<p>ತ್ಯಾಗರ್ತಿ: ‘ನಮ್ಮ ನಡೆ-ನುಡಿ ಹೇಗಿರಬೇಕು ಎಂದು ವಚನಗಳ ಮೂಲಕ ಸಂದೇಶ ನೀಡಿದ ಬಸವಣ್ಣನವರು ವಿಶ್ವ ಕಂಡ ಶ್ರೇಷ್ಠ ವ್ಯಕ್ತಿ’ ಎಂದು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ.ಜಗದೀಶ್ ಹೇಳಿದರು.</p>.<p>ಆನಂದಪುರ ಸಮೀಪದಲ್ಲಿನ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ನಮ್ಮ ನಡೆಯಂತೆ ನುಡಿ ಇರಬೇಕು. ಕಾಯಕದ ಮೂಲಕ ಕೈಲಾಸ ಕಾಣಬೇಕು ಎಂಬ ಬಸವಣ್ಣನವರ ಸಂದೇಶ ಇಂದಿಗೂ ಪ್ರಸ್ತುತ’ ಎಂದರು.</p>.<p>‘ಬಸವಣ್ಣನವರು ಕೇವಲ ಧಾರ್ಮಿಕ ನಾಯಕರಲ್ಲ, ಕ್ರಾಂತಿಕಾರಿ ಚಿಂತಕರಾಗಿದ್ದರು. ಅವರ ಸಂದೇಶದಂತೆ ಸತ್ಯವನ್ನು ಪಾಲಿಸೋಣ. ಶ್ರಮವನ್ನು ಗೌರವಿಸೋಣ. ಎಲ್ಲರನ್ನೂ ಸಮಾನರಾಗಿ ಕಾಣೋಣ’ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ನಿಧಿಯ ಡೀನ್ ಎಸ್.ನಾರಾಯಣ ಮಾವರಕರ್ ತಿಳಿಸಿದರು.</p>.<p>ಕುಲಸಚಿವ ಶಾಮರಾವ್ ಜಹಾಗೀರದಾರ್, ಸಂಶೋಧನಾ ನಿರ್ದೇಶಕ ಎಸ್.ಶ್ರೀಧರ, ಸಹ ಸಂಶೋಧನಾ ನಿರ್ದೇಶಕ ಎಸ್.ಪ್ರದೀಪ್, ಉಪನ್ಯಾಸಕರಾದ ಎಂ.ರವಿಕುಮಾರ್, ಎ.ಎಂ.ಅವಿನಾಶ್, ಬೋಧಕ– ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-42-1436093882</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತ್ಯಾಗರ್ತಿ: ‘ನಮ್ಮ ನಡೆ-ನುಡಿ ಹೇಗಿರಬೇಕು ಎಂದು ವಚನಗಳ ಮೂಲಕ ಸಂದೇಶ ನೀಡಿದ ಬಸವಣ್ಣನವರು ವಿಶ್ವ ಕಂಡ ಶ್ರೇಷ್ಠ ವ್ಯಕ್ತಿ’ ಎಂದು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ.ಜಗದೀಶ್ ಹೇಳಿದರು.</p>.<p>ಆನಂದಪುರ ಸಮೀಪದಲ್ಲಿನ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ನಮ್ಮ ನಡೆಯಂತೆ ನುಡಿ ಇರಬೇಕು. ಕಾಯಕದ ಮೂಲಕ ಕೈಲಾಸ ಕಾಣಬೇಕು ಎಂಬ ಬಸವಣ್ಣನವರ ಸಂದೇಶ ಇಂದಿಗೂ ಪ್ರಸ್ತುತ’ ಎಂದರು.</p>.<p>‘ಬಸವಣ್ಣನವರು ಕೇವಲ ಧಾರ್ಮಿಕ ನಾಯಕರಲ್ಲ, ಕ್ರಾಂತಿಕಾರಿ ಚಿಂತಕರಾಗಿದ್ದರು. ಅವರ ಸಂದೇಶದಂತೆ ಸತ್ಯವನ್ನು ಪಾಲಿಸೋಣ. ಶ್ರಮವನ್ನು ಗೌರವಿಸೋಣ. ಎಲ್ಲರನ್ನೂ ಸಮಾನರಾಗಿ ಕಾಣೋಣ’ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ನಿಧಿಯ ಡೀನ್ ಎಸ್.ನಾರಾಯಣ ಮಾವರಕರ್ ತಿಳಿಸಿದರು.</p>.<p>ಕುಲಸಚಿವ ಶಾಮರಾವ್ ಜಹಾಗೀರದಾರ್, ಸಂಶೋಧನಾ ನಿರ್ದೇಶಕ ಎಸ್.ಶ್ರೀಧರ, ಸಹ ಸಂಶೋಧನಾ ನಿರ್ದೇಶಕ ಎಸ್.ಪ್ರದೀಪ್, ಉಪನ್ಯಾಸಕರಾದ ಎಂ.ರವಿಕುಮಾರ್, ಎ.ಎಂ.ಅವಿನಾಶ್, ಬೋಧಕ– ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-42-1436093882</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>