<p>ಕಲಬುರಗಿ: ‘ವಿವಿಧ ಕಾಲಘಟ್ಟಗಳಲ್ಲಿ ಆದರ್ಶ ಸಮಾಜ ಮತ್ತು ನಾಗರಿಕತೆ ಹುಟ್ಟಿಗೆ ಕಾರಣರಾದ ಅನೇಕ ತತ್ವಜ್ಞಾನಿಗಳು ಶಾಂತಿ, ಸತ್ಯ, ಪ್ರೀತಿ, ಕರುಣೆ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ್ದಾರೆ. ಬುದ್ಧನ ವೈಜ್ಞಾನಿಕ ಚಿಂತನೆಗಳು ಮಾನವ ಕುಲಕ್ಕೆ ದಾರಿದೀಪವಾಗಿವೆ’ ಎಂದು ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಹೇಳಿದರು.</p>.<p>ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ರಾಧಾಕೃಷ್ಣ ಸಭಾಂಗಣದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಗವಾನ್ ಬುದ್ಧನ ಮೂರ್ತಿಗೆ ಪುಷ್ಪ ಸಮರ್ಪಿಸಿ ಅವರು ಮಾತನಾಡಿದರು.</p>.<p>‘ದ್ವೇಷ ಮತ್ತು ಅಸೂಯೆಯಿಂದ ಮನುಷ್ಯ ಸುಖ, ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲ. ಅಂತರರಾಷ್ಟ್ರೀಯ ಕಾರ್ಮಿಕರ ದಿನವಾದ ಇಂದು ದೇಶದ ಅಭಿವೃದ್ಧಿಯಲ್ಲಿ ಶ್ರಮಜೀವಿಗಳ ಪಾತ್ರವನ್ನು ಗುರುತಿಸುವ ಮಹತ್ವದ ದಿನವಾಗಿದೆ’ ಎಂದರು.</p>.<p>ಕಲಾ ನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಮಾತನಾಡಿ, ‘ಬುದ್ಧ ಏಷ್ಯಾದ ಬೆಳಕು ಎಂದು ಕರೆದಿದ್ದಾರೆ. ಜಗತ್ತಿಗೆ ಬುದ್ಧನೇ ಬೆಳಕು ಎಂದು ಮನವರಿಕೆಯಾಗಿದೆ’ ಎಂದರು.</p>.<p>ವಾಣಿಜ್ಯ ನಿಕಾಯದ ಡೀನ್ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಮಾತನಾಡಿ, ‘ವಾಸ್ತವ ಸಮಾಜದಲ್ಲಿ ಧರ್ಮದ ಬಗ್ಗೆ ವಿಭಿನ್ನ ಅರ್ಥ ನೀಡಲಾಗುತ್ತಿದೆ. ಧರ್ಮವೆಂದರೆ ಶಾಂತಿ, ನೆಮ್ಮದಿ, ಸತ್ಯ, ನೀತಿ ಮತ್ತು ಮನುಷ್ಯ ಭಾವನೆ ಬೆಳೆಸುವುದು. ಸಂಘರ್ಷ, ಅಶಾಂತಿ, ತಲ್ಲಣ, ಭಯವನ್ನು ಬಿತ್ತುವುದಲ್ಲ’ ಎಂದರು.</p>.<p>ಪ್ರೊ. ದೇವಿದಾಸ ಮಾಲೆ, ಪ್ರೊ. ಜಿ.ಎಂ. ವಿದ್ಯಾಸಾಗರ್, ಪ್ರೊ. ಬಸವರಾಜ ಸಣ್ಣಕ್ಕಿ, ಹನುಮಂತ ಜಂಗೆ, ಅಶೋಕ ಜಿಗಳಮಡಿ, ಜಿ.ರಾಜಪ್ಪ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಿ.ಎಂ. ರುದ್ರವಾಡಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-34-198187119</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ವಿವಿಧ ಕಾಲಘಟ್ಟಗಳಲ್ಲಿ ಆದರ್ಶ ಸಮಾಜ ಮತ್ತು ನಾಗರಿಕತೆ ಹುಟ್ಟಿಗೆ ಕಾರಣರಾದ ಅನೇಕ ತತ್ವಜ್ಞಾನಿಗಳು ಶಾಂತಿ, ಸತ್ಯ, ಪ್ರೀತಿ, ಕರುಣೆ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ್ದಾರೆ. ಬುದ್ಧನ ವೈಜ್ಞಾನಿಕ ಚಿಂತನೆಗಳು ಮಾನವ ಕುಲಕ್ಕೆ ದಾರಿದೀಪವಾಗಿವೆ’ ಎಂದು ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಹೇಳಿದರು.</p>.<p>ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ರಾಧಾಕೃಷ್ಣ ಸಭಾಂಗಣದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಗವಾನ್ ಬುದ್ಧನ ಮೂರ್ತಿಗೆ ಪುಷ್ಪ ಸಮರ್ಪಿಸಿ ಅವರು ಮಾತನಾಡಿದರು.</p>.<p>‘ದ್ವೇಷ ಮತ್ತು ಅಸೂಯೆಯಿಂದ ಮನುಷ್ಯ ಸುಖ, ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲ. ಅಂತರರಾಷ್ಟ್ರೀಯ ಕಾರ್ಮಿಕರ ದಿನವಾದ ಇಂದು ದೇಶದ ಅಭಿವೃದ್ಧಿಯಲ್ಲಿ ಶ್ರಮಜೀವಿಗಳ ಪಾತ್ರವನ್ನು ಗುರುತಿಸುವ ಮಹತ್ವದ ದಿನವಾಗಿದೆ’ ಎಂದರು.</p>.<p>ಕಲಾ ನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಮಾತನಾಡಿ, ‘ಬುದ್ಧ ಏಷ್ಯಾದ ಬೆಳಕು ಎಂದು ಕರೆದಿದ್ದಾರೆ. ಜಗತ್ತಿಗೆ ಬುದ್ಧನೇ ಬೆಳಕು ಎಂದು ಮನವರಿಕೆಯಾಗಿದೆ’ ಎಂದರು.</p>.<p>ವಾಣಿಜ್ಯ ನಿಕಾಯದ ಡೀನ್ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಮಾತನಾಡಿ, ‘ವಾಸ್ತವ ಸಮಾಜದಲ್ಲಿ ಧರ್ಮದ ಬಗ್ಗೆ ವಿಭಿನ್ನ ಅರ್ಥ ನೀಡಲಾಗುತ್ತಿದೆ. ಧರ್ಮವೆಂದರೆ ಶಾಂತಿ, ನೆಮ್ಮದಿ, ಸತ್ಯ, ನೀತಿ ಮತ್ತು ಮನುಷ್ಯ ಭಾವನೆ ಬೆಳೆಸುವುದು. ಸಂಘರ್ಷ, ಅಶಾಂತಿ, ತಲ್ಲಣ, ಭಯವನ್ನು ಬಿತ್ತುವುದಲ್ಲ’ ಎಂದರು.</p>.<p>ಪ್ರೊ. ದೇವಿದಾಸ ಮಾಲೆ, ಪ್ರೊ. ಜಿ.ಎಂ. ವಿದ್ಯಾಸಾಗರ್, ಪ್ರೊ. ಬಸವರಾಜ ಸಣ್ಣಕ್ಕಿ, ಹನುಮಂತ ಜಂಗೆ, ಅಶೋಕ ಜಿಗಳಮಡಿ, ಜಿ.ರಾಜಪ್ಪ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಿ.ಎಂ. ರುದ್ರವಾಡಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-34-198187119</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>