<p>ಸಾಗರ: ‘ಮೊದಲಿನಿಂದಲೂ ಶಿಕ್ಷಣ ಹಾಗೂ ದಾಸೋಹಕ್ಕೆ ಹೆಚ್ಚಿನ ಮನ್ನಣೆ ನೀಡುತ್ತಾ ಬಂದಿರುವುದು ವೀರಶೈವ ಸಮಾಜದ ವಿಶೇಷತೆಯಾಗಿದೆ’ ಎಂದು ಜಡೆ ಸಂಸ್ಥಾನ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ಇಲ್ಲಿನ ವೀರಶೈವ ಯುವ ವೇದಿಕೆ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಆಶೀರ್ವಚನ ನೀಡಿದರು.</p>.<p>‘ಸಂಸತ್ತು ಇಲ್ಲದ ಕಾಲದಲ್ಲಿ ಅನುಭವ ಮಂಟಪವನ್ನು ಸೃಷ್ಟಿಸಿ ಸಮ ಸಮಾಜದ ಪರಿಕಲ್ಪನೆಯನ್ನು ಬಿತ್ತುವ ಜೊತೆಗೆ ಶಿಕ್ಷಣದಿಂದ ಪಡೆಯುವ ಜ್ಞಾನದ ಮಹತ್ವವನ್ನು ತಿಳಿಸಿದ್ದು ಬಸವಣ್ಣನವರ ಸಾಧನೆ. ಇದರಿಂದ ಇಂದಿನ ಯುವ ಸಮುದಾಯ ಸ್ಫೂರ್ತಿ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p>ತೇಜಸ್ವಿ ಮಿಟ್ಲೆಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಸಗೋಡಿನ ಭೃಂಗೇಶ್ವರ ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಯುವ ವೇದಿಕೆ ಅಧ್ಯಕ್ಷ ಸಚಿನ್ ಕೊಪ್ಪ, ಅಕ್ಷಯ ಸೌಹಾರ್ದ ಸಹಕಾರ ಬ್ಯಾಂಕ್ನ ಅಧ್ಯಕ್ಷ ದಿನೇಶ್ ಬರದವಳ್ಳಿ, ಅಕ್ಕನ ಬಳಗದ ಕವಿತಾ ಜಯಣ್ಣ, ರಾಜೇಂದ್ರ ಆವಿನಹಳ್ಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-42-865461876</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಮೊದಲಿನಿಂದಲೂ ಶಿಕ್ಷಣ ಹಾಗೂ ದಾಸೋಹಕ್ಕೆ ಹೆಚ್ಚಿನ ಮನ್ನಣೆ ನೀಡುತ್ತಾ ಬಂದಿರುವುದು ವೀರಶೈವ ಸಮಾಜದ ವಿಶೇಷತೆಯಾಗಿದೆ’ ಎಂದು ಜಡೆ ಸಂಸ್ಥಾನ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ಇಲ್ಲಿನ ವೀರಶೈವ ಯುವ ವೇದಿಕೆ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಆಶೀರ್ವಚನ ನೀಡಿದರು.</p>.<p>‘ಸಂಸತ್ತು ಇಲ್ಲದ ಕಾಲದಲ್ಲಿ ಅನುಭವ ಮಂಟಪವನ್ನು ಸೃಷ್ಟಿಸಿ ಸಮ ಸಮಾಜದ ಪರಿಕಲ್ಪನೆಯನ್ನು ಬಿತ್ತುವ ಜೊತೆಗೆ ಶಿಕ್ಷಣದಿಂದ ಪಡೆಯುವ ಜ್ಞಾನದ ಮಹತ್ವವನ್ನು ತಿಳಿಸಿದ್ದು ಬಸವಣ್ಣನವರ ಸಾಧನೆ. ಇದರಿಂದ ಇಂದಿನ ಯುವ ಸಮುದಾಯ ಸ್ಫೂರ್ತಿ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p>ತೇಜಸ್ವಿ ಮಿಟ್ಲೆಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಸಗೋಡಿನ ಭೃಂಗೇಶ್ವರ ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಯುವ ವೇದಿಕೆ ಅಧ್ಯಕ್ಷ ಸಚಿನ್ ಕೊಪ್ಪ, ಅಕ್ಷಯ ಸೌಹಾರ್ದ ಸಹಕಾರ ಬ್ಯಾಂಕ್ನ ಅಧ್ಯಕ್ಷ ದಿನೇಶ್ ಬರದವಳ್ಳಿ, ಅಕ್ಕನ ಬಳಗದ ಕವಿತಾ ಜಯಣ್ಣ, ರಾಜೇಂದ್ರ ಆವಿನಹಳ್ಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-42-865461876</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>