<p>ಮುಂಡರಗಿ: ‘ಬದುಕಿನಲ್ಲಿ ಉತ್ತಮ ಗುರು ದೊರೆಯುವುದು ದುರ್ಲಭ. ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ ಮೊದಲಾದ ಕ್ಷೇತ್ರಗಳಿಗೆ ಶಕ್ತಿ ತುಂಬುವ ಮೂಲಕ ಅನ್ನದಾನೀಶ್ವರ ಸ್ವಾಮಿಜಿ ಅವರು ನಾಡಿನ ಶ್ರೇಷ್ಠ ಗುರುವಾಗಿದ್ದಾರೆ’ ಎಂದು ಹೂವಿನಸಿಗ್ಲಿಯ ಚನ್ನವೀರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಜಗದ್ಗುರು ಅನ್ನದಾನೀಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅನ್ನದಾನೀಶ್ವರ ಸ್ವಾಮೀಜಿ ಅವರ 86ನೇ ಜನ್ಮದಿನ, ಬಸವ ಜಯಂತಿ ಆಚರಣೆ ಹಾಗೂ 1,946ನೇ ಮಾಸಿಕ ಶಿವಾನುಭವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಬಿಇಒ ಗಂಗಾಧರ ಅಣ್ಣಿಗೇರಿ ಮಾತನಾಡಿ, ‘ಗುರುಗಳು, ಅಧಿಕಾರಿಗಳು ಹಾಗೂ ಪಾಲಕರ ಮಾರ್ಗದರ್ಶನದಲ್ಲಿ ನಮ್ಮ ವಿದ್ಯಾರ್ಥಿಗಳು ಪ್ರಸ್ತುತ ವರ್ಷ ಉತ್ತಮ ಫಲಿತಾಂಶ ನೀಡಿದ್ದಾರೆ. ಶ್ರೀಮಠದ ವತಿಯಿಂದ ಪ್ರತೀ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಸಂತಸದ ಸಂಗತಿಯಾಗಿದೆ’ ಎಂದರು.</p>.<p>ಆಡಳಿತಾಧಿಕಾರಿ ಬಿ.ಜಿ.ಜವಳಿ ಮಾತನಾಡಿ, ‘ಸಮಾಜ ಸುಧಾರಣೆಗೆ ಬದುಕನ್ನು ಮೀಸಲಿಟ್ಟ ಬಸವಾದಿ ಶರಣರು ನಮಗೆಲ್ಲ ಆದರ್ಶಪ್ರಾಯರಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅನ್ನದಾನೀಶ್ವರ ಸ್ವಾಮಿಜಿ ಸಮಾರಂಭದ ಸಾನಿಧ್ಯ ವಹಿಸಿದ್ದರು. ಮಲ್ಲಿಕಾರ್ಜುನ ಮಹಾಸ್ವಾಮಿಜಿ ನೇತೃತ್ವ ವಹಿಸಿದ್ದರು. ಅಂದಾನಪ್ಪ ವಿಭೂತಿ ಅವರು ಅನ್ನದಾನೀಶ್ವರ ಮಹಾಸ್ವಾಮಿಜಿ ಅವರ ಜೀವನ, ಸಾಧನೆ ಕುರಿತು ಉಪನ್ಯಾಸ ನೀಡಿದರು.</p>.<p>ಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಜಾಫರ್ ಬಚೇರಿ, ಭಕ್ತಿ ಸೇವೆ ವಹಿಸಿಕೊಂಡಿದ್ದ ಗದಗಯ್ಯ ಗುರುಸ್ವಾಮಿಮಠ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಸವರಾಜ ಸಿದ್ಧಣ್ಣವರ ಸಂಗೀತ ಸೇವೆ ನಡೆಸಿಕೊಟ್ಟರು.</p>.<p>ಶ್ರೀಮಠದ ಭಕ್ತರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸಿದರು. ಶ್ರೀಮಠದ ಆವರಣದಲ್ಲಿ ಸಸಿ ನೆಡಲಾಯಿತು.</p>.<p>ಚನ್ನಮಲ್ಲ ಸ್ವಾಮೀಜಿ, ಇಮ್ಮಡಿ ನಿಜಗುಣ ಸ್ವಾಮೀಜಿ, ಅಭಿನವ ಚನ್ನಬಸವ ಸ್ವಾಮೀಜಿ, ಶಾಂತಲಿಂಗೇಶ್ವರ ಸ್ವಾಮೀಜಿ, ಶಾಸಕ ಡಾ. ಚಂದ್ರು ಲಮಾಣಿ ಇದ್ದರು. ಎಸ್.ಆರ್.ರಿತ್ತಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-23-233100164</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: ‘ಬದುಕಿನಲ್ಲಿ ಉತ್ತಮ ಗುರು ದೊರೆಯುವುದು ದುರ್ಲಭ. ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ ಮೊದಲಾದ ಕ್ಷೇತ್ರಗಳಿಗೆ ಶಕ್ತಿ ತುಂಬುವ ಮೂಲಕ ಅನ್ನದಾನೀಶ್ವರ ಸ್ವಾಮಿಜಿ ಅವರು ನಾಡಿನ ಶ್ರೇಷ್ಠ ಗುರುವಾಗಿದ್ದಾರೆ’ ಎಂದು ಹೂವಿನಸಿಗ್ಲಿಯ ಚನ್ನವೀರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಜಗದ್ಗುರು ಅನ್ನದಾನೀಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅನ್ನದಾನೀಶ್ವರ ಸ್ವಾಮೀಜಿ ಅವರ 86ನೇ ಜನ್ಮದಿನ, ಬಸವ ಜಯಂತಿ ಆಚರಣೆ ಹಾಗೂ 1,946ನೇ ಮಾಸಿಕ ಶಿವಾನುಭವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಬಿಇಒ ಗಂಗಾಧರ ಅಣ್ಣಿಗೇರಿ ಮಾತನಾಡಿ, ‘ಗುರುಗಳು, ಅಧಿಕಾರಿಗಳು ಹಾಗೂ ಪಾಲಕರ ಮಾರ್ಗದರ್ಶನದಲ್ಲಿ ನಮ್ಮ ವಿದ್ಯಾರ್ಥಿಗಳು ಪ್ರಸ್ತುತ ವರ್ಷ ಉತ್ತಮ ಫಲಿತಾಂಶ ನೀಡಿದ್ದಾರೆ. ಶ್ರೀಮಠದ ವತಿಯಿಂದ ಪ್ರತೀ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಸಂತಸದ ಸಂಗತಿಯಾಗಿದೆ’ ಎಂದರು.</p>.<p>ಆಡಳಿತಾಧಿಕಾರಿ ಬಿ.ಜಿ.ಜವಳಿ ಮಾತನಾಡಿ, ‘ಸಮಾಜ ಸುಧಾರಣೆಗೆ ಬದುಕನ್ನು ಮೀಸಲಿಟ್ಟ ಬಸವಾದಿ ಶರಣರು ನಮಗೆಲ್ಲ ಆದರ್ಶಪ್ರಾಯರಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಅನ್ನದಾನೀಶ್ವರ ಸ್ವಾಮಿಜಿ ಸಮಾರಂಭದ ಸಾನಿಧ್ಯ ವಹಿಸಿದ್ದರು. ಮಲ್ಲಿಕಾರ್ಜುನ ಮಹಾಸ್ವಾಮಿಜಿ ನೇತೃತ್ವ ವಹಿಸಿದ್ದರು. ಅಂದಾನಪ್ಪ ವಿಭೂತಿ ಅವರು ಅನ್ನದಾನೀಶ್ವರ ಮಹಾಸ್ವಾಮಿಜಿ ಅವರ ಜೀವನ, ಸಾಧನೆ ಕುರಿತು ಉಪನ್ಯಾಸ ನೀಡಿದರು.</p>.<p>ಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಜಾಫರ್ ಬಚೇರಿ, ಭಕ್ತಿ ಸೇವೆ ವಹಿಸಿಕೊಂಡಿದ್ದ ಗದಗಯ್ಯ ಗುರುಸ್ವಾಮಿಮಠ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಸವರಾಜ ಸಿದ್ಧಣ್ಣವರ ಸಂಗೀತ ಸೇವೆ ನಡೆಸಿಕೊಟ್ಟರು.</p>.<p>ಶ್ರೀಮಠದ ಭಕ್ತರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸಿದರು. ಶ್ರೀಮಠದ ಆವರಣದಲ್ಲಿ ಸಸಿ ನೆಡಲಾಯಿತು.</p>.<p>ಚನ್ನಮಲ್ಲ ಸ್ವಾಮೀಜಿ, ಇಮ್ಮಡಿ ನಿಜಗುಣ ಸ್ವಾಮೀಜಿ, ಅಭಿನವ ಚನ್ನಬಸವ ಸ್ವಾಮೀಜಿ, ಶಾಂತಲಿಂಗೇಶ್ವರ ಸ್ವಾಮೀಜಿ, ಶಾಸಕ ಡಾ. ಚಂದ್ರು ಲಮಾಣಿ ಇದ್ದರು. ಎಸ್.ಆರ್.ರಿತ್ತಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-23-233100164</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>