<p>ಪಾಂಡವಪುರ: ಆಧುನಿಕ ಯುಗದ ಮನುಷ್ಯನಲ್ಲಿ ಆಡಂಬರಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಮಕ್ಕಳಿಗೆ ಜ್ಞಾನಾರ್ಜನೆಯ ಜೊತೆಗೆ ಸಂಸ್ಕಾರ ಕಲಿಸಬೇಕಿದೆ ಎಂದು ಬೇಬಿಬೆಟ್ಟದ ರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶಿವಬಸವಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಬೇಬಿಬೆಟ್ಟದ ಶ್ರೀ ರಾಮಯೋಗೀಶ್ವರ ಮಠದಲ್ಲಿ ಪ್ರಗತಿ ಸೇವಾ ಟ್ರಸ್ಟ್ ಹಾಗೂ ತಾಲ್ಲೂಕು ಚುಟುಕು ಪರಿಷತ್ ಆಶ್ರಯದಲ್ಲಿ ಶನಿವಾರ ನಡೆದ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮತ್ತು ಕವಿಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಟಿ.ವಿ, ಸಿನಿಮಾ, ಸಾಮಾಜಿಕ ಮಾಧ್ಯಮಗಳ ಹಾವಳಿಯಿಂದಾಗಿ ಸಂಸ್ಕೃತಿ ಹಾಗೂ ಸಾಹಿತ್ಯ ಮರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅಲ್ಲದೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ವೃದ್ಧಾಶ್ರಮಗಳು ಕಡಿಮೆಯಾಗುವಂತೆ ಮಾಡಬೇಕಿದ ಎಂದರು.</p>.<p>ಪ್ರಗತಿ ಸೇವಾ ಟ್ರಸ್ಟ್ ಅಧ್ಯಕ್ಷ ನಾಗೇಶ್ ರಾಗಿಮುದ್ದನಹಳ್ಳಿ ಮಾತನಾಡಿ, ಸಮಾಜ ಸೇವೆ ನಿಸ್ವಾರ್ಥವಾಗಿ ಮಾಡಬೇಕು. ಪರಿಸರ ಪ್ರಜ್ಞೆ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದರು.</p>.<p>ನಿವೃತ್ತ ತಹಶೀಲ್ದಾರ್ ಎಸ್.ಸಂತೋಷ್, ಮಂಡ್ಯ ಡಿಡಿಪಿಐ ಜಿ.ಎ.ಲೋಕೇಶ್, ಬಿಸಿಎಂ ಇಲಾಖೆಯ ಕೆ.ಸಿ.ಮಂಜುಳಾ ಭದ್ರೇಗೌಡ, ಮುಖ್ಯ ಶಿಕ್ಷಕ ಆರ್.ಟಿ.ಬಸವರಾಜ್ ಅವರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ 20ಕ್ಕೂ ಹೆಚ್ಚು ಕವಿಗಳು ತಮ್ಮ ಚುಟುಕು ಕವನ ವಾಚಿಸಿದರು. ಲೋಕೇಶ್ ಎಂ.ಕಲ್ಕುಣಿ ಅವರ ‘ಚುಟುಕುಗಳ ಲೋಕ’ ಕೃತಿ ಬಿಡುಗಡೆ ಮಾಡಲಾಯಿತು.</p>.<p>ವಿಶ್ರಾಂತ ಪ್ರಾಂಶುಪಾಲ ಲೋಕೇಶ್, ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್, ಬಿ.ಸಿ.ವಿಜಯಕುಮಾರ್ ಬಲ್ಲೇನಹಳ್ಳಿ, ಪ್ರಭುಸ್ವಾಮಿ, ಆರ್.ಎಂ.ನಾಗೇಶ್, ದೊಡ್ಡಬ್ಯಾಡರಹಳ್ಳಿ ಧನಂಜಯ, ಚಿಟ್ಟನಹಳ್ಳಿ ಮಂಜುನಾಥ್, ಅಶೋಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-40-508473018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾಂಡವಪುರ: ಆಧುನಿಕ ಯುಗದ ಮನುಷ್ಯನಲ್ಲಿ ಆಡಂಬರಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಮಕ್ಕಳಿಗೆ ಜ್ಞಾನಾರ್ಜನೆಯ ಜೊತೆಗೆ ಸಂಸ್ಕಾರ ಕಲಿಸಬೇಕಿದೆ ಎಂದು ಬೇಬಿಬೆಟ್ಟದ ರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶಿವಬಸವಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಬೇಬಿಬೆಟ್ಟದ ಶ್ರೀ ರಾಮಯೋಗೀಶ್ವರ ಮಠದಲ್ಲಿ ಪ್ರಗತಿ ಸೇವಾ ಟ್ರಸ್ಟ್ ಹಾಗೂ ತಾಲ್ಲೂಕು ಚುಟುಕು ಪರಿಷತ್ ಆಶ್ರಯದಲ್ಲಿ ಶನಿವಾರ ನಡೆದ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮತ್ತು ಕವಿಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಟಿ.ವಿ, ಸಿನಿಮಾ, ಸಾಮಾಜಿಕ ಮಾಧ್ಯಮಗಳ ಹಾವಳಿಯಿಂದಾಗಿ ಸಂಸ್ಕೃತಿ ಹಾಗೂ ಸಾಹಿತ್ಯ ಮರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅಲ್ಲದೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ವೃದ್ಧಾಶ್ರಮಗಳು ಕಡಿಮೆಯಾಗುವಂತೆ ಮಾಡಬೇಕಿದ ಎಂದರು.</p>.<p>ಪ್ರಗತಿ ಸೇವಾ ಟ್ರಸ್ಟ್ ಅಧ್ಯಕ್ಷ ನಾಗೇಶ್ ರಾಗಿಮುದ್ದನಹಳ್ಳಿ ಮಾತನಾಡಿ, ಸಮಾಜ ಸೇವೆ ನಿಸ್ವಾರ್ಥವಾಗಿ ಮಾಡಬೇಕು. ಪರಿಸರ ಪ್ರಜ್ಞೆ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದರು.</p>.<p>ನಿವೃತ್ತ ತಹಶೀಲ್ದಾರ್ ಎಸ್.ಸಂತೋಷ್, ಮಂಡ್ಯ ಡಿಡಿಪಿಐ ಜಿ.ಎ.ಲೋಕೇಶ್, ಬಿಸಿಎಂ ಇಲಾಖೆಯ ಕೆ.ಸಿ.ಮಂಜುಳಾ ಭದ್ರೇಗೌಡ, ಮುಖ್ಯ ಶಿಕ್ಷಕ ಆರ್.ಟಿ.ಬಸವರಾಜ್ ಅವರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ 20ಕ್ಕೂ ಹೆಚ್ಚು ಕವಿಗಳು ತಮ್ಮ ಚುಟುಕು ಕವನ ವಾಚಿಸಿದರು. ಲೋಕೇಶ್ ಎಂ.ಕಲ್ಕುಣಿ ಅವರ ‘ಚುಟುಕುಗಳ ಲೋಕ’ ಕೃತಿ ಬಿಡುಗಡೆ ಮಾಡಲಾಯಿತು.</p>.<p>ವಿಶ್ರಾಂತ ಪ್ರಾಂಶುಪಾಲ ಲೋಕೇಶ್, ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್, ಬಿ.ಸಿ.ವಿಜಯಕುಮಾರ್ ಬಲ್ಲೇನಹಳ್ಳಿ, ಪ್ರಭುಸ್ವಾಮಿ, ಆರ್.ಎಂ.ನಾಗೇಶ್, ದೊಡ್ಡಬ್ಯಾಡರಹಳ್ಳಿ ಧನಂಜಯ, ಚಿಟ್ಟನಹಳ್ಳಿ ಮಂಜುನಾಥ್, ಅಶೋಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-40-508473018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>