<p>ಕೆಂಭಾವಿ: ‘ವೈವಿಧ್ಯಮಯ ಸಂಸ್ಕೃತಿ ಯನ್ನು ಪ್ರೀತಿಸೋಣ, ಗೌರವಿಸೋಣ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯೋಣ. ಸೂಫಿ ಸಂತರು, ದಾಸ ಶ್ರೇಷ್ಠರು, ಮಹಾತ್ಮರು, ಶಿವಶರಣರು ತೋರಿದ ಮಾರ್ಗದಲ್ಲಿ ಸಾಗೋಣ’ ಎಂದು ಸಜ್ಜಾದ ನಶಿನ್ ಮಾಸಾಬಿ ದರ್ಗಾದ ಸಾಹೇಬ್ ಶಾಹೀದ್ ಹುಸೇನ್ ಫಾರೂಕಿ ಹೇಳಿದರು.</p>.<p>ಪಟ್ಟಣದ ಶ್ರೀಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಹಿರೇಮಠ ಸಂಸ್ಥಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿಯಲ್ಲಿ ಇಲಿಯಾಸ್ ಪಟೇಲ್ ರಚಿತ ‘ಅತಿಥಿ ಹೃದಯ’ ಚೊಚ್ಚಲ ಕಾದಂಬರಿಯ ಮುಖಪುಟ ಅನಾವರಣಗೊಳಿಸಿ ಮಾತನಾಡಿದರು.</p>.<p>ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಮಲ್ಲಯ್ಯ ಸ್ವಾಮಿ ವಡಿಗೇರಿ ಅವರು, ‘ಹೆಣ್ಣು, ಹೊನ್ನು, ಮಣ್ಣು, ಅಧಿಕಾರ, ಅಂತಸ್ತು ಬಯಸದೆ ಬದುಕಿನುದ್ದಕ್ಕೂ ಸೇವಾ ಮನೋಭಾವ ಮೈಗೂಡಿಸಿಕೊಂಡರೆ ಭಗವಂತನ ಸಾಕ್ಷಾತ್ಕಾರ ಸಾಧ್ಯವಾಗುತ್ತದೆ’ ಎಂದರು.</p>.<p>‘ಚನ್ನಬಸವ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ನಡೆಯುವ ಮಾಸಿಕ ಸತ್ಸಂಗವು ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿ, ಆಚಾರ ವಿಚಾರ, ಶ್ರದ್ಧೆ, ಸಂಪ್ರದಾಯಗಳ ಪಾಠಶಾಲೆಯಾಗಿದೆ’ ಎಂದು ಶ್ಲಾಘಿಸಿದರು.</p>.<p>ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸೋಮನಾಥ ಯಾಳಗಿ ಹಾಗೂ ಯಮನೇಶ ಯಾಳಗಿಯವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.</p>.<p>ಶಿವಾನುಭವ ಗೋಷ್ಠಿಯಲ್ಲಿ ಸಾಹಿತಿ ನಿಂಗನಗೌಡ ದೇಸಾಯಿ, ನಿಜಗುಣಿ ವಿಶ್ವಕರ್ಮ, ಪುರಸಭೆ ಸದಸ್ಯ ಭೀಮನಗೌಡ ಮಲ್ಕಾಪುರ, ದೇವಿಂದ್ರ ಕರಡಕಲ್, ನಯೋಮ್ ಖಾಜಿ, ಅಬ್ದುಲ್ ರಜಾಕ್ ಸಾಸನೂರ, ಬಂದೇನವಾಜ್ ನಾಲತವಾಡ, ಯಂಕನಗೌಡ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-30-378185779</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಭಾವಿ: ‘ವೈವಿಧ್ಯಮಯ ಸಂಸ್ಕೃತಿ ಯನ್ನು ಪ್ರೀತಿಸೋಣ, ಗೌರವಿಸೋಣ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯೋಣ. ಸೂಫಿ ಸಂತರು, ದಾಸ ಶ್ರೇಷ್ಠರು, ಮಹಾತ್ಮರು, ಶಿವಶರಣರು ತೋರಿದ ಮಾರ್ಗದಲ್ಲಿ ಸಾಗೋಣ’ ಎಂದು ಸಜ್ಜಾದ ನಶಿನ್ ಮಾಸಾಬಿ ದರ್ಗಾದ ಸಾಹೇಬ್ ಶಾಹೀದ್ ಹುಸೇನ್ ಫಾರೂಕಿ ಹೇಳಿದರು.</p>.<p>ಪಟ್ಟಣದ ಶ್ರೀಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಹಿರೇಮಠ ಸಂಸ್ಥಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿಯಲ್ಲಿ ಇಲಿಯಾಸ್ ಪಟೇಲ್ ರಚಿತ ‘ಅತಿಥಿ ಹೃದಯ’ ಚೊಚ್ಚಲ ಕಾದಂಬರಿಯ ಮುಖಪುಟ ಅನಾವರಣಗೊಳಿಸಿ ಮಾತನಾಡಿದರು.</p>.<p>ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಮಲ್ಲಯ್ಯ ಸ್ವಾಮಿ ವಡಿಗೇರಿ ಅವರು, ‘ಹೆಣ್ಣು, ಹೊನ್ನು, ಮಣ್ಣು, ಅಧಿಕಾರ, ಅಂತಸ್ತು ಬಯಸದೆ ಬದುಕಿನುದ್ದಕ್ಕೂ ಸೇವಾ ಮನೋಭಾವ ಮೈಗೂಡಿಸಿಕೊಂಡರೆ ಭಗವಂತನ ಸಾಕ್ಷಾತ್ಕಾರ ಸಾಧ್ಯವಾಗುತ್ತದೆ’ ಎಂದರು.</p>.<p>‘ಚನ್ನಬಸವ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ನಡೆಯುವ ಮಾಸಿಕ ಸತ್ಸಂಗವು ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿ, ಆಚಾರ ವಿಚಾರ, ಶ್ರದ್ಧೆ, ಸಂಪ್ರದಾಯಗಳ ಪಾಠಶಾಲೆಯಾಗಿದೆ’ ಎಂದು ಶ್ಲಾಘಿಸಿದರು.</p>.<p>ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸೋಮನಾಥ ಯಾಳಗಿ ಹಾಗೂ ಯಮನೇಶ ಯಾಳಗಿಯವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.</p>.<p>ಶಿವಾನುಭವ ಗೋಷ್ಠಿಯಲ್ಲಿ ಸಾಹಿತಿ ನಿಂಗನಗೌಡ ದೇಸಾಯಿ, ನಿಜಗುಣಿ ವಿಶ್ವಕರ್ಮ, ಪುರಸಭೆ ಸದಸ್ಯ ಭೀಮನಗೌಡ ಮಲ್ಕಾಪುರ, ದೇವಿಂದ್ರ ಕರಡಕಲ್, ನಯೋಮ್ ಖಾಜಿ, ಅಬ್ದುಲ್ ರಜಾಕ್ ಸಾಸನೂರ, ಬಂದೇನವಾಜ್ ನಾಲತವಾಡ, ಯಂಕನಗೌಡ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-30-378185779</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>