<p>ನರೇಗಲ್: ‘ಮಹಾಮಾನವತಾವಾದಿ ಬಸವಣ್ಣನವರು ಬೋಧಿಸಿದ ಕಾಯಕವೇ ಕೈಲಾಸ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳದಿದ್ದರೆ ಬದುಕು ದುಸ್ತರವಾಗುತ್ತದೆ’ ಎಂದು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್. ಧಡೇಸೂರಮಠ ಹೇಳಿದರು.</p>.<p>ಪಟ್ಟಣದ ಅನ್ನದಾನೇಶ್ವರ ಶಿವಾನುಭವ ಮಂಟಪದಲ್ಲಿ ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠ, ಅಕ್ಷರ ಭಾರತ ಪ್ರತಿಷ್ಠಾನ ಗದಗ ಹಾಗೂ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ವತಿಯಿಂದ ಈಚೆಗೆ ನಡೆದ 72ನೇ ಶಿವಾನುಭವ ಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಬಸವಣ್ಣನವರು ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದವರು. ಅನುಭವ ಮಂಟಪ ಸ್ಥಾಪಿಸಿ ಸಂಸತ್ತಿನ ಕಲ್ಪನೆ ನೀಡಿದವರು. ಬಸವಣ್ಣನವರು ತತ್ವಾದರ್ಶ ಇಂದಿಗೂ ಪ್ರಸ್ತುತ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಸಂಗಮೇಶ ಹೂಲಗೇರಿ ಮಾತನಾಡಿದರು. ಸಾವಯವ ಕೃಷಿಕ ವೀರೇಶ ನೇಗಲಿ, ಕಲ್ಲಯ್ಯ ಹಿರೇಮಠ, ಎಫ್. ಎನ್. ಹುಡೇದ, ಸಂಗಯ್ಯ ಪ್ರಭುಸ್ವಾಮಿಮಠ, ಬಿ.ಟಿ. ತಾಳಿ, ಎಚ್.ಎಂ. ಹಾದಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-23-1863271404</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರೇಗಲ್: ‘ಮಹಾಮಾನವತಾವಾದಿ ಬಸವಣ್ಣನವರು ಬೋಧಿಸಿದ ಕಾಯಕವೇ ಕೈಲಾಸ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳದಿದ್ದರೆ ಬದುಕು ದುಸ್ತರವಾಗುತ್ತದೆ’ ಎಂದು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್. ಧಡೇಸೂರಮಠ ಹೇಳಿದರು.</p>.<p>ಪಟ್ಟಣದ ಅನ್ನದಾನೇಶ್ವರ ಶಿವಾನುಭವ ಮಂಟಪದಲ್ಲಿ ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠ, ಅಕ್ಷರ ಭಾರತ ಪ್ರತಿಷ್ಠಾನ ಗದಗ ಹಾಗೂ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ವತಿಯಿಂದ ಈಚೆಗೆ ನಡೆದ 72ನೇ ಶಿವಾನುಭವ ಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಬಸವಣ್ಣನವರು ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದವರು. ಅನುಭವ ಮಂಟಪ ಸ್ಥಾಪಿಸಿ ಸಂಸತ್ತಿನ ಕಲ್ಪನೆ ನೀಡಿದವರು. ಬಸವಣ್ಣನವರು ತತ್ವಾದರ್ಶ ಇಂದಿಗೂ ಪ್ರಸ್ತುತ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಸಂಗಮೇಶ ಹೂಲಗೇರಿ ಮಾತನಾಡಿದರು. ಸಾವಯವ ಕೃಷಿಕ ವೀರೇಶ ನೇಗಲಿ, ಕಲ್ಲಯ್ಯ ಹಿರೇಮಠ, ಎಫ್. ಎನ್. ಹುಡೇದ, ಸಂಗಯ್ಯ ಪ್ರಭುಸ್ವಾಮಿಮಠ, ಬಿ.ಟಿ. ತಾಳಿ, ಎಚ್.ಎಂ. ಹಾದಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-23-1863271404</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>