<p>ರಬಕವಿ ಬನಹಟ್ಟಿ: ‘ಅದ್ವೈತ ಸಿದ್ಧಾಂತದ ಪ್ರತಿಪಾದಕ ಶಂಕರಾಚಾರ್ಯರು ಸನಾತನ ಧರ್ಮವನ್ನು ಸಂರಕ್ಷಣೆ ಮಾಡುವ ಜೊತೆಗೆ ಧರ್ಮದ ಪುನರುತ್ಥಾನಕ್ಕಾಗಿ ಶ್ರಮಿಸಿದರು’ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ತಿಳಿಸಿದರು.</p>.<p>ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>‘ನಾಲ್ಕು ಪೀಠಗಳನ್ನು ಸ್ಥಾಪಿಸಿ, ಜಗತ್ತಿಗೆ ಮಾರ್ಗದರ್ಶನ ಮಾಡಿದ ಮಹಾನ್ ವ್ಯಕ್ತಿ ಶಕರಾಚಾರ್ಯರು. ಅವರು ಸ್ಥಾಪಿಸಿದ ಪೀಠವೊಂದು ಕರ್ನಾಟಕದ ಶೃಂಗೇರಿಯಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದರು.</p>.<p>‘ಭಾರತ ದೇಶವು ಸಂತರು, ಶರಣರು, ಮಹಾನ್ ವ್ಯಕ್ತಿಗಳು ಜನಿಸಿದ ಶ್ರೇಷ್ಠ ನಾಡು. ಮಹನೀಯರ ನಡೆ, ನುಡಿ ಮತ್ತು ಅವರು ಪ್ರತಿಪಾದಿಸಿದ ತತ್ವಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಶಿರಸ್ತೇದಾರ್ ರಾಜಶೇಖರ ಸಾತಿಹಾಳ, ಎಸ್.ಬಿ. ಕೂಗಾಟೆ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಹರ್ಷವರ್ಧನ ಪಟವರ್ಧನ, ಚೇತನ ಭಜಂತ್ರಿ, ಸದಾಶಿವ ಕುಂಬಾರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-19-190720470</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಬಕವಿ ಬನಹಟ್ಟಿ: ‘ಅದ್ವೈತ ಸಿದ್ಧಾಂತದ ಪ್ರತಿಪಾದಕ ಶಂಕರಾಚಾರ್ಯರು ಸನಾತನ ಧರ್ಮವನ್ನು ಸಂರಕ್ಷಣೆ ಮಾಡುವ ಜೊತೆಗೆ ಧರ್ಮದ ಪುನರುತ್ಥಾನಕ್ಕಾಗಿ ಶ್ರಮಿಸಿದರು’ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ತಿಳಿಸಿದರು.</p>.<p>ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>‘ನಾಲ್ಕು ಪೀಠಗಳನ್ನು ಸ್ಥಾಪಿಸಿ, ಜಗತ್ತಿಗೆ ಮಾರ್ಗದರ್ಶನ ಮಾಡಿದ ಮಹಾನ್ ವ್ಯಕ್ತಿ ಶಕರಾಚಾರ್ಯರು. ಅವರು ಸ್ಥಾಪಿಸಿದ ಪೀಠವೊಂದು ಕರ್ನಾಟಕದ ಶೃಂಗೇರಿಯಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದರು.</p>.<p>‘ಭಾರತ ದೇಶವು ಸಂತರು, ಶರಣರು, ಮಹಾನ್ ವ್ಯಕ್ತಿಗಳು ಜನಿಸಿದ ಶ್ರೇಷ್ಠ ನಾಡು. ಮಹನೀಯರ ನಡೆ, ನುಡಿ ಮತ್ತು ಅವರು ಪ್ರತಿಪಾದಿಸಿದ ತತ್ವಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಶಿರಸ್ತೇದಾರ್ ರಾಜಶೇಖರ ಸಾತಿಹಾಳ, ಎಸ್.ಬಿ. ಕೂಗಾಟೆ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಹರ್ಷವರ್ಧನ ಪಟವರ್ಧನ, ಚೇತನ ಭಜಂತ್ರಿ, ಸದಾಶಿವ ಕುಂಬಾರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-19-190720470</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>