<p>ನವರಾತ್ರಿ ಮೊದಲ ದಿನದಿಂದ ಕೊನೆಯ ದಿನದವರೆಗೂ ದುರ್ಗೆಯ 9 ಅವತಾರಗಳನ್ನು ಪ್ರತಿದಿನ ಪೂಜಿಸಲಾಗುತ್ತದೆ. ನಿತ್ಯ ದೇವಿಯ ಒಂದೊಂದು ಅವತಾರಗಳಿಗೆ ಶ್ರದ್ಧೆಯಿಂದ ಪೂಜೆ ಸಲ್ಲಿಸಲಾಗುತ್ತದೆ. ನವರಾತ್ರಿಯ ಎರಡನೇಯ ದಿನ ಆಶ್ವಯುಜ ಮಾಸದ ಶುಕ್ಲ ದ್ವಿತೀಯದಂದು ಬ್ರಹ್ಮಚಾರಿಣಿಯನ್ನು ಆರಾಧನೆ ಮಾಡಲಾಗುತ್ತದೆ.</p><p>ಹೆಸರೇ ಹೇಳುವಂತೆ ಬ್ರಹ್ಮಚಾರಿಣಿ ಅಂದರೆ ಅವಿವಾಹಿತೆ. ಶಾಂತ ಸ್ವಭಾವವಿರುವ ಬ್ರಹ್ಮಚಾರಿಣಿಯು ಭಕ್ತರಿಗೆ ಶಾಂತಿ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಾಳೆ. ಬ್ರಹ್ಮಚಾರಿಣಿಯನ್ನು ಆರಾಧಿಸುವುದರಿಂದ ಸಿಗುವ ಲಾಭಗಳೇನು? ಪೂಜಾ ವಿಧಾನದ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ</p><p><strong>ದೇವಿಯ ರೂಪ ಯಾವುದು?</strong></p><p>ಬ್ರಹ್ಮಚಾರಿಣಿಯು ಹಸಿರು ಬಣ್ಣದ ವಸ್ತ್ರವನ್ನು ತೊಟ್ಟಿರುತ್ತಾಳೆ. ಒಂದು ಕೈಯಲ್ಲಿ ಜಪಮಾಲೆ ಇನ್ನೊಂದು ಕೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ತನ್ನ ಭಕ್ತರಿಗೆ ಸಂತೋಷ ಹಾಗೂ ಜ್ಞಾನವನ್ನು ನೀಡುತ್ತಾಳೆ. </p><p><strong>ಪುರಾಣದ ಕಥೆಯೇನು?</strong> </p><p>ಪುರಾಣದ ಪ್ರಕಾರ, ಪಾರ್ವತಿಯು ಹಿಮಾಲಯದ ಪುತ್ರಿಯಾಗಿ ಜನಿಸಿದಳು. ಪರಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ. ಇದರಿಂದಾಗಿ ಬ್ರಹ್ಮಚಾರಿಣಿ ಎಂಬ ಹೆಸರು ಬಂದಿದೆ. ತಪಸ್ಸಿನ ವೇಳೆಯಲ್ಲಿ ಹೂ, ಹಣ್ಣು ಹಾಗೂ ಎಲೆಗಳನ್ನು ಸೇವಿಸುತ್ತಿದ್ದಳು. ಕಾಲಾನಂತರದಲ್ಲಿ ಎಲೆಗಳ ಸೇವನೆಯನ್ನು ನಿಲ್ಲಿಸುತ್ತಾಳೆ. ಈ ಕಾರಣಕ್ಕಾಗಿ ಆಕೆಯನ್ನು ಅಪರ್ಣ ಎಂತಲೂ ಕರೆಯಲಾಗುತ್ತದೆ. </p><p><strong>ಪೂಜಿಸುವುದರಿಂದಾಗುವ ಲಾಭವೇನು?</strong></p><p>ಬ್ರಹ್ಮಚಾರಿಣಿಯು ಸಂತೋಷ ಮತ್ತು ಶಾಂತ ಸ್ವಭಾವದ ರೂಪವಾಗಿದೆ. ಕಠಿಣವಾದದ್ದನ್ನು ಅಭ್ಯಾಸ ಮಾಡಲು, ಮೋಕ್ಷವನ್ನು ಪಡೆಯಲು ಅಥವಾ ಕಾರ್ಯಸಾಧನೆಗಾಗಿ ಈ ಅವತಾರವನ್ನು ಪೂಜಿಸುವುದರಿಂದ ಒಳಿತಾಗುತ್ತದೆ. ದೇವಿಯು ಅನುಗ್ರಹ ಮತ್ತು ಸಮೃದ್ಧಿಯನ್ನು ಕೊಡುತ್ತಾಳೆ. ಬ್ರಹ್ಮಚಾರಿಣಿಯ ಆರಾಧನೆ ಮಾಡುವುದು ತಪಸ್ಸಿಗೆ ಸಮನಾಗಿರುತ್ತದೆ. ಭಕ್ತಿಯಿಂದ ದೇವಿಯನ್ನು ಪೂಜಿಸಿದರೇ ಕುಟುಂಬಕ್ಕೆ ಶಾಂತಿ ಹಾಗೂ ಸಮೃದ್ಧಿ ದೊರೆಯಲಿದೆ.</p><p><strong>ಬ್ರಹ್ಮಚಾರಿಣಿಯ ಅರ್ಚನೆ ಮಂತ್ರ ಯಾವುದು ?</strong></p><p>’ಓಂ ದೇವಿ ಬ್ರಹ್ಮಚಾರಿಣಿಯೇ ನಮಃ </p><p>ಓಂ ದೇವಿ ಬ್ರಹ್ಮಚಾರಿಣಿಯೇ ನಮಃ</p><p>ದೇವಿ ಪ್ರಸಾದಿತುಮಹಿ ಬ್ರಹ್ಮಚಾರಿಣಿಯತಮ:’</p><p><strong>ದೇವಿಯ ಆರಾಧನೆ ಹೇಗೆ? </strong></p><p>ದೇವಿಯ ಆರಾಧನೆಯನ್ನು ಮಾಡಲು ನಿಗದಿತ ಸಮಯವಿಲ್ಲ, ಆ ದಿನ ಯಾವ ಸಮಯದಲ್ಲಾದರೂ ಪೂಜೆ ಸಲ್ಲಿಸಬಹುದು. ಬ್ರಹ್ಮಚಾರಿಣಿಯು ಸಮೃದ್ಧಿ ಮತ್ತು ಶಾಂತಿಯ ಸಂಕೇತವಾಗಿರುವ ಹಸಿರು ಬಣ್ಣದ ವಸ್ತ್ರವನ್ನು ಧರಿಸುತ್ತಾಳೆ. ಇದೇ ಬಣ್ಣದ ಬಟ್ಟೆಗಳನ್ನು ಧರಿಸಿ ಪೂಜಿಸುವುದರಿಂದ ಸಮೃದ್ಧಿ ಹಾಗೂ ಜ್ಞಾನವನ್ನು ಪಡೆಯಬಹುದು.</p>.ಕುಂದಾಪುರ: ಕೊಲ್ಲೂರಿನಲ್ಲಿ ಇಂದಿನಿಂದ ನವರಾತ್ರಿ ಉತ್ಸವ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವರಾತ್ರಿ ಮೊದಲ ದಿನದಿಂದ ಕೊನೆಯ ದಿನದವರೆಗೂ ದುರ್ಗೆಯ 9 ಅವತಾರಗಳನ್ನು ಪ್ರತಿದಿನ ಪೂಜಿಸಲಾಗುತ್ತದೆ. ನಿತ್ಯ ದೇವಿಯ ಒಂದೊಂದು ಅವತಾರಗಳಿಗೆ ಶ್ರದ್ಧೆಯಿಂದ ಪೂಜೆ ಸಲ್ಲಿಸಲಾಗುತ್ತದೆ. ನವರಾತ್ರಿಯ ಎರಡನೇಯ ದಿನ ಆಶ್ವಯುಜ ಮಾಸದ ಶುಕ್ಲ ದ್ವಿತೀಯದಂದು ಬ್ರಹ್ಮಚಾರಿಣಿಯನ್ನು ಆರಾಧನೆ ಮಾಡಲಾಗುತ್ತದೆ.</p><p>ಹೆಸರೇ ಹೇಳುವಂತೆ ಬ್ರಹ್ಮಚಾರಿಣಿ ಅಂದರೆ ಅವಿವಾಹಿತೆ. ಶಾಂತ ಸ್ವಭಾವವಿರುವ ಬ್ರಹ್ಮಚಾರಿಣಿಯು ಭಕ್ತರಿಗೆ ಶಾಂತಿ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಾಳೆ. ಬ್ರಹ್ಮಚಾರಿಣಿಯನ್ನು ಆರಾಧಿಸುವುದರಿಂದ ಸಿಗುವ ಲಾಭಗಳೇನು? ಪೂಜಾ ವಿಧಾನದ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ</p><p><strong>ದೇವಿಯ ರೂಪ ಯಾವುದು?</strong></p><p>ಬ್ರಹ್ಮಚಾರಿಣಿಯು ಹಸಿರು ಬಣ್ಣದ ವಸ್ತ್ರವನ್ನು ತೊಟ್ಟಿರುತ್ತಾಳೆ. ಒಂದು ಕೈಯಲ್ಲಿ ಜಪಮಾಲೆ ಇನ್ನೊಂದು ಕೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ತನ್ನ ಭಕ್ತರಿಗೆ ಸಂತೋಷ ಹಾಗೂ ಜ್ಞಾನವನ್ನು ನೀಡುತ್ತಾಳೆ. </p><p><strong>ಪುರಾಣದ ಕಥೆಯೇನು?</strong> </p><p>ಪುರಾಣದ ಪ್ರಕಾರ, ಪಾರ್ವತಿಯು ಹಿಮಾಲಯದ ಪುತ್ರಿಯಾಗಿ ಜನಿಸಿದಳು. ಪರಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ. ಇದರಿಂದಾಗಿ ಬ್ರಹ್ಮಚಾರಿಣಿ ಎಂಬ ಹೆಸರು ಬಂದಿದೆ. ತಪಸ್ಸಿನ ವೇಳೆಯಲ್ಲಿ ಹೂ, ಹಣ್ಣು ಹಾಗೂ ಎಲೆಗಳನ್ನು ಸೇವಿಸುತ್ತಿದ್ದಳು. ಕಾಲಾನಂತರದಲ್ಲಿ ಎಲೆಗಳ ಸೇವನೆಯನ್ನು ನಿಲ್ಲಿಸುತ್ತಾಳೆ. ಈ ಕಾರಣಕ್ಕಾಗಿ ಆಕೆಯನ್ನು ಅಪರ್ಣ ಎಂತಲೂ ಕರೆಯಲಾಗುತ್ತದೆ. </p><p><strong>ಪೂಜಿಸುವುದರಿಂದಾಗುವ ಲಾಭವೇನು?</strong></p><p>ಬ್ರಹ್ಮಚಾರಿಣಿಯು ಸಂತೋಷ ಮತ್ತು ಶಾಂತ ಸ್ವಭಾವದ ರೂಪವಾಗಿದೆ. ಕಠಿಣವಾದದ್ದನ್ನು ಅಭ್ಯಾಸ ಮಾಡಲು, ಮೋಕ್ಷವನ್ನು ಪಡೆಯಲು ಅಥವಾ ಕಾರ್ಯಸಾಧನೆಗಾಗಿ ಈ ಅವತಾರವನ್ನು ಪೂಜಿಸುವುದರಿಂದ ಒಳಿತಾಗುತ್ತದೆ. ದೇವಿಯು ಅನುಗ್ರಹ ಮತ್ತು ಸಮೃದ್ಧಿಯನ್ನು ಕೊಡುತ್ತಾಳೆ. ಬ್ರಹ್ಮಚಾರಿಣಿಯ ಆರಾಧನೆ ಮಾಡುವುದು ತಪಸ್ಸಿಗೆ ಸಮನಾಗಿರುತ್ತದೆ. ಭಕ್ತಿಯಿಂದ ದೇವಿಯನ್ನು ಪೂಜಿಸಿದರೇ ಕುಟುಂಬಕ್ಕೆ ಶಾಂತಿ ಹಾಗೂ ಸಮೃದ್ಧಿ ದೊರೆಯಲಿದೆ.</p><p><strong>ಬ್ರಹ್ಮಚಾರಿಣಿಯ ಅರ್ಚನೆ ಮಂತ್ರ ಯಾವುದು ?</strong></p><p>’ಓಂ ದೇವಿ ಬ್ರಹ್ಮಚಾರಿಣಿಯೇ ನಮಃ </p><p>ಓಂ ದೇವಿ ಬ್ರಹ್ಮಚಾರಿಣಿಯೇ ನಮಃ</p><p>ದೇವಿ ಪ್ರಸಾದಿತುಮಹಿ ಬ್ರಹ್ಮಚಾರಿಣಿಯತಮ:’</p><p><strong>ದೇವಿಯ ಆರಾಧನೆ ಹೇಗೆ? </strong></p><p>ದೇವಿಯ ಆರಾಧನೆಯನ್ನು ಮಾಡಲು ನಿಗದಿತ ಸಮಯವಿಲ್ಲ, ಆ ದಿನ ಯಾವ ಸಮಯದಲ್ಲಾದರೂ ಪೂಜೆ ಸಲ್ಲಿಸಬಹುದು. ಬ್ರಹ್ಮಚಾರಿಣಿಯು ಸಮೃದ್ಧಿ ಮತ್ತು ಶಾಂತಿಯ ಸಂಕೇತವಾಗಿರುವ ಹಸಿರು ಬಣ್ಣದ ವಸ್ತ್ರವನ್ನು ಧರಿಸುತ್ತಾಳೆ. ಇದೇ ಬಣ್ಣದ ಬಟ್ಟೆಗಳನ್ನು ಧರಿಸಿ ಪೂಜಿಸುವುದರಿಂದ ಸಮೃದ್ಧಿ ಹಾಗೂ ಜ್ಞಾನವನ್ನು ಪಡೆಯಬಹುದು.</p>.ಕುಂದಾಪುರ: ಕೊಲ್ಲೂರಿನಲ್ಲಿ ಇಂದಿನಿಂದ ನವರಾತ್ರಿ ಉತ್ಸವ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>