<p>ಮೊಳಕಾಲ್ಮುರು: ಬಸವಾದಿ ಶರಣರ ಚಿಂತನೆಗಳನ್ನು ನಿರಂತರವಾಗಿ ಅನುಸರಿಸುವ ಅಗತ್ಯವಿದೆ ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಮಠದಲ್ಲಿ ಈಚೆಗೆ ನಡೆದ 95ನೇ ಶಿವಾನುಭವ ಗೋಷ್ಠಿಯಲ್ಲಿ ಮಾತನಾಡಿದರು.</p>.<p>ಬುದ್ಧ, ಬಸವ, ಅಂಬೇಡ್ಕರ್ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ಇವುಗಳ ಬಗ್ಗೆ ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಿದ್ದಯ್ಯನಕೋಟೆ ಶಾಖಾಮಠ 28 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.</p>.<p>ಪ್ರತಿ ಹುಣ್ಣಿಮೆ ದಿನದಂದು ನಾಡಿನ ಅನುಭವಿ ಶರಣರನ್ನು ಕರೆಸಿ ಶರಣರ ತತ್ವಗಳ ಬಗ್ಗೆ ಉಪನ್ಯಾಸ ನೀಡುವ ಕೆಲಸವನ್ನು ಮಠವು ಮಾಡಿಕೊಂಡು ಬರುತ್ತಿದೆ. ಪ್ರತಿ ಕಾರ್ಯಕ್ರಮಕ್ಕೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮಠದ ಬಸವಲಿಂಗ ಸ್ವಾಮೀಜಿ ತಿಳಿಸಿದರು.</p>.<p>ಜಾತ್ರಾ ಸಮಿತಿ ಅಧ್ಯಕ್ಷ ಭೋಗೇಶ್ ಗೌಡ, ಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಕೆ.ಪಿ. ಪಂಪಾಪತಿ, ನಾಗೇಂದ್ರಪ್ಪ ಇದ್ದರು.</p>.<p>ಸಂಗೀತ ಶಿಕ್ಷಕ ಕೆ.ಒ. ಶಿವಣ್ಣ ನೇತೃತ್ವದಲ್ಲಿ ವಚನ ಗಾಯನ ಕಾರ್ಯಕ್ರಮ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-44-1900774573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ಬಸವಾದಿ ಶರಣರ ಚಿಂತನೆಗಳನ್ನು ನಿರಂತರವಾಗಿ ಅನುಸರಿಸುವ ಅಗತ್ಯವಿದೆ ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಮಠದಲ್ಲಿ ಈಚೆಗೆ ನಡೆದ 95ನೇ ಶಿವಾನುಭವ ಗೋಷ್ಠಿಯಲ್ಲಿ ಮಾತನಾಡಿದರು.</p>.<p>ಬುದ್ಧ, ಬಸವ, ಅಂಬೇಡ್ಕರ್ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ಇವುಗಳ ಬಗ್ಗೆ ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಿದ್ದಯ್ಯನಕೋಟೆ ಶಾಖಾಮಠ 28 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.</p>.<p>ಪ್ರತಿ ಹುಣ್ಣಿಮೆ ದಿನದಂದು ನಾಡಿನ ಅನುಭವಿ ಶರಣರನ್ನು ಕರೆಸಿ ಶರಣರ ತತ್ವಗಳ ಬಗ್ಗೆ ಉಪನ್ಯಾಸ ನೀಡುವ ಕೆಲಸವನ್ನು ಮಠವು ಮಾಡಿಕೊಂಡು ಬರುತ್ತಿದೆ. ಪ್ರತಿ ಕಾರ್ಯಕ್ರಮಕ್ಕೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮಠದ ಬಸವಲಿಂಗ ಸ್ವಾಮೀಜಿ ತಿಳಿಸಿದರು.</p>.<p>ಜಾತ್ರಾ ಸಮಿತಿ ಅಧ್ಯಕ್ಷ ಭೋಗೇಶ್ ಗೌಡ, ಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಕೆ.ಪಿ. ಪಂಪಾಪತಿ, ನಾಗೇಂದ್ರಪ್ಪ ಇದ್ದರು.</p>.<p>ಸಂಗೀತ ಶಿಕ್ಷಕ ಕೆ.ಒ. ಶಿವಣ್ಣ ನೇತೃತ್ವದಲ್ಲಿ ವಚನ ಗಾಯನ ಕಾರ್ಯಕ್ರಮ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-44-1900774573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>