<p>ಸೊರಬ: ‘ಜೀವನದಲ್ಲಿ ನಿತ್ಯ ಪೂಜೆ ಪುನಸ್ಕಾರಗಳಲ್ಲಿ ತೊಡಗಿಕೊಂಡು ಮನಸ್ಸನ್ನು ವಿಕಾಸಗೊಳಿಸಿದಾಗ ಮಾತ್ರ ಆಧ್ಯಾತ್ಮಿಕ ಚಿಂತನೆಗಳಿಗೆ ಅರ್ಥ ಬರಲಿದೆ’ ಎಂದು ಜಡೆ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಮುರುಘಾ ಮಠದಲ್ಲಿ ಬುದ್ಧ ಪೌರ್ಣಿಮೆ ಅಂಗವಾಗಿ ನಡೆದ 242ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಸಮಾಜಕ್ಕೆ ಮಾನವೀಯ ಮೌಲ್ಯಗಳ ವಿಚಾರಗಳನ್ನು ತಿಳಿಸುವುದೇ ಶಿವಾನುಭವದ ಉದ್ದೇಶ. ಜಗತ್ತಿನ ಕೌಟುಂಬಿಕ ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಸಾಕಷ್ಟು ಸಾಮಾಜಿಕ ಸುಧಾರಣೆಯ ಅವಶ್ಯಕತೆಯಿದೆ. ಆಧುನಿಕತೆಯ ಭರಾಟೆಯಲ್ಲಿ ಯುವಜನರ ಯೋಚನೆ–ಆಲೋಚನೆಗಳು ಭಿನ್ನವಾಗಿದ್ದು, ಮೂಲ ಸಂಸ್ಕಾರ, ಸಂಸ್ಕೃತಿಯನ್ನು ಮರೆತು ಸಾಗುತ್ತಿದ್ದಾರೆ’ ಎಂದರು.</p>.<p>‘ಯುವಜನಾಂಗಕ್ಕೆ ನಮ್ಮ ಪರಂಪರೆಯ ತತ್ವ, ಉದ್ದೇಶಗಳನ್ನು ಪರಿಚಯಿಸುವ ಅವಶ್ಯಕತೆ ಇದೆ. ಹೆತ್ತ ತಂದೆ ತಾಯಂದಿರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ವ್ಯವಸ್ಥೆ ದೂರವಾಗಬೇಕಿದೆ’ ಎಂದು ತಿಳಿಸಿದರು. ಅಕ್ಕನ ಬಳಗದ ಅಧ್ಯಕ್ಷೆ ರೇಖಾ ಜಗದೀಶ್, ಜಯಮಾಲ, ಚಂದ್ರಶೇಖರ್ ನಿಜಗುಣ, ಡಿ. ಶಿವಯೋಗಿ, ರಾಮಣ್ಣ ಭಜಂತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-42-1048903692</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ: ‘ಜೀವನದಲ್ಲಿ ನಿತ್ಯ ಪೂಜೆ ಪುನಸ್ಕಾರಗಳಲ್ಲಿ ತೊಡಗಿಕೊಂಡು ಮನಸ್ಸನ್ನು ವಿಕಾಸಗೊಳಿಸಿದಾಗ ಮಾತ್ರ ಆಧ್ಯಾತ್ಮಿಕ ಚಿಂತನೆಗಳಿಗೆ ಅರ್ಥ ಬರಲಿದೆ’ ಎಂದು ಜಡೆ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಮುರುಘಾ ಮಠದಲ್ಲಿ ಬುದ್ಧ ಪೌರ್ಣಿಮೆ ಅಂಗವಾಗಿ ನಡೆದ 242ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಸಮಾಜಕ್ಕೆ ಮಾನವೀಯ ಮೌಲ್ಯಗಳ ವಿಚಾರಗಳನ್ನು ತಿಳಿಸುವುದೇ ಶಿವಾನುಭವದ ಉದ್ದೇಶ. ಜಗತ್ತಿನ ಕೌಟುಂಬಿಕ ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಸಾಕಷ್ಟು ಸಾಮಾಜಿಕ ಸುಧಾರಣೆಯ ಅವಶ್ಯಕತೆಯಿದೆ. ಆಧುನಿಕತೆಯ ಭರಾಟೆಯಲ್ಲಿ ಯುವಜನರ ಯೋಚನೆ–ಆಲೋಚನೆಗಳು ಭಿನ್ನವಾಗಿದ್ದು, ಮೂಲ ಸಂಸ್ಕಾರ, ಸಂಸ್ಕೃತಿಯನ್ನು ಮರೆತು ಸಾಗುತ್ತಿದ್ದಾರೆ’ ಎಂದರು.</p>.<p>‘ಯುವಜನಾಂಗಕ್ಕೆ ನಮ್ಮ ಪರಂಪರೆಯ ತತ್ವ, ಉದ್ದೇಶಗಳನ್ನು ಪರಿಚಯಿಸುವ ಅವಶ್ಯಕತೆ ಇದೆ. ಹೆತ್ತ ತಂದೆ ತಾಯಂದಿರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ವ್ಯವಸ್ಥೆ ದೂರವಾಗಬೇಕಿದೆ’ ಎಂದು ತಿಳಿಸಿದರು. ಅಕ್ಕನ ಬಳಗದ ಅಧ್ಯಕ್ಷೆ ರೇಖಾ ಜಗದೀಶ್, ಜಯಮಾಲ, ಚಂದ್ರಶೇಖರ್ ನಿಜಗುಣ, ಡಿ. ಶಿವಯೋಗಿ, ರಾಮಣ್ಣ ಭಜಂತ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-42-1048903692</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>