ಪ್ರವಾದಿ ಮಹಮ್ಮದ್ ಹುಟ್ಟಿದ ದಿನ ಆಚರಣೆಯ ಶುಭಾಶಯಗಳನ್ನು ತಿಳಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, 'ಎಲ್ಲ ನಾಗರಿಕರಿಗೆ, ವಿಶೇಷವಾಗಿ ಭಾರತದ ಮತ್ತು ಹೊರ ರಾಷ್ಟ್ರಗಳಲ್ಲಿರುವ ನಮ್ಮ ಮುಸ್ಲಿಂ ಸೋದರ ಮತ್ತು ಸೋದರಿಯರಿಗೆ ಶುಭಾಶಯಗಳು. ಸಮಾಜದ ಒಳಿತಿಗಾಗಿ, ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ನಾವೆಲ್ಲರೂ ಅವರ ಬೋಧನೆಗಳನ್ನು ಅನುಸರಿಸೋಣ' ಎಂದಿದ್ದಾರೆ.