<p>ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಭೀಮಾ ತೀರದಲ್ಲಿರುವ ಪುಣ್ಯಕ್ಷೇತ್ರ ಮಣ್ಣೂರಿನ ವೇದೇಶತೀರ್ಥ ಸಂಸ್ಕೃತ ವಿದ್ಯಾಪೀಠದ ಕುಲಪತಿ ಪಂ. ಅನಂತಾಚಾರ್ಯ ಅಕಮಂಚಿಯವರಿಗೆ ರಾಜ್ಯ ಸಂಸ್ಕೃತ ವಿ.ವಿ.ಯಿಂದ ಮಾನ್ಯತೆ ಪಡೆದಿರುವ ಬೆಂಗಳೂರಿನ ದ್ವೈತ ವೇದಾಂತಾಧ್ಯಯನ ಸಂಶೋಧನಾ ಪ್ರತಿಷ್ಠಾನ ವಿದ್ಯಾಧೀಶಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದೆ.</p>.<p>ಉತ್ತರಾದಿ ಮಠದ ಪರಂಪರೆಯಲ್ಲಿ ಆಗಿ ಹೋಗಿರುವ ವಿದ್ಯಾಧೀಶತೀರ್ಥ ಶ್ರೀಗಳ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಉತ್ತರಾದಿ ಮಠಾಧೀಶ ಸತ್ಯಾತ್ಮತೀರ್ಥ ಶ್ರೀಗಳು ಬೆಂಗಳೂರಿನಲ್ಲಿ ಪ್ರಶಸ್ತಿ ನೀಡಿದರು.</p>.<p>ಮಣ್ಣೂರು ಭೀಮಾ ತೀರದಲ್ಲಿ ಗುರುಕುಲ ಪರಂಪರೆಯಲ್ಲಿ ವಿದ್ಯಾಪೀಠ ನಡೆಸಿಕೊಂಡು ಹೊರಟಿರುವ ಅನಂತಾಚಾರ್ಯರು 4 ದಶಕಕ್ಕೂ ಹೆಚ್ಚು ಕಾಲದಿಂದ ಸಂಸ್ಕೃತ ಪಾಠಪ್ರವಚನ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-34-528478828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಭೀಮಾ ತೀರದಲ್ಲಿರುವ ಪುಣ್ಯಕ್ಷೇತ್ರ ಮಣ್ಣೂರಿನ ವೇದೇಶತೀರ್ಥ ಸಂಸ್ಕೃತ ವಿದ್ಯಾಪೀಠದ ಕುಲಪತಿ ಪಂ. ಅನಂತಾಚಾರ್ಯ ಅಕಮಂಚಿಯವರಿಗೆ ರಾಜ್ಯ ಸಂಸ್ಕೃತ ವಿ.ವಿ.ಯಿಂದ ಮಾನ್ಯತೆ ಪಡೆದಿರುವ ಬೆಂಗಳೂರಿನ ದ್ವೈತ ವೇದಾಂತಾಧ್ಯಯನ ಸಂಶೋಧನಾ ಪ್ರತಿಷ್ಠಾನ ವಿದ್ಯಾಧೀಶಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದೆ.</p>.<p>ಉತ್ತರಾದಿ ಮಠದ ಪರಂಪರೆಯಲ್ಲಿ ಆಗಿ ಹೋಗಿರುವ ವಿದ್ಯಾಧೀಶತೀರ್ಥ ಶ್ರೀಗಳ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಉತ್ತರಾದಿ ಮಠಾಧೀಶ ಸತ್ಯಾತ್ಮತೀರ್ಥ ಶ್ರೀಗಳು ಬೆಂಗಳೂರಿನಲ್ಲಿ ಪ್ರಶಸ್ತಿ ನೀಡಿದರು.</p>.<p>ಮಣ್ಣೂರು ಭೀಮಾ ತೀರದಲ್ಲಿ ಗುರುಕುಲ ಪರಂಪರೆಯಲ್ಲಿ ವಿದ್ಯಾಪೀಠ ನಡೆಸಿಕೊಂಡು ಹೊರಟಿರುವ ಅನಂತಾಚಾರ್ಯರು 4 ದಶಕಕ್ಕೂ ಹೆಚ್ಚು ಕಾಲದಿಂದ ಸಂಸ್ಕೃತ ಪಾಠಪ್ರವಚನ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-34-528478828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>