ಶ್ರೀಶಂಕರಾಚಾರ್ಯರು ತಮ್ಮ ವಿವೇಕ ಚೂಡಾಮಣಿಯಲ್ಲಿ ಹೇಳಿರುವಂತೆ...‘ಜಿಂಕೆಯು ಬೇಟೆಗಾರನು ಮಾಡುವ ಶಬ್ಧದಿಂದಲೂ, ಆನೆಯು ಹೆಣ್ಣಾನೆಯ ಸ್ಪರ್ಶದಿಂದಲೂ, ಮಿಡತೆಯು ದೀಪದ ರೂಪದಿಂದಲೂ, ಮೀನು ಗಾಳದ ಹುಳುವಿನ ರುಚಿಯಿಂದಲೂ, ದುಂಬಿಯು ಪುಷ್ಪದ ಪರಿಮಳದಿಂದಲೂ ನಾಶವಾಗುತ್ತವೆ’ ಹೀಗೆ ಒಂದೊಂದು ಇಂದ್ರಿಯದ ವಶಕ್ಕೆ ಒಳಪಟ್ಟ ಜಂತುವಿನ ಅವಸ್ಥೆಯೇ ಹೀಗಾದರೆ ಪಂಚೇಂದ್ರಿಯಗಳ ಹೊಡೆತಕ್ಕೆ ಸಿಕ್ಕಿ ಬಿದ್ದಿರುವ ಮನುಷ್ಯನ ಗತಿಯೇನು?