ಬಾಲಕನಾಗಿ ಬೆಳೆಯುತ್ತಿದ್ದಾಗ ಚಿನ್ನಿಕಟ್ಟೆ ಸುತ್ತಮುತ್ತ ಗೋವುಗಳನ್ನು ಮೇಯಿಸಲು ಹೋಗುತ್ತಿದ್ದಾಗಲೇ ಸಹಪಾಠಿಗಳೊಂದಿಗೆ ಆಟವಾಡುತ್ತ ಪವಾಡಗಳನ್ನು ತೋರುತ್ತಿದ್ದರು. ಬಂಡಿಯನ್ನು ನಗಾರಿಯನ್ನಾಗಿ ಬಾರಿಸುವುದು, ಕೆಸರನ್ನು ಹುಗ್ಗಿ ಪಾಯಸವನ್ನಾಗಿಸುವುದು, ನೀರನ್ನು ತುಪ್ಪ ಮಾಡಿ ಯಜ್ಞ ಮಾಡುತ್ತಿದ್ದರು ಎನ್ನುವ ಪ್ರತೀತಿ ಇದೆ. ದೇವಿ ಮರಿಯಮ್ಮ ಅವರಿಂದ ದೊರೆತ ದಿವ್ಯಶಕ್ತಿಯನ್ನು ಬಂಜಾರರು ಸೇರಿ ಅಲೆಮಾರಿ ಜೀವನ ನಡೆಸುವ ಸಮುದಾಯಗಳನ್ನು ಉದ್ಧರಿಸಲು ಬಳಸಿದ ಸಂತ ಇವರು ಎಂಬ ಕಥೆಗಳು ಚಾಲ್ತಿಯಲ್ಲಿವೆ. ಮಹಾರಾಷ್ಟ್ರದ ಪೌರಾಗಢದಲ್ಲಿ (ಪೌರಾದೇವಿಯ ಸ್ಥಳ) ಸೇವಾಲಾಲರು ಐಕ್ಯರಾದರು ಎಂದು ಇತಿಹಾಸ ಹೇಳುತ್ತದೆ.