<p>ತುಮಕೂರು: ಬಸವಣ್ಣನವರು ಸಾರಿದ ತತ್ವಗಳು ಜಾತ್ಯತೀತ, ಕಾಯಕ, ದಾಸೋಹ ಮತ್ತು ಸಮಾನತೆಯ ಆಧಾರದಲ್ಲಿವೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಅಭಿಪ್ರಾಯಪಟ್ಟರು.</p>.<p>ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕಾಯಕವೇ ಕೈಲಾಸ ಎಂದು ಹೇಳಿ, ದುಡಿದದ್ದನ್ನು ಸಮಾಜದೊಂದಿಗೆ ಹಂಚಿಕೊಳ್ಳಬೇಕು ಎಂಬ ಆದರ್ಶ ಸಮಾಜದ ಪರಿಕಲ್ಪನೆ ಬಿತ್ತಿದ್ದರು. 12ನೇ ಶತಮಾನದಲ್ಲಿಯೇ ಮಹಿಳಾ ಸಬಲೀಕರಣದ ಬಗ್ಗೆ ಧ್ವನಿ ಎತ್ತಿದ್ದರು. ಎಲ್ಲರಿಗೂ ಸಮಾನ ಅವಕಾಶ, ವೇದಿಕೆ ಕಲ್ಪಿಸಿದ್ದರು ಎಂದು ಸ್ಮರಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ‘ಜಾತಿ ವೈಷಮ್ಯ ಬಿಟ್ಟು, ಸಮಾನತೆ ಸಾರಿದ ಬಸವಣ್ಣ ಅವರ ತತ್ವಗಳು ಎಲ್ಲ ಧರ್ಮಗಳಿಗೂ ಆದರ್ಶಪ್ರಾಯ’ ಎಂದರು.</p>.<p>ಶಿಕ್ಷಣ ತಜ್ಞ ಚನ್ನಪ್ಪ ಬಾರಿಗಿಡದ ಉಪನ್ಯಾಸ ನೀಡಿದರು. ಕೊಪ್ಪಲ್ ಸಿದ್ಧವೀರಯ್ಯ ಮತ್ತು ಪಾರ್ವತಮ್ಮ ಪ್ರತಿಷ್ಠಾನದಿಂದ ಕೊಪ್ಪಲ್ ನಾಗರಾಜು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು. ಜೂನಿಯರ್ ಕಾಲೇಜಿನಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿಜೆಪಿಯಿಂದ ಪುರಸ್ಕಾರ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-18-1257231417</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಬಸವಣ್ಣನವರು ಸಾರಿದ ತತ್ವಗಳು ಜಾತ್ಯತೀತ, ಕಾಯಕ, ದಾಸೋಹ ಮತ್ತು ಸಮಾನತೆಯ ಆಧಾರದಲ್ಲಿವೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಅಭಿಪ್ರಾಯಪಟ್ಟರು.</p>.<p>ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕಾಯಕವೇ ಕೈಲಾಸ ಎಂದು ಹೇಳಿ, ದುಡಿದದ್ದನ್ನು ಸಮಾಜದೊಂದಿಗೆ ಹಂಚಿಕೊಳ್ಳಬೇಕು ಎಂಬ ಆದರ್ಶ ಸಮಾಜದ ಪರಿಕಲ್ಪನೆ ಬಿತ್ತಿದ್ದರು. 12ನೇ ಶತಮಾನದಲ್ಲಿಯೇ ಮಹಿಳಾ ಸಬಲೀಕರಣದ ಬಗ್ಗೆ ಧ್ವನಿ ಎತ್ತಿದ್ದರು. ಎಲ್ಲರಿಗೂ ಸಮಾನ ಅವಕಾಶ, ವೇದಿಕೆ ಕಲ್ಪಿಸಿದ್ದರು ಎಂದು ಸ್ಮರಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ‘ಜಾತಿ ವೈಷಮ್ಯ ಬಿಟ್ಟು, ಸಮಾನತೆ ಸಾರಿದ ಬಸವಣ್ಣ ಅವರ ತತ್ವಗಳು ಎಲ್ಲ ಧರ್ಮಗಳಿಗೂ ಆದರ್ಶಪ್ರಾಯ’ ಎಂದರು.</p>.<p>ಶಿಕ್ಷಣ ತಜ್ಞ ಚನ್ನಪ್ಪ ಬಾರಿಗಿಡದ ಉಪನ್ಯಾಸ ನೀಡಿದರು. ಕೊಪ್ಪಲ್ ಸಿದ್ಧವೀರಯ್ಯ ಮತ್ತು ಪಾರ್ವತಮ್ಮ ಪ್ರತಿಷ್ಠಾನದಿಂದ ಕೊಪ್ಪಲ್ ನಾಗರಾಜು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು. ಜೂನಿಯರ್ ಕಾಲೇಜಿನಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿಜೆಪಿಯಿಂದ ಪುರಸ್ಕಾರ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-18-1257231417</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>