<p>ಸಾಲಿಗ್ರಾಮ: ‘ಮಹನೀಯರ ಜಯಂತಿ ಕಾರ್ಯಕ್ರಮಗಳು ಜಾತಿಗೆ ಮಾತ್ರ ಸೀಮಿತಗೊಳ್ಳದೆ ಸಮಾಜವೇ ಸ್ಮರಣೆ ಮಾಡುವಂತಹ ಕೆಲಸವಾಗಬೇಕು. ಆಗ ಮಾತ್ರ ಅವರ ತ್ಯಾಗಕ್ಕೆ ಗೌರವ ಸಲ್ಲಿಸಿದಂತೆ ಆಗುತ್ತದೆ’ ಎಂದು ಉದ್ಯಮಿ ಹರದನಹಳ್ಳಿ ವಿಜಯ್ ಹೇಳಿದರು.</p>.<p>ತಾಲ್ಲೂಕಿನ ಹರದನಹಳ್ಳಿಯಲ್ಲಿ ಆಯೋಜಿಸಿದ್ದ ದೇವರದಾಸಿಮಯ್ಯ ಜಯಂತಿ ಕಾರ್ಯಕ್ರಮ ಅಂಗವಾಗಿ ಭಾವಚಿತ್ರವಿರುವ ಬೆಳ್ಳಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಸಂಕಷ್ಟ ಎದುರಾದ ದಿನಗಳಲ್ಲಿ ಮಹನೀಯರು ಯಾವುದೇ ಜಾತಿ, ಧರ್ಮ ನೋಡದೆ ಜನರಿಗಾಗಿ ಶ್ರಮಿಸಿದರು. ಆದರೆ, ಈಗ ಮಹನೀಯರನ್ನು ಜಾತಿಗೆ ಸಿಮೀತ ಮಾಡಿರುವುದು ಬೇಸರದ ಸಂಗತಿ’ ಎಂದು ತಿಳಿಸಿದರು.</p>.<p>‘ಅವರ ತತ್ವ ಮತ್ತು ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತರಲು ಶ್ರಮಿಸುವ ಅಗತ್ಯವಿದೆ’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಶೋಕ್, ಕಿಟ್ಟಿ, ಶಿಕ್ಷಕ ಕೃಷ್ಣಮೂರ್ತಿ, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-38-2038023423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಲಿಗ್ರಾಮ: ‘ಮಹನೀಯರ ಜಯಂತಿ ಕಾರ್ಯಕ್ರಮಗಳು ಜಾತಿಗೆ ಮಾತ್ರ ಸೀಮಿತಗೊಳ್ಳದೆ ಸಮಾಜವೇ ಸ್ಮರಣೆ ಮಾಡುವಂತಹ ಕೆಲಸವಾಗಬೇಕು. ಆಗ ಮಾತ್ರ ಅವರ ತ್ಯಾಗಕ್ಕೆ ಗೌರವ ಸಲ್ಲಿಸಿದಂತೆ ಆಗುತ್ತದೆ’ ಎಂದು ಉದ್ಯಮಿ ಹರದನಹಳ್ಳಿ ವಿಜಯ್ ಹೇಳಿದರು.</p>.<p>ತಾಲ್ಲೂಕಿನ ಹರದನಹಳ್ಳಿಯಲ್ಲಿ ಆಯೋಜಿಸಿದ್ದ ದೇವರದಾಸಿಮಯ್ಯ ಜಯಂತಿ ಕಾರ್ಯಕ್ರಮ ಅಂಗವಾಗಿ ಭಾವಚಿತ್ರವಿರುವ ಬೆಳ್ಳಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಸಂಕಷ್ಟ ಎದುರಾದ ದಿನಗಳಲ್ಲಿ ಮಹನೀಯರು ಯಾವುದೇ ಜಾತಿ, ಧರ್ಮ ನೋಡದೆ ಜನರಿಗಾಗಿ ಶ್ರಮಿಸಿದರು. ಆದರೆ, ಈಗ ಮಹನೀಯರನ್ನು ಜಾತಿಗೆ ಸಿಮೀತ ಮಾಡಿರುವುದು ಬೇಸರದ ಸಂಗತಿ’ ಎಂದು ತಿಳಿಸಿದರು.</p>.<p>‘ಅವರ ತತ್ವ ಮತ್ತು ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತರಲು ಶ್ರಮಿಸುವ ಅಗತ್ಯವಿದೆ’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಶೋಕ್, ಕಿಟ್ಟಿ, ಶಿಕ್ಷಕ ಕೃಷ್ಣಮೂರ್ತಿ, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-38-2038023423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>