<p>ರಾಯಚೂರು: ‘ಬದುಕಿನ ಬೆಳಕಿಗೆ ವಚನಗಳು ದಾರಿ ತೋರುತ್ತವೆ. ಶರಣರು ಕ್ಷಣಿಕ ಸುಖಕ್ಕಿಂತ ಪರಮ ಸುಖದ ಕಡೆಗೆ ಸಾಗಿದ್ದರು. ಬಸವಣ್ಣವರು ತಮ್ಮ ವಚನಗಳಲ್ಲಿ ಇದನ್ನು ಸಾರಿ ಹೇಳಿದ್ದಾರೆ’ ಎಂದು ವಾಲ್ಮೀಕಿ ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದ ಡಿನ್ ಪ್ರೊ.ಪಾರ್ವತಿ ಸಿ.ಎಸ್. ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಯರಗೇರಾ ಸಮೀಪದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಸವಣ್ಣ ನವರಿದ್ದ ಅಲ್ಪಕಾಲಾವಧಿಯಲ್ಲಿ ಆರ್ಥಿಕ, ಸಾಮಾಜಿಕ, ಧಾರ್ಮಿಕವಾಗಿ ಜನಜೀವನದ ವಿವಿಧ ಸ್ತರಗಳಲ್ಲಿ ಹೊಸತನ ಮೂಡಿತು. ತಮ್ಮ ಬದುಕಿನ ಸರ್ವಸ್ವವನ್ನೆಲ್ಲ ವಚನಗಳ ಮೂಲಕ ಕನ್ನಡ ಕುಲಕೋಟಿಗೆ ಧಾರೆ ಎರೆದರು’ ಎಂದು ಹೇಳಿದರು.</p>.<p>ವಾಣಿಜ್ಯ ನಿಕಾಯದ ಡಿನ್ ಪ್ರೂ.ಪಿ.ಭಾಸ್ಕರ್, ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಸುನೀಲ ಕುಮಾರ, ಬೋಧಕೇತರ ಸಿಬ್ಬಂದಿ ಮೋಹನ, ರವಿ, ಪ್ರದೀಪ್, ಕಿರಣ ಉಪಸ್ಥಿತರಿದ್ದರು.</p>.<p>ಮಲ್ಲಿಕಾರ್ಜುನ ವಚನ ಗೀತೆ ಹಾಡಿದರು. ಇಂಗ್ಲಿಷ್ ಉಪನ್ಯಾಸಕ ಅನಿಲ ಅಪ್ರಾಳ್ ಸ್ವಾಗತಿಸಿ, ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-32-206477245</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಬದುಕಿನ ಬೆಳಕಿಗೆ ವಚನಗಳು ದಾರಿ ತೋರುತ್ತವೆ. ಶರಣರು ಕ್ಷಣಿಕ ಸುಖಕ್ಕಿಂತ ಪರಮ ಸುಖದ ಕಡೆಗೆ ಸಾಗಿದ್ದರು. ಬಸವಣ್ಣವರು ತಮ್ಮ ವಚನಗಳಲ್ಲಿ ಇದನ್ನು ಸಾರಿ ಹೇಳಿದ್ದಾರೆ’ ಎಂದು ವಾಲ್ಮೀಕಿ ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದ ಡಿನ್ ಪ್ರೊ.ಪಾರ್ವತಿ ಸಿ.ಎಸ್. ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಯರಗೇರಾ ಸಮೀಪದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಸವಣ್ಣ ನವರಿದ್ದ ಅಲ್ಪಕಾಲಾವಧಿಯಲ್ಲಿ ಆರ್ಥಿಕ, ಸಾಮಾಜಿಕ, ಧಾರ್ಮಿಕವಾಗಿ ಜನಜೀವನದ ವಿವಿಧ ಸ್ತರಗಳಲ್ಲಿ ಹೊಸತನ ಮೂಡಿತು. ತಮ್ಮ ಬದುಕಿನ ಸರ್ವಸ್ವವನ್ನೆಲ್ಲ ವಚನಗಳ ಮೂಲಕ ಕನ್ನಡ ಕುಲಕೋಟಿಗೆ ಧಾರೆ ಎರೆದರು’ ಎಂದು ಹೇಳಿದರು.</p>.<p>ವಾಣಿಜ್ಯ ನಿಕಾಯದ ಡಿನ್ ಪ್ರೂ.ಪಿ.ಭಾಸ್ಕರ್, ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಸುನೀಲ ಕುಮಾರ, ಬೋಧಕೇತರ ಸಿಬ್ಬಂದಿ ಮೋಹನ, ರವಿ, ಪ್ರದೀಪ್, ಕಿರಣ ಉಪಸ್ಥಿತರಿದ್ದರು.</p>.<p>ಮಲ್ಲಿಕಾರ್ಜುನ ವಚನ ಗೀತೆ ಹಾಡಿದರು. ಇಂಗ್ಲಿಷ್ ಉಪನ್ಯಾಸಕ ಅನಿಲ ಅಪ್ರಾಳ್ ಸ್ವಾಗತಿಸಿ, ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-32-206477245</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>