<p>ಬೈಲಹೊಂಗಲ: ‘ಜಗತ್ತಿನ ಬಹುತೇಕ ದೇಶಗಳು ಭಾರತೀಯ ಸಂಸ್ಕೃತಿಯತ್ತ ಗಮನ ಹರಿಸುತ್ತಿವೆ. ಇಲ್ಲಿನ ಸಂಸ್ಕಾರ, ಸಂಸ್ಕೃತಿ, ಪದ್ಧತಿ ಅಳವಡಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ತಾರೀಹಾಳ ಅಡವಿ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.</p>.<p>ನಗರದ ಚನ್ನಮ್ಮ ಉಪನಗರದಲ್ಲಿ ದಾನಮ್ಮದೇವಿ ದೇವಸ್ಥಾನ 17ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಶ್ರೀಗುರು ಸಿದ್ಧಾರೂಢರ ಚರಿತ್ರೆಯ ಆಧಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಮಾತನಾಡಿದರು.</p>.<p>‘ಭಾರತದ ಸಂಸ್ಕೃತಿ ಜಗತ್ತಿಗೆ ಮಾರ್ಗದರ್ಶಿಯಾಗಿದೆ. ಹೋಮಹವನ, ಯೋಗ, ಆಯುರ್ವೇದ, ಮಂತ್ರ ಪಠಣ ಸೇರಿದಂತೆ ಹಲವು ಆಚರಣೆಗಳು ಜಗತ್ತಿನಾದ್ಯಂತ ಪ್ರಚಲಿತಗೊಂಡು ಆಚರಣೆ ಮಾಡುತ್ತಿರುವುದು ಭಾರತೀಯ ಸಂಸ್ಕೃತಿಗೆ ಜಗತ್ತು ನೀಡಿದ ಗೌರವವಾಗಿದೆ’ ಎಂದರು.</p>.<p>‘ಯುವಪೀಳಿಗೆಯು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವುದು ವಿಷಾದನೀಯ. ಪಾಲಕರು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ನಮ್ಮ ಆಚಾರ, ವಿಚಾರದ ಕುರಿತು ಮಾರ್ಗದರ್ಶನ ಮಾಡುವ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕು’ ಎಂದು ತಿಳಿಸಿದರು.</p>.<p>ಮುನವಳ್ಳಿ ನಿತ್ಯಾನಂದ ಆಶ್ರಮದ ಮುಕ್ತಾನಂದ ಸ್ವಾಮೀಜಿ ಪ್ರವಚನ ನೀಡಿದರು. ದೇವಸ್ಥಾನ ಕಮಿಟಿ ಅಧ್ಯಕ್ಷ ಪ್ರಮೋದ ಕುಮಾರ ವಕ್ಕುಂದಮಠ, ಕುಮಾರ ರೇಶ್ಮಿ, ಈಶ್ವರ ಶಿಲ್ಲೇದಾರ, ಮಹೇಶ ಅವಟಗಿ ದಂಪತಿ ಇದ್ದರು. ನಿವೃತ್ತ ಶಿಕ್ಷಕ ಜಿ. ಜಿ. ಸಾಲಿ ಸ್ವಾಗತಿಸಿದರು, ಎಸ್.ಎಂ. ರೊಟ್ಟಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-21-704390841</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಲಹೊಂಗಲ: ‘ಜಗತ್ತಿನ ಬಹುತೇಕ ದೇಶಗಳು ಭಾರತೀಯ ಸಂಸ್ಕೃತಿಯತ್ತ ಗಮನ ಹರಿಸುತ್ತಿವೆ. ಇಲ್ಲಿನ ಸಂಸ್ಕಾರ, ಸಂಸ್ಕೃತಿ, ಪದ್ಧತಿ ಅಳವಡಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ತಾರೀಹಾಳ ಅಡವಿ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.</p>.<p>ನಗರದ ಚನ್ನಮ್ಮ ಉಪನಗರದಲ್ಲಿ ದಾನಮ್ಮದೇವಿ ದೇವಸ್ಥಾನ 17ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಶ್ರೀಗುರು ಸಿದ್ಧಾರೂಢರ ಚರಿತ್ರೆಯ ಆಧಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಮಾತನಾಡಿದರು.</p>.<p>‘ಭಾರತದ ಸಂಸ್ಕೃತಿ ಜಗತ್ತಿಗೆ ಮಾರ್ಗದರ್ಶಿಯಾಗಿದೆ. ಹೋಮಹವನ, ಯೋಗ, ಆಯುರ್ವೇದ, ಮಂತ್ರ ಪಠಣ ಸೇರಿದಂತೆ ಹಲವು ಆಚರಣೆಗಳು ಜಗತ್ತಿನಾದ್ಯಂತ ಪ್ರಚಲಿತಗೊಂಡು ಆಚರಣೆ ಮಾಡುತ್ತಿರುವುದು ಭಾರತೀಯ ಸಂಸ್ಕೃತಿಗೆ ಜಗತ್ತು ನೀಡಿದ ಗೌರವವಾಗಿದೆ’ ಎಂದರು.</p>.<p>‘ಯುವಪೀಳಿಗೆಯು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವುದು ವಿಷಾದನೀಯ. ಪಾಲಕರು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ನಮ್ಮ ಆಚಾರ, ವಿಚಾರದ ಕುರಿತು ಮಾರ್ಗದರ್ಶನ ಮಾಡುವ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕು’ ಎಂದು ತಿಳಿಸಿದರು.</p>.<p>ಮುನವಳ್ಳಿ ನಿತ್ಯಾನಂದ ಆಶ್ರಮದ ಮುಕ್ತಾನಂದ ಸ್ವಾಮೀಜಿ ಪ್ರವಚನ ನೀಡಿದರು. ದೇವಸ್ಥಾನ ಕಮಿಟಿ ಅಧ್ಯಕ್ಷ ಪ್ರಮೋದ ಕುಮಾರ ವಕ್ಕುಂದಮಠ, ಕುಮಾರ ರೇಶ್ಮಿ, ಈಶ್ವರ ಶಿಲ್ಲೇದಾರ, ಮಹೇಶ ಅವಟಗಿ ದಂಪತಿ ಇದ್ದರು. ನಿವೃತ್ತ ಶಿಕ್ಷಕ ಜಿ. ಜಿ. ಸಾಲಿ ಸ್ವಾಗತಿಸಿದರು, ಎಸ್.ಎಂ. ರೊಟ್ಟಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-21-704390841</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>