<p>ಹುಟ್ಟು ಆಕಸ್ಮಿಕ, ಸಾವು ಖಚಿತ. ಹುಟ್ಟು ನಮ್ಮ ಸಂಭ್ರಮದ ಕ್ಷಣಕ್ಕೆ ಕಾರಣವಾದರೆ ಸಾವು ನಮ್ಮನ್ನು ಇನ್ನಿಲ್ಲದ ದುಃಖಕ್ಕೀಡು ಮಾಡುತ್ತದೆ. ಇದು ಸಹಜ ಪ್ರಕ್ರಿಯೆ. ಜನನ ಕೇವಲ ಕುಟುಂಬಕ್ಕಷ್ಟೇ ತಿಳಿವುದು. ಆದರೆ, ಸಾವು ಜಗತ್ತಿಗೇ ತಿಳಿಯುವಂತಾಗಬೇಕು. ಅದು ನಿಜವಾದ ಬದುಕಿನ ಸಾರ್ಥಕತೆ.</p>.<p>ಪ್ರತಿನಿತ್ಯವೂ ಸಾವುಗಳು ನಮ್ಮ ಸುತ್ತ ಮುತ್ತಲು ಜರುಗುತ್ತಲೇ ಇರುತ್ತವೆ. ಸಾವು ಕೇವಲ ದೇಹಕ್ಕೆ ಮಾತ್ರ. ಆದರೆ, ಮೃತ ವ್ಯಕ್ತಿ ಇಡೀ ಜೀವಮಾನದಲ್ಲಿ ಅಳವಡಿಸಿಕೊಂಡ ವ್ಯಕ್ತಿತ್ವದ ಪರಾಮರ್ಶೆ ಸಾವಿನ ಬಳಿಕ ನಡೆಯುತ್ತದೆ. ಆ ವ್ಯಕ್ತಿಯನ್ನು ಕೇಂದ್ರವಾಗಿಸಿಕೊಂಡು ಬದುಕಿನ ಅವಲೋಕನ ಸಾಗುತ್ತದೆ. ಆ ವ್ಯಕ್ತಿಯ ಸಾಧನೆ ಮತ್ತು ಸಾಮಾಜಿಕ ಕೊಡುಗೆಯ ಆಧಾರದ ಮೇಲೆ ಅವನ ಅಮರತ್ವ ಸಾಬೀತಾಗುತ್ತದೆ. ವ್ಯಕ್ತಿ ಬದುಕಿದ ರೀತಿ, ಅವನ ಕಾರ್ಯವೈಕರಿ, ಇತರರೊಂದಿಗಿನ ಒಡನಾಟ ಮತ್ತು ಬಾಂಧವ್ಯ ಎಲ್ಲವೂ ಗಣನೆಗೆ ಬರುವ ಸಮಯ ಸಾವಿನ ಸಮಯ.</p>.<p>ಜೀವ ಮತ್ತು ಜೀವನ ಎಷ್ಟು ಅಮೂಲ್ಯ ಎನ್ನುವದು ಆ ಗಳಿಗೆಯಲ್ಲಿ ಎಂಥವರಿಗೂ ಅನಿಸದಿರದು. ಸಿಕ್ಕ ಬದುಕನ್ನು ನಾವು ಎಷ್ಟು ಚಂದಗಾಣಿಸಿ ಗೊಂಡಿದ್ದೇವೆ? ಎಷ್ಟು ಹದಗೆಡಿಸಿಕೊಂಡಿದ್ದೇವೆ? ಎಂಬ ಆತ್ಮಾವಲೋಕನವೂ ನಡೆಯುತ್ತದೆ. ಕೊನೆಗೆ ಅರಿವಾಗುವ ಸತ್ಯ ಬದುಕಿದ್ದಾಗ ಇತರರ ಬದುಕಿನಲ್ಲಿ ನಾವೆಷ್ಟು ಪ್ರಮುಖ ಪಾತ್ರ ವಹಿಸಿದ್ದೇವೆ ಎಂಬುದು.</p>.<p class="Subhead"><strong>ಸಂಗ್ರಹ: ಎಂ.ಬಿ.ಕಟ್ಟಿಮನಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಟ್ಟು ಆಕಸ್ಮಿಕ, ಸಾವು ಖಚಿತ. ಹುಟ್ಟು ನಮ್ಮ ಸಂಭ್ರಮದ ಕ್ಷಣಕ್ಕೆ ಕಾರಣವಾದರೆ ಸಾವು ನಮ್ಮನ್ನು ಇನ್ನಿಲ್ಲದ ದುಃಖಕ್ಕೀಡು ಮಾಡುತ್ತದೆ. ಇದು ಸಹಜ ಪ್ರಕ್ರಿಯೆ. ಜನನ ಕೇವಲ ಕುಟುಂಬಕ್ಕಷ್ಟೇ ತಿಳಿವುದು. ಆದರೆ, ಸಾವು ಜಗತ್ತಿಗೇ ತಿಳಿಯುವಂತಾಗಬೇಕು. ಅದು ನಿಜವಾದ ಬದುಕಿನ ಸಾರ್ಥಕತೆ.</p>.<p>ಪ್ರತಿನಿತ್ಯವೂ ಸಾವುಗಳು ನಮ್ಮ ಸುತ್ತ ಮುತ್ತಲು ಜರುಗುತ್ತಲೇ ಇರುತ್ತವೆ. ಸಾವು ಕೇವಲ ದೇಹಕ್ಕೆ ಮಾತ್ರ. ಆದರೆ, ಮೃತ ವ್ಯಕ್ತಿ ಇಡೀ ಜೀವಮಾನದಲ್ಲಿ ಅಳವಡಿಸಿಕೊಂಡ ವ್ಯಕ್ತಿತ್ವದ ಪರಾಮರ್ಶೆ ಸಾವಿನ ಬಳಿಕ ನಡೆಯುತ್ತದೆ. ಆ ವ್ಯಕ್ತಿಯನ್ನು ಕೇಂದ್ರವಾಗಿಸಿಕೊಂಡು ಬದುಕಿನ ಅವಲೋಕನ ಸಾಗುತ್ತದೆ. ಆ ವ್ಯಕ್ತಿಯ ಸಾಧನೆ ಮತ್ತು ಸಾಮಾಜಿಕ ಕೊಡುಗೆಯ ಆಧಾರದ ಮೇಲೆ ಅವನ ಅಮರತ್ವ ಸಾಬೀತಾಗುತ್ತದೆ. ವ್ಯಕ್ತಿ ಬದುಕಿದ ರೀತಿ, ಅವನ ಕಾರ್ಯವೈಕರಿ, ಇತರರೊಂದಿಗಿನ ಒಡನಾಟ ಮತ್ತು ಬಾಂಧವ್ಯ ಎಲ್ಲವೂ ಗಣನೆಗೆ ಬರುವ ಸಮಯ ಸಾವಿನ ಸಮಯ.</p>.<p>ಜೀವ ಮತ್ತು ಜೀವನ ಎಷ್ಟು ಅಮೂಲ್ಯ ಎನ್ನುವದು ಆ ಗಳಿಗೆಯಲ್ಲಿ ಎಂಥವರಿಗೂ ಅನಿಸದಿರದು. ಸಿಕ್ಕ ಬದುಕನ್ನು ನಾವು ಎಷ್ಟು ಚಂದಗಾಣಿಸಿ ಗೊಂಡಿದ್ದೇವೆ? ಎಷ್ಟು ಹದಗೆಡಿಸಿಕೊಂಡಿದ್ದೇವೆ? ಎಂಬ ಆತ್ಮಾವಲೋಕನವೂ ನಡೆಯುತ್ತದೆ. ಕೊನೆಗೆ ಅರಿವಾಗುವ ಸತ್ಯ ಬದುಕಿದ್ದಾಗ ಇತರರ ಬದುಕಿನಲ್ಲಿ ನಾವೆಷ್ಟು ಪ್ರಮುಖ ಪಾತ್ರ ವಹಿಸಿದ್ದೇವೆ ಎಂಬುದು.</p>.<p class="Subhead"><strong>ಸಂಗ್ರಹ: ಎಂ.ಬಿ.ಕಟ್ಟಿಮನಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>