ಪ್ರತಿನಿತ್ಯವೂ ಸಾವುಗಳು ನಮ್ಮ ಸುತ್ತ ಮುತ್ತಲು ಜರುಗುತ್ತಲೇ ಇರುತ್ತವೆ. ಸಾವು ಕೇವಲ ದೇಹಕ್ಕೆ ಮಾತ್ರ. ಆದರೆ, ಮೃತ ವ್ಯಕ್ತಿ ಇಡೀ ಜೀವಮಾನದಲ್ಲಿ ಅಳವಡಿಸಿಕೊಂಡ ವ್ಯಕ್ತಿತ್ವದ ಪರಾಮರ್ಶೆ ಸಾವಿನ ಬಳಿಕ ನಡೆಯುತ್ತದೆ. ಆ ವ್ಯಕ್ತಿಯನ್ನು ಕೇಂದ್ರವಾಗಿಸಿಕೊಂಡು ಬದುಕಿನ ಅವಲೋಕನ ಸಾಗುತ್ತದೆ. ಆ ವ್ಯಕ್ತಿಯ ಸಾಧನೆ ಮತ್ತು ಸಾಮಾಜಿಕ ಕೊಡುಗೆಯ ಆಧಾರದ ಮೇಲೆ ಅವನ ಅಮರತ್ವ ಸಾಬೀತಾಗುತ್ತದೆ. ವ್ಯಕ್ತಿ ಬದುಕಿದ ರೀತಿ, ಅವನ ಕಾರ್ಯವೈಕರಿ, ಇತರರೊಂದಿಗಿನ ಒಡನಾಟ ಮತ್ತು ಬಾಂಧವ್ಯ ಎಲ್ಲವೂ ಗಣನೆಗೆ ಬರುವ ಸಮಯ ಸಾವಿನ ಸಮಯ.