<p>ರಾಂಪುರ: ಬಡವರು ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿಕೊಳ್ಳುವ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ದೇವರಾಜ ಪಾಟೀಲ ಹೇಳಿದರು.</p>.<p>ಸಮೀಪದ ಮುತ್ತತ್ತಿ ಗ್ರಾಮದಲ್ಲಿ ದಾಳಮ್ಮದೇವಿ ಹಾಗೂ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ನಿಮಿತ್ತ ಸ್ಥಳೀಯ ಶಿವಶರಣ ಮಾದಾರ ಚೆನ್ನಯ್ಯ ಸೇವಾ ಸಮೀತಿ ಮಂಗಳವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಡವರು ಅಂತಸ್ತಿಕೆಗೆ ಮುಂದಾಗಿ ಸಾಲಮಾಡಿ ಮಕ್ಕಳ ಮದುವೆ ಮಾಡಿದರೆ ಅದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ಇದನ್ನು ಪ್ರತಿಯೊಬ್ಬರೂ ತಿಳಿದು ಸಂಘ-ಸಂಸ್ಥೆಗಳು, ಮಠ-ಮಾನ್ಯಗಳು ಹಮ್ಮಿಕೊಳ್ಳುವ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕು. ಸಾಮೂಹಿಕ ವಿವಾಹಗಳಲ್ಲಿ ಮದುವೆ ಆಗುವುದು ವಧು-ವರರ ಸೌಭಾಗ್ಯವೇ ಸರಿ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ರಾಜು ಮುದೇನೂರ, ಸಾಮೂಹಿಕ ವಿವಾಹಗಳು ಬಡವರ ಪಾಲಿಗೆ ವರದಾನವಾಗಿವೆ ಎಂದರು.</p>.<p>ಆಶೀರ್ವಚನ ನೀಡಿದ ಮುತ್ತತ್ತಿಯ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಸಾಮೂಹಿಕ ವಿವಾಹಗಳು ಕೇವಲ ಬಡವರ ಮದುವೆಗಳಲ್ಲ. ಇವು ಭಾಗ್ಯವಂತರ ಮದುವೆಗಳು ಎಂದು ಹೇಳಿ ನೂತನ ದಂಪತಿಗಳು ಅನ್ಯೋನ್ಯತೆಯಲ್ಲಿ ಜೀವನ ಸಾಗಿಸಬೇಕು ಎಂದು ಹೇಳಿದರು.</p>.<p>ಪ್ರಾಥಮಿಕ ಶಾಲಾ ಎಸ್.ಸಿ, ಎಸ್. ಟಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮಣ ಯಂಕಂಚಿ, ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ಸುರೇಶ ಕೊಣ್ಣೂರ ಮಾತನಾಡಿದರು.</p>.<p>ಶಿವಾನಂದ ಟವಳಿ, ಮಾದಾರ ಚೆನ್ನಯ್ಯ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಮಹಾದೇವ ಹರಿಜನ, ಸಂಗಣ್ಣ ಲೋಕಾಪುರ, ಸಿದ್ದು ಲೋಕಾಪುರ ವೇದಿಕೆಯಲ್ಲಿದ್ದರು. ಹರ್ಷಿತಾ ಪ್ರಾರ್ಥಿಸಿದರು. ಹನಮಂತ ಮುತ್ತತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಶುರಾಮ ಬಸವನಾಳ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-19-1139521127</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಂಪುರ: ಬಡವರು ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿಕೊಳ್ಳುವ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ದೇವರಾಜ ಪಾಟೀಲ ಹೇಳಿದರು.</p>.<p>ಸಮೀಪದ ಮುತ್ತತ್ತಿ ಗ್ರಾಮದಲ್ಲಿ ದಾಳಮ್ಮದೇವಿ ಹಾಗೂ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ನಿಮಿತ್ತ ಸ್ಥಳೀಯ ಶಿವಶರಣ ಮಾದಾರ ಚೆನ್ನಯ್ಯ ಸೇವಾ ಸಮೀತಿ ಮಂಗಳವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಡವರು ಅಂತಸ್ತಿಕೆಗೆ ಮುಂದಾಗಿ ಸಾಲಮಾಡಿ ಮಕ್ಕಳ ಮದುವೆ ಮಾಡಿದರೆ ಅದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ಇದನ್ನು ಪ್ರತಿಯೊಬ್ಬರೂ ತಿಳಿದು ಸಂಘ-ಸಂಸ್ಥೆಗಳು, ಮಠ-ಮಾನ್ಯಗಳು ಹಮ್ಮಿಕೊಳ್ಳುವ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕು. ಸಾಮೂಹಿಕ ವಿವಾಹಗಳಲ್ಲಿ ಮದುವೆ ಆಗುವುದು ವಧು-ವರರ ಸೌಭಾಗ್ಯವೇ ಸರಿ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ರಾಜು ಮುದೇನೂರ, ಸಾಮೂಹಿಕ ವಿವಾಹಗಳು ಬಡವರ ಪಾಲಿಗೆ ವರದಾನವಾಗಿವೆ ಎಂದರು.</p>.<p>ಆಶೀರ್ವಚನ ನೀಡಿದ ಮುತ್ತತ್ತಿಯ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಸಾಮೂಹಿಕ ವಿವಾಹಗಳು ಕೇವಲ ಬಡವರ ಮದುವೆಗಳಲ್ಲ. ಇವು ಭಾಗ್ಯವಂತರ ಮದುವೆಗಳು ಎಂದು ಹೇಳಿ ನೂತನ ದಂಪತಿಗಳು ಅನ್ಯೋನ್ಯತೆಯಲ್ಲಿ ಜೀವನ ಸಾಗಿಸಬೇಕು ಎಂದು ಹೇಳಿದರು.</p>.<p>ಪ್ರಾಥಮಿಕ ಶಾಲಾ ಎಸ್.ಸಿ, ಎಸ್. ಟಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮಣ ಯಂಕಂಚಿ, ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ಸುರೇಶ ಕೊಣ್ಣೂರ ಮಾತನಾಡಿದರು.</p>.<p>ಶಿವಾನಂದ ಟವಳಿ, ಮಾದಾರ ಚೆನ್ನಯ್ಯ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಮಹಾದೇವ ಹರಿಜನ, ಸಂಗಣ್ಣ ಲೋಕಾಪುರ, ಸಿದ್ದು ಲೋಕಾಪುರ ವೇದಿಕೆಯಲ್ಲಿದ್ದರು. ಹರ್ಷಿತಾ ಪ್ರಾರ್ಥಿಸಿದರು. ಹನಮಂತ ಮುತ್ತತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಶುರಾಮ ಬಸವನಾಳ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-19-1139521127</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>