<p><strong>ನವದೆಹಲಿ/ಬೆಂಗಳೂರು:</strong>ದೇಶದಾದ್ಯಂತ ಹಲವೆಡೆಗಳಲ್ಲಿ ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.</p>.<p>ಹಬ್ಬದ ಪ್ರಯುಕ್ತ ಪುಣ್ಯಕ್ಷೇತ್ರ ವಾರಾಣಸಿಯಲ್ಲಿ ನಸುಕಿನಲ್ಲೇ ಸಾವಿರಾರು ಭಕ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನೂರಾರು ಭಕ್ತರು ಗಂಗಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರು.</p>.<p>ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿಯೂ ಹಬ್ಬದ ಪ್ರಯುಕ್ತ ವಿಶೇಷ ಪೂಜೆ–ಪುನಸ್ಕಾರ ನಡೆಯುತ್ತಿವೆ. ಇಂದು ಸಂಜೆ ಮಕರಜ್ಯೋತಿ ದರ್ಶನದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಕೆಲವೆಡೆ ಮಂಗಳವಾರವೇ ಹಬ್ಬ ಆಚರಿಸಲಾಗಿತ್ತು.</p>.<p><strong>ಗಣ್ಯರಿಂದ ಶುಭಾಶಯ:</strong>ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಪ್ರಮುಖ ನಾಯಕರು ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.</p>.<p>‘ಏಕತಾ ಪ್ರತಿಮೆ’ ಬಳಿ ವರ್ಣಮಯ ಉತ್ತರಾಯಣ ಆಚರಣೆಯ ಚಿತ್ರಗಳನ್ನು ನೋಡಿ ಎಂದು ಕೆಲವು ಫೋಟೊಗಳನ್ನು ಟ್ವೀಟ್ ಮಾಡಿದ್ದಾರೆ ಮೋದಿ.</p>.<p>‘ಸೂರ್ಯನು ಪಥ ಬದಲಿಸುವ, ಹವಾಮಾನವು ಬದಲಾಗುವ ಹಾಗೂ ದೇಶದ ಹಲವು ಕಡೆಗಳಲ್ಲಿ ಕೊಯ್ಲು ಪ್ರಾರಂಭವಾಗುವ ಈ ಸಂದರ್ಭವನ್ನು ಮಕರ ಸಂಕ್ರಾಂತಿ, ಭೋಗಲಿ ಬಿಹು, ಪೊಂಗಲ್, ಉತ್ತರಾಯಣ ಮತ್ತು ಪೌಷ್ ಎಂಬ ಹೆಸರುಗಳಿಂದ ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಶುಭಾಶಯಗಳು’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.</p>.<p>‘ಸೂರ್ಯನ ಪಥ ಬದಲಾದಂತೆ ಎಲ್ಲರ ಬದುಕಿನ ಪಥವೂ ಅಭಿವೃದ್ಧಿಯತ್ತ ಸಾಗಲಿ. ಸುಖ, ಸಮೃದ್ಧಿಯ ಸುಗ್ಗಿ ಪ್ರತಿ ಮನೆ–ಮನ ತುಂಬಲಿ. ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಬೆಂಗಳೂರು:</strong>ದೇಶದಾದ್ಯಂತ ಹಲವೆಡೆಗಳಲ್ಲಿ ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.</p>.<p>ಹಬ್ಬದ ಪ್ರಯುಕ್ತ ಪುಣ್ಯಕ್ಷೇತ್ರ ವಾರಾಣಸಿಯಲ್ಲಿ ನಸುಕಿನಲ್ಲೇ ಸಾವಿರಾರು ಭಕ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನೂರಾರು ಭಕ್ತರು ಗಂಗಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರು.</p>.<p>ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿಯೂ ಹಬ್ಬದ ಪ್ರಯುಕ್ತ ವಿಶೇಷ ಪೂಜೆ–ಪುನಸ್ಕಾರ ನಡೆಯುತ್ತಿವೆ. ಇಂದು ಸಂಜೆ ಮಕರಜ್ಯೋತಿ ದರ್ಶನದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಕೆಲವೆಡೆ ಮಂಗಳವಾರವೇ ಹಬ್ಬ ಆಚರಿಸಲಾಗಿತ್ತು.</p>.<p><strong>ಗಣ್ಯರಿಂದ ಶುಭಾಶಯ:</strong>ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಪ್ರಮುಖ ನಾಯಕರು ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.</p>.<p>‘ಏಕತಾ ಪ್ರತಿಮೆ’ ಬಳಿ ವರ್ಣಮಯ ಉತ್ತರಾಯಣ ಆಚರಣೆಯ ಚಿತ್ರಗಳನ್ನು ನೋಡಿ ಎಂದು ಕೆಲವು ಫೋಟೊಗಳನ್ನು ಟ್ವೀಟ್ ಮಾಡಿದ್ದಾರೆ ಮೋದಿ.</p>.<p>‘ಸೂರ್ಯನು ಪಥ ಬದಲಿಸುವ, ಹವಾಮಾನವು ಬದಲಾಗುವ ಹಾಗೂ ದೇಶದ ಹಲವು ಕಡೆಗಳಲ್ಲಿ ಕೊಯ್ಲು ಪ್ರಾರಂಭವಾಗುವ ಈ ಸಂದರ್ಭವನ್ನು ಮಕರ ಸಂಕ್ರಾಂತಿ, ಭೋಗಲಿ ಬಿಹು, ಪೊಂಗಲ್, ಉತ್ತರಾಯಣ ಮತ್ತು ಪೌಷ್ ಎಂಬ ಹೆಸರುಗಳಿಂದ ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಶುಭಾಶಯಗಳು’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.</p>.<p>‘ಸೂರ್ಯನ ಪಥ ಬದಲಾದಂತೆ ಎಲ್ಲರ ಬದುಕಿನ ಪಥವೂ ಅಭಿವೃದ್ಧಿಯತ್ತ ಸಾಗಲಿ. ಸುಖ, ಸಮೃದ್ಧಿಯ ಸುಗ್ಗಿ ಪ್ರತಿ ಮನೆ–ಮನ ತುಂಬಲಿ. ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>