<p>ಲಿಂಗಸುಗೂರು: ನೈತಿಕ ಮೌಲ್ಯಗಳು ಹಾಗೂ ಸಂಸ್ಕಾರಗಳು ಮಕ್ಕಳ ಭವಿಷ್ಯದ ಬುನಾದಿಯಾಗಿವೆ ಎಂದು ಯರಡೋಣಾ ಸಿದ್ಧರಾಮೇಶ್ವರ ಗುರುಮಠದ ಪೀಠಾಧಿಪತಿ ಮುರುಘೇಂದ್ರ ಶಿವಯೋಗಿ ಹೇಳಿದರು. ತಾಲ್ಲೂಕಿನ ಯರಡೋಣಾ ಮಠದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ವೈದಿಕ ಸಂಸ್ಕಾರ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವೇಗದ ಜೀವನದ ಶೈಲಿಯಲ್ಲಿ ಮಕ್ಕಳಿಗೆ ಪಾಲಕರು ಶಿಕ್ಷಣ ನೀಡುವತ್ತ ಆದ್ಯತೆ ನೀಡುತ್ತಿದ್ದಾರೆ ಆದರೆ ಸಂಸ್ಕಾರದ ಅರಿವು ಮಕ್ಕಳಿಗಿಲ್ಲದಾಗಿದೆ. ಪಾಲಕರಿಗೆ, ಗುರು,ಹಿರಿಯರಿಗೆ ಗೌರವ ನೀಡುವ, ಧಾರ್ಮಿಕ ಪ್ರಜ್ಞೆ, ಸಹಾನುಭೂತಿಯಂತಹ ಮೌಲ್ಯಗಳನ್ನು ಚಿಕ್ಕ ವಯಸ್ಸಿನಲ್ಲೇ ಕಲಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗೆ ಸಂಸ್ಕಾರ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ ಸಂಸ್ಕಾರಯುತ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ’ ಎಂದರು.</p>.<p>ಅಮರೇಶ್ವರ ದೇವಸ್ಥಾನದ ಅರ್ಚಕ ಗಂಗಾಧರಯ್ಯ ಶಾಸ್ತ್ರೀ, ಶಿಕ್ಷಕ ಮಹಾಂತಗೌಡ ಬಯ್ಯಾಪುರ ಸೇರಿದಂತೆ ಅನೇಕರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-32-941701611</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು: ನೈತಿಕ ಮೌಲ್ಯಗಳು ಹಾಗೂ ಸಂಸ್ಕಾರಗಳು ಮಕ್ಕಳ ಭವಿಷ್ಯದ ಬುನಾದಿಯಾಗಿವೆ ಎಂದು ಯರಡೋಣಾ ಸಿದ್ಧರಾಮೇಶ್ವರ ಗುರುಮಠದ ಪೀಠಾಧಿಪತಿ ಮುರುಘೇಂದ್ರ ಶಿವಯೋಗಿ ಹೇಳಿದರು. ತಾಲ್ಲೂಕಿನ ಯರಡೋಣಾ ಮಠದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ವೈದಿಕ ಸಂಸ್ಕಾರ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವೇಗದ ಜೀವನದ ಶೈಲಿಯಲ್ಲಿ ಮಕ್ಕಳಿಗೆ ಪಾಲಕರು ಶಿಕ್ಷಣ ನೀಡುವತ್ತ ಆದ್ಯತೆ ನೀಡುತ್ತಿದ್ದಾರೆ ಆದರೆ ಸಂಸ್ಕಾರದ ಅರಿವು ಮಕ್ಕಳಿಗಿಲ್ಲದಾಗಿದೆ. ಪಾಲಕರಿಗೆ, ಗುರು,ಹಿರಿಯರಿಗೆ ಗೌರವ ನೀಡುವ, ಧಾರ್ಮಿಕ ಪ್ರಜ್ಞೆ, ಸಹಾನುಭೂತಿಯಂತಹ ಮೌಲ್ಯಗಳನ್ನು ಚಿಕ್ಕ ವಯಸ್ಸಿನಲ್ಲೇ ಕಲಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗೆ ಸಂಸ್ಕಾರ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ ಸಂಸ್ಕಾರಯುತ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ’ ಎಂದರು.</p>.<p>ಅಮರೇಶ್ವರ ದೇವಸ್ಥಾನದ ಅರ್ಚಕ ಗಂಗಾಧರಯ್ಯ ಶಾಸ್ತ್ರೀ, ಶಿಕ್ಷಕ ಮಹಾಂತಗೌಡ ಬಯ್ಯಾಪುರ ಸೇರಿದಂತೆ ಅನೇಕರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-32-941701611</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>