<p><strong>ಉಪ್ಪಿನಂಗಡಿ:</strong> ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಕಾಲಾವಧಿ ಜಾತ್ರೆ, ಮಖೆ ಜಾತ್ರೆ, ಉತ್ಸವಾದಿಗಳ ಪ್ರಕಾರ 2ನೇ ಮಹಾಶಿವರಾತ್ರಿ ಮಖೆಕೂಟ ಶುಕ್ರವಾರ ಬೆಳಿಗ್ಗಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿದ್ದು, ಶನಿವಾರ ಮಧ್ಯಾಹ್ನ ಸಂಪನ್ನಗೊಂಡಿತು.</p>.<p>ಶುಕ್ರವಾರ ಬೆಳಿಗ್ಗಿನಿಂದಲೇ ಭಕ್ತಾದಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿ, ಉದ್ಭವಲಿಂಗಕ್ಕೆ ಹಾಲು, ಸಿಯಾಳ, ಜಲಾಭಿಷೇಕವನ್ನು ನೆರವೇರಿಸಿ ಪೂಜೆ ಸಲ್ಲಿಸಿದರು. ಇಲ್ಲಿನ ಉದ್ಭವಲಿಂಗಕ್ಕೆ ಸ್ತ್ರೀ ಪುರುಷರಾದಿಯಾಗಿ, ಅಬಾಲವೃದ್ದರಾಗಿ ಶ್ರದ್ಧಾಭಕ್ತಿಯಿಂದ ಅಭಿಷೇಕ, ಪೂಜಾ ಕಾರ್ಯಗಳನ್ನು ನೆರವೇರಿಸಿದರು.</p>.<p>ಶುಕ್ರವಾರ ರಾತ್ರಿ 7:45ರಿಂದ 9ರವರೆಗೆ ಉದ್ಭವ ಲಿಂಗದ ಬಳಿ ರುದ್ರ ಪಾರಾಯಣ ನಡೆಯಿತು. ಆ ಬಳಿಕ ಬಲಿ ಹೊರಟು ಉತ್ಸವ, ಮಹಾಪೂಜೆ ನಡೆಯಿತು.</p>.<p>ಶನಿವಾರ ನಸುಕಿನಲ್ಲಿ ತೀರ್ಥಸ್ನಾನ ನಡೆದು, ಬೆಳಿಗ್ಗೆಯೇ ಬಲಿ ಹೊರಟು ರಥೋತ್ಸವ, ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಕಾಳಿ ಅಮ್ಮನವರ ನೇಮಕ್ಕೆ ಪಡಿಯಕ್ಕಿ ಕೊಡುವುದು, ಮಧ್ಯಾಹ್ನ ಮಹಾಪೂಜೆಯಾಗಿ ಅನ್ನಸಂತರ್ಪಣೆ ನಡೆಯಿತು. ಸುಮಾರು 3 ಸಾವಿರ ಮಂದಿ ಅನ್ನ ಪ್ರಸಾದ ಸ್ವೀಕರಿಸಿದರು.</p>.<p>ದೇವಳದ ಆಡಳಿತಾಧಿಕಾರಿ ಪುತ್ತೂರು ತಹಶೀಲ್ದಾರ್ ರಾಹುಲ್ ಶಿಂಧೆ, ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಮಾಜಿ ಸದಸ್ಯರಾದ ರಾಧಾಕೃಷ್ಣ ನಾಯಕ್, ಕಂಗ್ವೆ ವಿಶ್ವನಾಥ ಶೆಟ್ಟಿ, ರಾಮಚಂದ್ರ ಮಣಿಯಾಣಿ ಇದ್ದರು.</p>.<p>ದೇವಾಲಯದ ವ್ಯವಸ್ಥಾಪಕ ವೆಂಕಟೇಶ್, ಕೃಷ್ಣ ಪ್ರಸಾದ್ ಬಡಿಲ, ದಿವಾಕರ, ಪದ್ಮನಾಭ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಕಾಲಾವಧಿ ಜಾತ್ರೆ, ಮಖೆ ಜಾತ್ರೆ, ಉತ್ಸವಾದಿಗಳ ಪ್ರಕಾರ 2ನೇ ಮಹಾಶಿವರಾತ್ರಿ ಮಖೆಕೂಟ ಶುಕ್ರವಾರ ಬೆಳಿಗ್ಗಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿದ್ದು, ಶನಿವಾರ ಮಧ್ಯಾಹ್ನ ಸಂಪನ್ನಗೊಂಡಿತು.</p>.<p>ಶುಕ್ರವಾರ ಬೆಳಿಗ್ಗಿನಿಂದಲೇ ಭಕ್ತಾದಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿ, ಉದ್ಭವಲಿಂಗಕ್ಕೆ ಹಾಲು, ಸಿಯಾಳ, ಜಲಾಭಿಷೇಕವನ್ನು ನೆರವೇರಿಸಿ ಪೂಜೆ ಸಲ್ಲಿಸಿದರು. ಇಲ್ಲಿನ ಉದ್ಭವಲಿಂಗಕ್ಕೆ ಸ್ತ್ರೀ ಪುರುಷರಾದಿಯಾಗಿ, ಅಬಾಲವೃದ್ದರಾಗಿ ಶ್ರದ್ಧಾಭಕ್ತಿಯಿಂದ ಅಭಿಷೇಕ, ಪೂಜಾ ಕಾರ್ಯಗಳನ್ನು ನೆರವೇರಿಸಿದರು.</p>.<p>ಶುಕ್ರವಾರ ರಾತ್ರಿ 7:45ರಿಂದ 9ರವರೆಗೆ ಉದ್ಭವ ಲಿಂಗದ ಬಳಿ ರುದ್ರ ಪಾರಾಯಣ ನಡೆಯಿತು. ಆ ಬಳಿಕ ಬಲಿ ಹೊರಟು ಉತ್ಸವ, ಮಹಾಪೂಜೆ ನಡೆಯಿತು.</p>.<p>ಶನಿವಾರ ನಸುಕಿನಲ್ಲಿ ತೀರ್ಥಸ್ನಾನ ನಡೆದು, ಬೆಳಿಗ್ಗೆಯೇ ಬಲಿ ಹೊರಟು ರಥೋತ್ಸವ, ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಕಾಳಿ ಅಮ್ಮನವರ ನೇಮಕ್ಕೆ ಪಡಿಯಕ್ಕಿ ಕೊಡುವುದು, ಮಧ್ಯಾಹ್ನ ಮಹಾಪೂಜೆಯಾಗಿ ಅನ್ನಸಂತರ್ಪಣೆ ನಡೆಯಿತು. ಸುಮಾರು 3 ಸಾವಿರ ಮಂದಿ ಅನ್ನ ಪ್ರಸಾದ ಸ್ವೀಕರಿಸಿದರು.</p>.<p>ದೇವಳದ ಆಡಳಿತಾಧಿಕಾರಿ ಪುತ್ತೂರು ತಹಶೀಲ್ದಾರ್ ರಾಹುಲ್ ಶಿಂಧೆ, ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಮಾಜಿ ಸದಸ್ಯರಾದ ರಾಧಾಕೃಷ್ಣ ನಾಯಕ್, ಕಂಗ್ವೆ ವಿಶ್ವನಾಥ ಶೆಟ್ಟಿ, ರಾಮಚಂದ್ರ ಮಣಿಯಾಣಿ ಇದ್ದರು.</p>.<p>ದೇವಾಲಯದ ವ್ಯವಸ್ಥಾಪಕ ವೆಂಕಟೇಶ್, ಕೃಷ್ಣ ಪ್ರಸಾದ್ ಬಡಿಲ, ದಿವಾಕರ, ಪದ್ಮನಾಭ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>