<p>ಉಜಿರೆ: ಮುನಿಗಳ ವಿಹಾರ, ಧಾಮಸಂಪ್ರೋಕ್ಷಣೆ, ಬಸದಿಗಳ ಪಂಚಕಲ್ಯಾಣ, ಧಾರ್ಮಿಕ ಶಿಬಿರ, ಬಾಹುಬಲಿಸ್ವಾಮಿಯ ಮಹಾಮಸ್ತಕಾಭಿಷೇಕ, ಜಿನಭಜನೆ ಹಾಡವ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯರಾಗಿ ಭಾಗವಹಿಸುವಂತೆ ಪ್ರೇರಣೆ ನೀಡಬೇಕು ಎಂದು ಭಾರತೀಯ ಜೈನ್ಮಿಲನ್ ವಲಯ ಎಂಟರ ಉಪಾಧ್ಯಕ್ಷ ಸುದರ್ಶನ್ ಜೈನ್ ಹೇಳಿದರು.</p>.<p>ಉಜಿರೆ ಎಸ್ಡಿಎಂ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬೆಳ್ತಂಗಡಿ ಜೈನ್ಮಿಲನ್ನ ನೂತನ ಅಧ್ಯಕ್ಷ ಸನ್ಮತಿ ಕುಮಾರ್ ಮತ್ತು ಸದಸ್ಯರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭಾರತೀಯ ಜೈನ್ಮಿಲನ್ ವಲಯ ಎಂಟರ ನಿರ್ದೇಶಕ ಬಿ.ಸೋಮಶೇಖರ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ನಿಕಟಪೂರ್ವ ಅಧ್ಯಕ್ಷ ಡಾ.ನವೀನ್ ಕುಮಾರ್ ಜೈನ್ ಮಾತನಾಡಿದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯರ್ಥಿಗಳನ್ನು ಅಭಿನಂದಿಸಲಾಯಿತು. ಧೀಮತಿ ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಡಾ.ರಜತಾ ಪಿ.ಶೆಟ್ಟಿ, ಬಿ.ಪ್ರಮೋದ್ ಕುಮಾರ್, ಬಿ.ಸೋಮಶೇಖರ ಶೆಟ್ಟಿ, ಬಿ.ಭುಜಬಲಿ ಧರ್ಮಸ್ಥಳ, ಧರಣೇಂದ್ರ ಕುಮಾರ್ ಜೈನ್, ನೂತನ ಅಧ್ಯಕ್ಷ ಸನ್ಮತಿ ಕುಮಾರ್ ಮಾತನಾಡಿದರು.</p>.<p>ಬಿ.ಭುಜಬಲಿ, ಟಿಸಿಬಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಜೈನ್, ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಲಾಸ್ಯ ಉಜಿರೆ ಅವರನ್ನು ಗೌರವಿಸಲಾಯಿತು.</p>.<p>ಸುಮನ್ ಕುಮಾರ್ ಜೈನ್ ವಂದಿಸಿದರು. ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಧರ್ಮ ಪಾಲ ಜೈನ್ ಶಾಂತಿಮಂತ್ರ ಪಠಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-29-1119003054</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಜಿರೆ: ಮುನಿಗಳ ವಿಹಾರ, ಧಾಮಸಂಪ್ರೋಕ್ಷಣೆ, ಬಸದಿಗಳ ಪಂಚಕಲ್ಯಾಣ, ಧಾರ್ಮಿಕ ಶಿಬಿರ, ಬಾಹುಬಲಿಸ್ವಾಮಿಯ ಮಹಾಮಸ್ತಕಾಭಿಷೇಕ, ಜಿನಭಜನೆ ಹಾಡವ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯರಾಗಿ ಭಾಗವಹಿಸುವಂತೆ ಪ್ರೇರಣೆ ನೀಡಬೇಕು ಎಂದು ಭಾರತೀಯ ಜೈನ್ಮಿಲನ್ ವಲಯ ಎಂಟರ ಉಪಾಧ್ಯಕ್ಷ ಸುದರ್ಶನ್ ಜೈನ್ ಹೇಳಿದರು.</p>.<p>ಉಜಿರೆ ಎಸ್ಡಿಎಂ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬೆಳ್ತಂಗಡಿ ಜೈನ್ಮಿಲನ್ನ ನೂತನ ಅಧ್ಯಕ್ಷ ಸನ್ಮತಿ ಕುಮಾರ್ ಮತ್ತು ಸದಸ್ಯರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭಾರತೀಯ ಜೈನ್ಮಿಲನ್ ವಲಯ ಎಂಟರ ನಿರ್ದೇಶಕ ಬಿ.ಸೋಮಶೇಖರ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ನಿಕಟಪೂರ್ವ ಅಧ್ಯಕ್ಷ ಡಾ.ನವೀನ್ ಕುಮಾರ್ ಜೈನ್ ಮಾತನಾಡಿದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯರ್ಥಿಗಳನ್ನು ಅಭಿನಂದಿಸಲಾಯಿತು. ಧೀಮತಿ ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಡಾ.ರಜತಾ ಪಿ.ಶೆಟ್ಟಿ, ಬಿ.ಪ್ರಮೋದ್ ಕುಮಾರ್, ಬಿ.ಸೋಮಶೇಖರ ಶೆಟ್ಟಿ, ಬಿ.ಭುಜಬಲಿ ಧರ್ಮಸ್ಥಳ, ಧರಣೇಂದ್ರ ಕುಮಾರ್ ಜೈನ್, ನೂತನ ಅಧ್ಯಕ್ಷ ಸನ್ಮತಿ ಕುಮಾರ್ ಮಾತನಾಡಿದರು.</p>.<p>ಬಿ.ಭುಜಬಲಿ, ಟಿಸಿಬಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಜೈನ್, ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಲಾಸ್ಯ ಉಜಿರೆ ಅವರನ್ನು ಗೌರವಿಸಲಾಯಿತು.</p>.<p>ಸುಮನ್ ಕುಮಾರ್ ಜೈನ್ ವಂದಿಸಿದರು. ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಧರ್ಮ ಪಾಲ ಜೈನ್ ಶಾಂತಿಮಂತ್ರ ಪಠಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-29-1119003054</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>