<p>ಜಮಖಂಡಿ: ‘ಭಗವಂತನ ಮೇಲೆ ಗಾಢವಾದ ಪ್ರೀತಿ, ಶ್ರದ್ಧೆ, ಗೌರವವಿಟ್ಟು ನಿಷ್ಠೆ ಮತ್ತು ಅಚಲವಾದ ನಿಜಭಕ್ತಿಯಿಂದ ಆರಾಧನೆ ಮಾಡುವವನು ನಿಜವಾದ ಭಕ್ತ’ ಎಂದು ಯಂಕಂಚಿಯ ಗುರುದೇವಾಶ್ರಮದ ಗುರುಪಾದ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಶ್ರೀಗುರುದೇವ ಸತ್ಸಂಗ ಮೇ 24ರ ಮಾಸಿಕ ಕಾರ್ಯಕ್ರಮದಲ್ಲಿ ‘ಷಟ್ಸ್ಥಲ: ಭಕ್ತ ಮತ್ತು ಭಕ್ತಿ’ ವಿಷಯ ಕುರಿತು ಮಾತನಾಡಿದರು.</p>.<p>12ನೇ ಶತಮಾನದ ಬಸವಾದಿ ಶಿವಶರಣರು ಕಟ್ಟಿಕೊಟ್ಟಿರುವ ‘ಷಟ್ಸ್ಥಲ’ವು ಸಾಧನೆಯ ಆರು ಮೆಟ್ಟಿಲುಗಳನ್ನು ಹೊಂದಿದೆ. ಭಕ್ತಸ್ಥಲ ಮೊದಲ ಮೆಟ್ಟಿಲಾಗಿದೆ. ಗುರು ಅಥವಾ ಭಗವಂತನ ಮೇಲೆ ಅಚಲವಾದ ನಂಬಿಕೆ, ಪ್ರೀತಿ, ವಿಶ್ವಾಸವಿಡುವುದನ್ನು ಭಕ್ತಿ ಎನ್ನಲಾಗುತ್ತದೆ ಎಂದರು.</p>.<p>ಹುಲ್ಯಾಳ ಶ್ರೀಗುರುದೇವಾಶ್ರಮದ ಹರ್ಷಾನಂದ ಸ್ವಾಮೀಜಿ ಮಾತನಾಡಿ, ‘ಷಟ್ಸ್ಥಲವು ಅದ್ಭುತವಾದ ಸಾಧನೆ ಪದ್ಧತಿಯಾಗಿದೆ. ಭಕ್ತಸ್ಥಲ ಸಾಧನೆಯಿಂದ ನನ್ನದೆನ್ನುವುದು ಏನೂ ಉಳಿಯುವುದಿಲ್ಲ. ನನ್ನ ದರ್ಶನ ನನಗೆ ಆಗುತ್ತದೆ. ನಾನು ಲಿಂಗ ಸ್ವರೂಪಿ, ಲಿಂಗಮಯ ಎನ್ನುವ ಭಾವ ಮೂಡುತ್ತದೆ’ ಎಂದರು.</p>.<p>ಬಸವಣ್ಣನವರ ನಿಜವಾದ ಅನುಯಾಯಿ ಆಗಬೇಕಾದರೆ ಷಟ್ಸ್ಥಲದ ಆರು ಮೆಟ್ಟಿಲುಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಸಾಧನೆಯ ಮೊದಲ ಹೆಜ್ಜೆ ಇಡುವವನೆ ಭಕ್ತ. ಲಿಂಗವೇ ಸರ್ವಸ್ವ ಎನ್ನುವುದೇ ಭಕ್ತಿ ಎಂದರು.</p>.<p>ಶ್ರೀಗುರುದೇವಾಶ್ರಮದ ಭಕ್ತ ಯಲ್ಲಪ್ಪ ಶಿವಾಪುರ ಮಾತನಾಡಿದರು. ಹುಲ್ಯಾಳದ ನಿಜಗುಣಶಾಸ್ತ್ರೀ ಮಮದಾಪುರ ಹಾಗೂ ಶ್ರೀಮಠದ ವಿದ್ಯಾರ್ಥಿಗಳಿಂದ ಕೈಸನ್ನೆಯಿಂದಲೇ ಶಬ್ದಗಳನ್ನು ಗುರುತಿಸುವ ‘ತರ್ಕಶಾಸ್ತ್ರ ಜ್ಞಾನ’ ಪ್ರದರ್ಶನ ಜರುಗಿತು.</p>.<p>ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳು, ಶ್ರೀಗುರುದೇವ ಸತ್ಸಂಗ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತಿರುವ ಹಿರಿಯರು, ವಿಶೇಷ ಸಾಧಕ ಕಲಾವಿದರು ಹಾಗೂ ಶ್ರೀಗುರುದೇವ ಸಂಗೀತ ಬಳಗದ ಕಲಾವಿದರನ್ನು ಸನ್ಮಾನಿಸಲಾಯಿತು.</p>.<p>ಯರಗಟ್ಟಿ ತಾಲ್ಲೂಕಿನ ಅಕ್ಕಿಸಾಗರ ಮಠದ ರುದ್ರೇಶ ಸ್ವಾಮೀಜಿ, ಗೋಕಾಕ ತಾಲ್ಲೂಕಿನ ತುಕಾನಟ್ಟಿ ಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-19-1808021699</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮಖಂಡಿ: ‘ಭಗವಂತನ ಮೇಲೆ ಗಾಢವಾದ ಪ್ರೀತಿ, ಶ್ರದ್ಧೆ, ಗೌರವವಿಟ್ಟು ನಿಷ್ಠೆ ಮತ್ತು ಅಚಲವಾದ ನಿಜಭಕ್ತಿಯಿಂದ ಆರಾಧನೆ ಮಾಡುವವನು ನಿಜವಾದ ಭಕ್ತ’ ಎಂದು ಯಂಕಂಚಿಯ ಗುರುದೇವಾಶ್ರಮದ ಗುರುಪಾದ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಶ್ರೀಗುರುದೇವ ಸತ್ಸಂಗ ಮೇ 24ರ ಮಾಸಿಕ ಕಾರ್ಯಕ್ರಮದಲ್ಲಿ ‘ಷಟ್ಸ್ಥಲ: ಭಕ್ತ ಮತ್ತು ಭಕ್ತಿ’ ವಿಷಯ ಕುರಿತು ಮಾತನಾಡಿದರು.</p>.<p>12ನೇ ಶತಮಾನದ ಬಸವಾದಿ ಶಿವಶರಣರು ಕಟ್ಟಿಕೊಟ್ಟಿರುವ ‘ಷಟ್ಸ್ಥಲ’ವು ಸಾಧನೆಯ ಆರು ಮೆಟ್ಟಿಲುಗಳನ್ನು ಹೊಂದಿದೆ. ಭಕ್ತಸ್ಥಲ ಮೊದಲ ಮೆಟ್ಟಿಲಾಗಿದೆ. ಗುರು ಅಥವಾ ಭಗವಂತನ ಮೇಲೆ ಅಚಲವಾದ ನಂಬಿಕೆ, ಪ್ರೀತಿ, ವಿಶ್ವಾಸವಿಡುವುದನ್ನು ಭಕ್ತಿ ಎನ್ನಲಾಗುತ್ತದೆ ಎಂದರು.</p>.<p>ಹುಲ್ಯಾಳ ಶ್ರೀಗುರುದೇವಾಶ್ರಮದ ಹರ್ಷಾನಂದ ಸ್ವಾಮೀಜಿ ಮಾತನಾಡಿ, ‘ಷಟ್ಸ್ಥಲವು ಅದ್ಭುತವಾದ ಸಾಧನೆ ಪದ್ಧತಿಯಾಗಿದೆ. ಭಕ್ತಸ್ಥಲ ಸಾಧನೆಯಿಂದ ನನ್ನದೆನ್ನುವುದು ಏನೂ ಉಳಿಯುವುದಿಲ್ಲ. ನನ್ನ ದರ್ಶನ ನನಗೆ ಆಗುತ್ತದೆ. ನಾನು ಲಿಂಗ ಸ್ವರೂಪಿ, ಲಿಂಗಮಯ ಎನ್ನುವ ಭಾವ ಮೂಡುತ್ತದೆ’ ಎಂದರು.</p>.<p>ಬಸವಣ್ಣನವರ ನಿಜವಾದ ಅನುಯಾಯಿ ಆಗಬೇಕಾದರೆ ಷಟ್ಸ್ಥಲದ ಆರು ಮೆಟ್ಟಿಲುಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಸಾಧನೆಯ ಮೊದಲ ಹೆಜ್ಜೆ ಇಡುವವನೆ ಭಕ್ತ. ಲಿಂಗವೇ ಸರ್ವಸ್ವ ಎನ್ನುವುದೇ ಭಕ್ತಿ ಎಂದರು.</p>.<p>ಶ್ರೀಗುರುದೇವಾಶ್ರಮದ ಭಕ್ತ ಯಲ್ಲಪ್ಪ ಶಿವಾಪುರ ಮಾತನಾಡಿದರು. ಹುಲ್ಯಾಳದ ನಿಜಗುಣಶಾಸ್ತ್ರೀ ಮಮದಾಪುರ ಹಾಗೂ ಶ್ರೀಮಠದ ವಿದ್ಯಾರ್ಥಿಗಳಿಂದ ಕೈಸನ್ನೆಯಿಂದಲೇ ಶಬ್ದಗಳನ್ನು ಗುರುತಿಸುವ ‘ತರ್ಕಶಾಸ್ತ್ರ ಜ್ಞಾನ’ ಪ್ರದರ್ಶನ ಜರುಗಿತು.</p>.<p>ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳು, ಶ್ರೀಗುರುದೇವ ಸತ್ಸಂಗ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತಿರುವ ಹಿರಿಯರು, ವಿಶೇಷ ಸಾಧಕ ಕಲಾವಿದರು ಹಾಗೂ ಶ್ರೀಗುರುದೇವ ಸಂಗೀತ ಬಳಗದ ಕಲಾವಿದರನ್ನು ಸನ್ಮಾನಿಸಲಾಯಿತು.</p>.<p>ಯರಗಟ್ಟಿ ತಾಲ್ಲೂಕಿನ ಅಕ್ಕಿಸಾಗರ ಮಠದ ರುದ್ರೇಶ ಸ್ವಾಮೀಜಿ, ಗೋಕಾಕ ತಾಲ್ಲೂಕಿನ ತುಕಾನಟ್ಟಿ ಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-19-1808021699</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>