<p>ಮಲೇಬೆನ್ನೂರು: ಸಮೀಪದ ಕೊಮಾರನಹಳ್ಳಿ ರಂಗನಾಥಾಶ್ರಮದ ಯಾಗಶಾಲೆಯಲ್ಲಿ ಭಾನುವಾರ ರಾಮತಾರಕ ಹೋಮ ಸಂಭ್ರಮದಿಂದ ಜರುಗಿತು.</p>.<p>ಕಳೆದೆರಡು ದಿನದಿಂದ ಭಕ್ತ ಸಮೂಹ ಜಪಮಾಲೆ ಹಿಡಿದು ರಾಮನಾಮ ಸ್ಮರಣೆ, ಜಪ ವಿಧಿಯಲ್ಲಿ ಪಾಲ್ಗೊಂಡಿತ್ತು. ಲೋಕಕಲ್ಯಾಣಾರ್ಥವಾಗಿ ಹೋಮ, ಸೀತಾರಾಮ ಕಲ್ಯಾಣೋತ್ಸವ, ರಾಮ ಪಟ್ಟಾಭಿಷೇಕ ನಡೆಸಿ ದೇಶದಲ್ಲಿ ಮಳೆ–ಬೆಳೆ ಸುಭಿಕ್ಷಕ್ಕೆ ವಿಶೇಷ ಪೂಜೆ, ಪ್ರಾರ್ಥನೆ ಮೂಲಕ ಸಂಕಲ್ಪ ಮಾಡಲಾಯಿತು.</p>.<p>ಭಕ್ತ ಸಮೂಹ ಶ್ರೀರಾಮ ಜಯರಾಮ ಜಯಜಯ ರಾಮ ಜಯಘೋಷ ಹಾಕಿ ಭಕ್ತಿ ಸಮರ್ಪಣೆ ಮಾಡಿತು. ಸೀತಾ, ರಾಮ, ಆಂಜನೇಯ, ಲಕ್ಷ್ಮಣರ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು. ಭಕ್ತರು ಕೀರ್ತನೆ ಹಾಡಿ, ಗುರು ಭಜನೆ ಮಾಡಿದರು.</p>.<p>ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ಧಾರ್ಮಿಕ ವಿಧಿಯಲ್ಲಿ ಪಾಲ್ಗೊಂಡರು. ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಶಂಕರಲಿಂಗ ಭಗವಾನ್ ಸರಸ್ವತಿ ಪರಮಹಂಸ ಟ್ರಸ್ಟ್ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-242733871</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ಸಮೀಪದ ಕೊಮಾರನಹಳ್ಳಿ ರಂಗನಾಥಾಶ್ರಮದ ಯಾಗಶಾಲೆಯಲ್ಲಿ ಭಾನುವಾರ ರಾಮತಾರಕ ಹೋಮ ಸಂಭ್ರಮದಿಂದ ಜರುಗಿತು.</p>.<p>ಕಳೆದೆರಡು ದಿನದಿಂದ ಭಕ್ತ ಸಮೂಹ ಜಪಮಾಲೆ ಹಿಡಿದು ರಾಮನಾಮ ಸ್ಮರಣೆ, ಜಪ ವಿಧಿಯಲ್ಲಿ ಪಾಲ್ಗೊಂಡಿತ್ತು. ಲೋಕಕಲ್ಯಾಣಾರ್ಥವಾಗಿ ಹೋಮ, ಸೀತಾರಾಮ ಕಲ್ಯಾಣೋತ್ಸವ, ರಾಮ ಪಟ್ಟಾಭಿಷೇಕ ನಡೆಸಿ ದೇಶದಲ್ಲಿ ಮಳೆ–ಬೆಳೆ ಸುಭಿಕ್ಷಕ್ಕೆ ವಿಶೇಷ ಪೂಜೆ, ಪ್ರಾರ್ಥನೆ ಮೂಲಕ ಸಂಕಲ್ಪ ಮಾಡಲಾಯಿತು.</p>.<p>ಭಕ್ತ ಸಮೂಹ ಶ್ರೀರಾಮ ಜಯರಾಮ ಜಯಜಯ ರಾಮ ಜಯಘೋಷ ಹಾಕಿ ಭಕ್ತಿ ಸಮರ್ಪಣೆ ಮಾಡಿತು. ಸೀತಾ, ರಾಮ, ಆಂಜನೇಯ, ಲಕ್ಷ್ಮಣರ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು. ಭಕ್ತರು ಕೀರ್ತನೆ ಹಾಡಿ, ಗುರು ಭಜನೆ ಮಾಡಿದರು.</p>.<p>ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ಧಾರ್ಮಿಕ ವಿಧಿಯಲ್ಲಿ ಪಾಲ್ಗೊಂಡರು. ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಶಂಕರಲಿಂಗ ಭಗವಾನ್ ಸರಸ್ವತಿ ಪರಮಹಂಸ ಟ್ರಸ್ಟ್ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-242733871</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>