<p>ಯಲಬುರ್ಗಾ: ‘ಶರಣ ಸಂಸ್ಕೃತಿಯ ಬಗ್ಗೆ ಒಲವು ತೋರುವುದು ಹಾಗೂ ಶರಣರ ವಚನಗಳನ್ನು ಅಧ್ಯಯನ ಮಾಡಿ ವಿಚಾರಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನ ನಡೆಸುವಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು ವಚನಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದೆ’ ಎಂದು ಕೊಪ್ಪಳದ ಗುರುಬಸವ ಮಹಾಮನೆಯ ಶರಣೆ ಮಾತೋಶ್ರೀ ಅರ್ಚನಾ ಹೇಳಿದರು.</p>.<p>ತಾಲ್ಲೂಕಿನ ವಣಗೇರಿ ಗ್ರಾಮದ ಬಸವ ಯೋಗಾಶ್ರಮದಲ್ಲಿ ಆಯೋಜಿಸಿದ್ದ 8ನೇ ವಚನ ದರ್ಶನ ಚಿಂತನ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ವಚನಗಳಲ್ಲಿನ ತತ್ವಗಳು, ಸಿದ್ಧಾಂತಗಳು ಮಾನವೀಯ ಮೌಲ್ಯಗಳನ್ನು ಎತ್ತಿ ತೋರಿಸುವುದಲ್ಲದೆ ಉತ್ತಮ ಜೀವನಕ್ಕೆ ದಿಕ್ಸೂಚಿಗಳಾಗಿವೆ’ ಎಂದರು.</p>.<p>ಮಕ್ಕಳ್ಳಿಯ ಶಿವಾನಂದಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ‘ಶಿವಾನುಭವ ಕಾರ್ಯಕ್ರಮಗಳು ಜ್ಞಾನದ ಜ್ಯೋತಿ ಬೆಳಗಿಸುತ್ತವೆ. ಶರಣ ಸಂಸ್ಕೃತಿಯನ್ನು ರೂಢಿಸಿಕೊಳ್ಳುವ ಮೂಲಕ ಸುಂದರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಾಗಿದೆ’ ಎಂದು ಹೇಳಿದರು.</p>.<p>ಲೇಬಗೇರಿಯ ಮಹಾನೇಗುಂದಿ ಸರಸ್ವತಿ ಸಂಸ್ಥಾನ ವಿಶ್ವಕರ್ಮ ಪೀಠದ ಶಿವುಕುಮಾರ ಸ್ವಾಮೀಜಿ ಮಾತನಾಡಿ, ‘ಜನರಲ್ಲಿ ಶರಣ ಚಿಂತನೆ, ಆದರ್ಶಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ವಚನ ದರ್ಶನ ಚಿಂತನ ಕಾರ್ಯಕ್ರಮದಲ್ಲಿ ನಡೆಯುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>ಮುಖ್ಯಶಿಕ್ಷಕ ಬಸವರಾಜ ಮಾಸ್ತಿ, ಅಶೋಕ ಮಾಲಿಪಾಟೀಲ, ವಿ.ಎಸ್. ಬೆಣಕಲ್ ಮಾತನಾಡಿದರು.</p>.<p>ಇದೇ ವೇಳೆ ಯಲಬುರ್ಗಾ, ಕುಕನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಸವ ಯೋಗಾಶ್ರಮದ ಯಶವಂತ ಶರಣರು ಸಾನ್ನಿಧ್ಯ ವಹಿಸಿದ್ದರು.</p>.<p>ಬೆಂಗಳೂರಿನ ನ್ಯಾಯಾಂಗ ಇಲಾಖೆಯ ಶಿರಸ್ತೇದಾರ ಸಂಗಮೇಶ ತೆಗ್ಗಿನಮನಿ, ಸುನೀಲ ದೇಸಾಯಿ, ಮಲ್ಲಿಕಾರ್ಜುನ, ಕಳಕೇಶ ಬಳಿಗಾರ, ಶರಣಪ್ಪ ಕರಿಗಾರ, ಶಿವಪ್ಪ ಮೇಟಿ, ಮುದಿಯಪ್ಪ ಮೇಟಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-35-511737481</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ‘ಶರಣ ಸಂಸ್ಕೃತಿಯ ಬಗ್ಗೆ ಒಲವು ತೋರುವುದು ಹಾಗೂ ಶರಣರ ವಚನಗಳನ್ನು ಅಧ್ಯಯನ ಮಾಡಿ ವಿಚಾರಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನ ನಡೆಸುವಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು ವಚನಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದೆ’ ಎಂದು ಕೊಪ್ಪಳದ ಗುರುಬಸವ ಮಹಾಮನೆಯ ಶರಣೆ ಮಾತೋಶ್ರೀ ಅರ್ಚನಾ ಹೇಳಿದರು.</p>.<p>ತಾಲ್ಲೂಕಿನ ವಣಗೇರಿ ಗ್ರಾಮದ ಬಸವ ಯೋಗಾಶ್ರಮದಲ್ಲಿ ಆಯೋಜಿಸಿದ್ದ 8ನೇ ವಚನ ದರ್ಶನ ಚಿಂತನ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ವಚನಗಳಲ್ಲಿನ ತತ್ವಗಳು, ಸಿದ್ಧಾಂತಗಳು ಮಾನವೀಯ ಮೌಲ್ಯಗಳನ್ನು ಎತ್ತಿ ತೋರಿಸುವುದಲ್ಲದೆ ಉತ್ತಮ ಜೀವನಕ್ಕೆ ದಿಕ್ಸೂಚಿಗಳಾಗಿವೆ’ ಎಂದರು.</p>.<p>ಮಕ್ಕಳ್ಳಿಯ ಶಿವಾನಂದಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ‘ಶಿವಾನುಭವ ಕಾರ್ಯಕ್ರಮಗಳು ಜ್ಞಾನದ ಜ್ಯೋತಿ ಬೆಳಗಿಸುತ್ತವೆ. ಶರಣ ಸಂಸ್ಕೃತಿಯನ್ನು ರೂಢಿಸಿಕೊಳ್ಳುವ ಮೂಲಕ ಸುಂದರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಾಗಿದೆ’ ಎಂದು ಹೇಳಿದರು.</p>.<p>ಲೇಬಗೇರಿಯ ಮಹಾನೇಗುಂದಿ ಸರಸ್ವತಿ ಸಂಸ್ಥಾನ ವಿಶ್ವಕರ್ಮ ಪೀಠದ ಶಿವುಕುಮಾರ ಸ್ವಾಮೀಜಿ ಮಾತನಾಡಿ, ‘ಜನರಲ್ಲಿ ಶರಣ ಚಿಂತನೆ, ಆದರ್ಶಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ವಚನ ದರ್ಶನ ಚಿಂತನ ಕಾರ್ಯಕ್ರಮದಲ್ಲಿ ನಡೆಯುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>ಮುಖ್ಯಶಿಕ್ಷಕ ಬಸವರಾಜ ಮಾಸ್ತಿ, ಅಶೋಕ ಮಾಲಿಪಾಟೀಲ, ವಿ.ಎಸ್. ಬೆಣಕಲ್ ಮಾತನಾಡಿದರು.</p>.<p>ಇದೇ ವೇಳೆ ಯಲಬುರ್ಗಾ, ಕುಕನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಸವ ಯೋಗಾಶ್ರಮದ ಯಶವಂತ ಶರಣರು ಸಾನ್ನಿಧ್ಯ ವಹಿಸಿದ್ದರು.</p>.<p>ಬೆಂಗಳೂರಿನ ನ್ಯಾಯಾಂಗ ಇಲಾಖೆಯ ಶಿರಸ್ತೇದಾರ ಸಂಗಮೇಶ ತೆಗ್ಗಿನಮನಿ, ಸುನೀಲ ದೇಸಾಯಿ, ಮಲ್ಲಿಕಾರ್ಜುನ, ಕಳಕೇಶ ಬಳಿಗಾರ, ಶರಣಪ್ಪ ಕರಿಗಾರ, ಶಿವಪ್ಪ ಮೇಟಿ, ಮುದಿಯಪ್ಪ ಮೇಟಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-35-511737481</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>