ತುತಿ-ನಿಂದನೆ ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿದ ಹೇಮರಡ್ಡಿ ಮಲ್ಲಮ್ಮನ ಬದುಕು ಇಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.</p>.<p>ಭಾನುವಾರ ತಾಲ್ಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.</p>.<p>ಶಿವಶರಣೆ ಮಲ್ಲಮ್ಮಳ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರೂ ಮಹಾಸಾದ್ವಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವಳ ದೇವಭಕ್ತಿ, ತಪಸ್ಸು, ತ್ಯಾಗ ಇಂದಿನ ಸಮಾಜಕ್ಕೆ ದಾರಿದೀಪ ಎಂದರು.</p>.<p>ಶಿಕ್ಷಕ ಎಸ್. ಎಸ್. ಅರಬ ಮಾತನಾಡಿ, ಸಮಸ್ಯೆಗಳನ್ನು ಎದುರಿಸಿ ಬದುಕುವುದೇ ನಿಜವಾದ ಜೀವನ. ಸಮಸ್ಯೆ-ಸಂಕಷ್ಟಗಳ ನಡುವೆಯೂ ಮಲ್ಲಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಜೀವನ ಸಮೃದ್ಧವಾಗುತ್ತದೆ ಎಂದರು.</p>.<p>ಮುಖ್ಯ ಶಿಕ್ಷಕ ಕೆ. ಐ. ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಷ್ಟದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆದರ್ಶ ಜೀವನ ನಡೆಸಿ ಎಲ್ಲ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಅವರ ಆತ್ಮಬಲ ಇಂದಿನ ಮಹಿಳೆಯರಿಗೆ ಪ್ರೇರಣೆಯಾಗಬೇಕು ಎಂದು ಆಶಿಸಿದರು.</p>.<p>ಶಿಕ್ಷಕರಾದ ನಿಂಗಪ್ಪ ನಾವದಗಿ, ಶಾಂತೇಶ ಹಳಗುಣಕಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-26-115071629</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಡಿ : ಸುಖ-ದುಃಖ, ಅಂಬಲಿ-ಅಮೃತ, ಶತ್ರು-ಮಿತ್ರ, ಸ್ತುತಿ-ನಿಂದನೆ ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿದ ಹೇಮರಡ್ಡಿ ಮಲ್ಲಮ್ಮನ ಬದುಕು ಇಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.</p>.<p>ಭಾನುವಾರ ತಾಲ್ಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.</p>.<p>ಶಿವಶರಣೆ ಮಲ್ಲಮ್ಮಳ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರೂ ಮಹಾಸಾದ್ವಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವಳ ದೇವಭಕ್ತಿ, ತಪಸ್ಸು, ತ್ಯಾಗ ಇಂದಿನ ಸಮಾಜಕ್ಕೆ ದಾರಿದೀಪ ಎಂದರು.</p>.<p>ಶಿಕ್ಷಕ ಎಸ್. ಎಸ್. ಅರಬ ಮಾತನಾಡಿ, ಸಮಸ್ಯೆಗಳನ್ನು ಎದುರಿಸಿ ಬದುಕುವುದೇ ನಿಜವಾದ ಜೀವನ. ಸಮಸ್ಯೆ-ಸಂಕಷ್ಟಗಳ ನಡುವೆಯೂ ಮಲ್ಲಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಜೀವನ ಸಮೃದ್ಧವಾಗುತ್ತದೆ ಎಂದರು.</p>.<p>ಮುಖ್ಯ ಶಿಕ್ಷಕ ಕೆ. ಐ. ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಷ್ಟದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆದರ್ಶ ಜೀವನ ನಡೆಸಿ ಎಲ್ಲ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಅವರ ಆತ್ಮಬಲ ಇಂದಿನ ಮಹಿಳೆಯರಿಗೆ ಪ್ರೇರಣೆಯಾಗಬೇಕು ಎಂದು ಆಶಿಸಿದರು.</p>.<p>ಶಿಕ್ಷಕರಾದ ನಿಂಗಪ್ಪ ನಾವದಗಿ, ಶಾಂತೇಶ ಹಳಗುಣಕಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-26-115071629</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>