ಚಾಮರಾಜನಗರ: ಮಹಾಶಿವರಾತ್ರಿಯ ಅಂಗವಾಗಿ ನಗರದ ಐತಿಹಾಸಿಕ ಚಾಮರಾಜೇಶ್ವರ ದೇವಸ್ಥಾನ,ಶ್ರೀಕಂಠೇಶ್ವರದೇವಸ್ಥಾನ, ವೀರಭದ್ರೇಶ್ವರ ದೇವಸ್ಥಾನ, ಯಡಬೆಟ್ಟ ಮಹದೇಶ್ವರ, ಹರದನಹಳ್ಳಿಯ ದಿವ್ಯಲಿಂಗೇಶ್ವರ ದೇವಸ್ಥಾನ, ಯಳಂದೂರಿನ ಗೌರೀಶ್ವರ, ಕಾಳಿಕಾಂಬ ಕಮಠೇಶ್ವರ ದೇವಸ್ಥಾನ ಗಡಿಭಾಗದ ಕೊಂಗಳ್ಳಿ ಶ್ರೀಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ಶಿವ ದೇವಾಲಯಗಳಲ್ಲಿ ಶುಕ್ರವಾರ ವಿಶೇಷ ಪೂಜೆ, ಹೋಮ– ಹವನ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.