<p>ಇಂಡಿ: ಮಠಗಳು ಈ ನಾಡಿನ ಧಾರ್ಮಿಕ, ಸಾಂಸ್ಕೃತಿಕ, ಪರಂಪರೆಯ ಕೇಂದ್ರಗಳು. ಸಮಾಜವು ಸನ್ಮಾರ್ಗದಲ್ಲಿ ಸಾಗಲು ಮಠಗಳು ದಾರಿದೀಪವಾಗಿ ಕೆಲಸ ಮಾಡುತ್ತವೆ ಎಂದು ಅಗರಖೇಡ ವಿರಕ್ತಮಠದ ಪ್ರಭುಲಿಂಗ ಶ್ರೀಗಳು ಹೇಳಿದರು.</p>.<p>ಅವರು ಗುರುವಾರ ತಾಲ್ಲೂಕಿನ ಅಗರಖೇಡ ಗ್ರಾಮದಲ್ಲಿ ನಡೆದ ಶ್ರೀ ಶಂಕರಲಿಂಗ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಚಳಕಾಪುರ ಮತ್ತು ಆಳೂರದ ಸಿದ್ದಾರೂಢ ಮಠದ ಶಂಕರಾನಂದ ಶ್ರೀಗಳು ಮಾತನಾಡಿ, ಪ್ರತಿಯೊಬ್ಬರಲ್ಲೂ ದೇವರಿದ್ದಾನೆ. ಆ ದೇವರನ್ನು ಕಾಣಲು ನಮ್ಮಲ್ಲಿ ಅರಿವು ಮೂಡಿಸುವ ಮಠಗಳ ಗುರುಗಳು ಅಗತ್ಯ. ಗುರುವೆಂದರೆ ಕೇವಲ ಶಿಕ್ಷಣ, ಜ್ಞಾನ ನೀಡುವವರಲ್ಲ. ಬದುಕಿಗೆ ಮಾರ್ಗ ತೋರುವವರು. ಅವರು ತೋರುವ ಮಾರ್ಗದಲ್ಲಿ ಸಮಾಜ ಶಾಂತಿ, ನೆಮ್ಮದಿಯಿಂದ ಬಾಳಬೇಕು ಎಂದು ಹೇಳಿದರು.</p>.<p>ರಾಜ್ಯ ನಿಂಬೆ ಅಭಿವೃದ್ದಿ ಮಂಡಳಿ ಭೀಮಣ್ಣ ಕವಲಗಿ, ಮದನಕುಮಾರ ಶಿಂದೆ, ಡಾ. ಸಂಗನಬಸು ಬಿರಾದಾರ, ಸಂಗನಗೌಡ ಬಿರಾದಾರ ವೇದಿಕೆ ಮೇಲಿದ್ದರು.</p>.<p>ಇದೇ ವೇಳೆ ಜಾತ್ರಾ ಮಹೋತ್ಸವ ನಿಮಿತ್ಯ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-26-909108900</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಡಿ: ಮಠಗಳು ಈ ನಾಡಿನ ಧಾರ್ಮಿಕ, ಸಾಂಸ್ಕೃತಿಕ, ಪರಂಪರೆಯ ಕೇಂದ್ರಗಳು. ಸಮಾಜವು ಸನ್ಮಾರ್ಗದಲ್ಲಿ ಸಾಗಲು ಮಠಗಳು ದಾರಿದೀಪವಾಗಿ ಕೆಲಸ ಮಾಡುತ್ತವೆ ಎಂದು ಅಗರಖೇಡ ವಿರಕ್ತಮಠದ ಪ್ರಭುಲಿಂಗ ಶ್ರೀಗಳು ಹೇಳಿದರು.</p>.<p>ಅವರು ಗುರುವಾರ ತಾಲ್ಲೂಕಿನ ಅಗರಖೇಡ ಗ್ರಾಮದಲ್ಲಿ ನಡೆದ ಶ್ರೀ ಶಂಕರಲಿಂಗ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಚಳಕಾಪುರ ಮತ್ತು ಆಳೂರದ ಸಿದ್ದಾರೂಢ ಮಠದ ಶಂಕರಾನಂದ ಶ್ರೀಗಳು ಮಾತನಾಡಿ, ಪ್ರತಿಯೊಬ್ಬರಲ್ಲೂ ದೇವರಿದ್ದಾನೆ. ಆ ದೇವರನ್ನು ಕಾಣಲು ನಮ್ಮಲ್ಲಿ ಅರಿವು ಮೂಡಿಸುವ ಮಠಗಳ ಗುರುಗಳು ಅಗತ್ಯ. ಗುರುವೆಂದರೆ ಕೇವಲ ಶಿಕ್ಷಣ, ಜ್ಞಾನ ನೀಡುವವರಲ್ಲ. ಬದುಕಿಗೆ ಮಾರ್ಗ ತೋರುವವರು. ಅವರು ತೋರುವ ಮಾರ್ಗದಲ್ಲಿ ಸಮಾಜ ಶಾಂತಿ, ನೆಮ್ಮದಿಯಿಂದ ಬಾಳಬೇಕು ಎಂದು ಹೇಳಿದರು.</p>.<p>ರಾಜ್ಯ ನಿಂಬೆ ಅಭಿವೃದ್ದಿ ಮಂಡಳಿ ಭೀಮಣ್ಣ ಕವಲಗಿ, ಮದನಕುಮಾರ ಶಿಂದೆ, ಡಾ. ಸಂಗನಬಸು ಬಿರಾದಾರ, ಸಂಗನಗೌಡ ಬಿರಾದಾರ ವೇದಿಕೆ ಮೇಲಿದ್ದರು.</p>.<p>ಇದೇ ವೇಳೆ ಜಾತ್ರಾ ಮಹೋತ್ಸವ ನಿಮಿತ್ಯ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-26-909108900</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>