ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ ಭವಿಷ್ಯ: 14-11-2021ರಿಂದ 20-11-2021ರವರೆಗೆ

ಅಕ್ಷರ ಗಾತ್ರ

ಡಾ.ಎಂ.ಎನ್. ಲಕ್ಷ್ಮೀನರಸಿಂಹಸ್ವಾಮಿ, ಜ್ಯೋತಿಷ್ಯ ಪದ್ಮಭೂಷಣ
ಸಂಪರ್ಕ: 8197304680

***

ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)
ಆದಾಯ ಮತ್ತು ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ನ್ಯಾಯಾಧೀಶರಿಗೆ ನೂತನ ಸ್ಥಾನಮಾನ ದೊರೆಯುವ ಸಾಧ್ಯತೆ ಇದೆ. ನ್ಯಾಯವಾದಿಗಳಿಗೆ ಹೊಸ ದಾವೆಗಳು ದೊರೆತು ಆದಾಯದ ಹೊಸ ಮೂಲಗಳು ಗೋಚರವಾಗಲಿವೆ. ಸ್ವಪ್ರಯತ್ನದಿಂದ ಕಾರ್ಯ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಣುವಿರಿ. ನಿಮ್ಮ ನಡೆನುಡಿಗಳಿಂದ ಸಹೋದ್ಯೋಗಿಗಳಿಗೆ ಇರಿಸುಮುರುಸು ಉಂಟಾಗುತ್ತದೆ. ನಂತರ ಸತ್ಯತಿಳಿದು ಎಲ್ಲರೂ ಸರಿಯಾಗುವರು. ಮಕ್ಕಳಿಂದಲೇ ವಾದ-ವಿವಾದಗಳು ಹೆಚ್ಚಾಗಬಹುದು. ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರ ಇರಲಿ. ಇಲ್ಲದ ಆಪಾದನೆಗಳು ಬರುವ ಸಾಧ್ಯತೆಗಳಿವೆ. ಬಂಧುಗಳೊಂದಿಗೆ ಇದ್ದ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಳ್ಳುವುದು ನಿಮಗೆ ಒಳ್ಳೆಯದು.

ವೃಷಭರಾಶಿ(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡುವುದು ಒಳ್ಳೆಯದು. ಮುಕ್ತ ಭಾವನೆಯಿಂದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವಿರಿ. ಆಶ್ಚರ್ಯಕರ ರೀತಿಯಲ್ಲಿ ನಿಮ್ಮ ವಿರೋಧಿಗಳು ಸಹ ಕಾರ್ಯಗಳಲ್ಲಿ ಬೆಂಬಲ ಸೂಚಿಸುವರು. ವ್ಯವಹಾರದಲ್ಲಿ ನಿಮ್ಮ ಪ್ರಯತ್ನದಿಂದ ಹೆಚ್ಚು ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಕೃಷಿ ಕ್ಷೇತ್ರಕ್ಕೆ ಬಂಡವಾಳವನ್ನು ಹೂಡುವಾಗ ಸ್ವಲ್ಪ ಎಚ್ಚರ ವಹಿಸಿರಿ. ಮಹಿಳೆಯರು ಹೆಚ್ಚು ಮಾತನಾಡುವುದಕ್ಕಿಂತ ಮೌನವಾಗಿರುವುದು ಒಳ್ಳೆಯದು. ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ಶ್ವಾಸಕೋಶದ ತೊಂದರೆ ಇರುವವರು ದೇಹದಂಡನೆ ಮತ್ತು ಸೂಕ್ತ ಚಿಕಿತ್ಸೆ ಪಡೆಯುವುದು ಒಳ್ಳೆಯದು.

ಮಿಥುನ ರಾಶಿ (ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ಪ್ರಯಾಣ ಕಾಲದಲ್ಲಿ ನಿಮಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿರಿ. ನಿಮ್ಮ ಕೆಲಸ ಕಾರ್ಯಗಳಿಗೆ ಕಾಲಮಿತಿಯನ್ನು ಹಾಕಿಕೊಂಡು ಕೆಲಸ ಮಾಡುವುದು ಉತ್ತಮ. ಹಿರಿಯರ ಸಕಾಲಿಕ ಸಲಹೆಗಳಿಂದ ಆಗಬಹುದಾಗಿದ್ದ ಸಾಕಷ್ಟು ನಷ್ಟವನ್ನು ತಪ್ಪಿಸಿಕೊಳ್ಳುವಿರಿ. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಹಣದ ಒಳಹರಿವು ಸಾಮಾನ್ಯವಾಗಿರುತ್ತದೆ. ಜಂಟಿ ವ್ಯವಹಾರಗಳಲ್ಲಿ ಭಾಗವಹಿಸದಿರುವುದು ಬಹಳ ಉತ್ತಮ. ಬಂಧುಮಿತ್ರರೊಡನೆ ಶುಭಕಾರ್ಯಗಳಲ್ಲಿ ಭಾಗವಹಿಸುವ ಯೋಗವಿದೆ. ಹಿರಿಯರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿ ಕುಟುಂಬದಲ್ಲಿ ನೆಮ್ಮದಿ ಮೂಡುತ್ತದೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಿಂದ ಹೆಚ್ಚಿನ ಗೌರವ ದೊರೆಯುತ್ತದೆ.

ಕಟಕ ರಾಶಿ (ಪುನರ್ವಸು 4 ಪುಷ್ಯ ಆಶ್ಲೇಷ)
ಪದೇಪದೇ ನಿಮ್ಮ ನಿರ್ಧಾರಗಳನ್ನು ಬದಲಿಸುವ ಅನಿರೀಕ್ಷಿತ ನಡವಳಿಕೆಯಿಂದಾಗಿ ಕುಟುಂಬದಲ್ಲಿ ಸ್ವಲ್ಪ ಅಸಹನೆ ಮೂಡುತ್ತದೆ. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಹೆಚ್ಚಿನ ಶ್ರಮವನ್ನು ಹಾಕಬೇಕಾಗುತ್ತದೆ. ನಿಮ್ಮ ವ್ಯಾಪಾರದ ನಿಯಮಗಳನ್ನು ಸರಳೀಕರಿಸಿ ಹೆಚ್ಚಿನ ಲಾಭಗಳಿಸುವ ಯೋಜನೆಗಳನ್ನು ರೂಪಿಸುವಿರಿ. ಭಿನ್ನಾಭಿಪ್ರಾಯಗಳಿಂದ ನಿಂತಿದ್ದ ಕೆಲವು ವ್ಯವಹಾರಗಳು ಎಲ್ಲರ ಅಭಿಪ್ರಾಯದಂತೆ ಪುನಃ ಆರಂಭವಾಗುತ್ತವೆ. ಕರಿದ ಪದಾರ್ಥಗಳನ್ನು ತಯಾರಿಸಿ ಮಾರುವವರಿಗೆ ಲಾಭ ಹೆಚ್ಚುತ್ತದೆ. ಸಗಟು ಹೂವಿನ ವ್ಯಾಪಾರಿಗಳಿಗೆ ವ್ಯವಹಾರ ಹೆಚ್ಚಾಗಿ ಲಾಭ ಬರುತ್ತದೆ. ಹಣದ ಒಳಹರಿವು ನಿಮ್ಮ ಅವಶ್ಯಕತೆಗೆ ತಕ್ಕಂತೆ ಇರುತ್ತದೆ. ಕೆಲವರಿಗೆ ವಿವಾಹ ಸಂಬಂಧ ಒದಗುವ ಸಾಧ್ಯತೆ ಇದೆ.

ಸಿಂಹ ರಾಶಿ (ಮಖಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ಯಾವುದೇ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ನಿಮ್ಮ ವೃತ್ತಿಯಲ್ಲಿ ಆಕಸ್ಮಿಕ ತಿರುವು ಪಡೆದು ಶಾರೀರಿಕ ಶ್ರಮ ಕಡಿಮೆಯಾಗಿ ಅಧಿಕಾರಿಯಾಗಿ ಬಡ್ತಿ ದೊರೆಯಬಹುದು. ಮಹಿಳೆಯರಿಗೆ ಕುಟುಂಬ ವ್ಯವಹಾರಗಳಲ್ಲಿ ತೃಪ್ತಿ ಇರುತ್ತದೆ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ವೃತ್ತಿಯಲ್ಲಿ ವೈಯಕ್ತಿಕ ಸಮಸ್ಯೆಗಳಿಗೆ ಗಮನಕೊಟ್ಟು ಅದನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಿರಿ. ದ್ವಿದಳ ಧಾನ್ಯಗಳ ವ್ಯಾಪಾರಿಗಳಿಗೆ ವ್ಯಾಪಾರ ಹೆಚ್ಚಾಗಿ ಲಾಭ ಕೂಡ ಬರುತ್ತದೆ. ಸರ್ಕಾರಿ ಮಟ್ಟದ ಕೆಲಸಗಳಲ್ಲಿ ಯಶಸ್ಸನ್ನು ಕಾಣಬಹುದು. ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಪ್ರಗತಿ ಇರುತ್ತದೆ. ಹಣದ ಒಳಹರಿವು ಸಾಮಾನ್ಯ ಗತಿಯಲ್ಲಿ ಇರುತ್ತದೆ. ಕಾಡುತ್ತಿದ್ದ ಮೂಳೆನೋವು ಈಗ ಕಡಿಮೆಯಾಗುತ್ತವೆ.

ಕನ್ಯಾ ರಾಶಿ (ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ವಿವಿಧ ಮೂಲಗಳಿಂದ ಧನಾಗಮನವಾಗಿ ಮನಸ್ಸಿಗೆ ಸಂತೋಷವೆನಿಸುತ್ತದೆ. ನಿಮ್ಮ ಅಸಹನೆಯ ಪ್ರವೃತ್ತಿ ಉಳಿದವರಿಗೆ ಬೇಸರ ಮೂಡಿಸುತ್ತದೆ. ಸ್ನೇಹಿತರೊಂದಿಗೆ ವಿಚಾರವಿನಿಮಯ ಮಾಡಿ ಈ ಅಭಿಪ್ರಾಯವನ್ನು ಹೋಗಲಾಡಿಸಿಕೊಳ್ಳಿರಿ. ಬಹಳ ಕಾಡುತ್ತಿದ್ದ ಸಾಲಗಾರನಿಗೆ ಸಾಲ ಮರುಪಾವತಿ ಮಾಡಿ ಗೌರವ ಉಳಿಸಿಕೊಳ್ಳುವಿರಿ. ವಸ್ತ್ರ ವ್ಯಾಪಾರಿಗಳಿಗೆ ಆದಾಯ ಹೆಚ್ಚುತ್ತದೆ. ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸದಿರುವುದೇ ಒಳಿತು. ಪಿತ್ರಾರ್ಜಿತ ಆಸ್ತಿಯ ಬಗ್ಗೆ ಮನಃಸ್ತಾಪಗಳು ಬರುವ ಸಾಧ್ಯತೆಗಳಿವೆ. ಕೃಷಿಕಾರ್ಮಿಕರಿಗೆ ಉತ್ತಮ ಕೆಲಸ ದೊರೆತು ಆದಾಯವೂ ಬರುತ್ತದೆ. ಹಣ್ಣಿನ ವ್ಯಾಪಾರಿಗಳಿಗೆ ಮಧ್ಯಮಗತಿಯ ವ್ಯಾಪಾರವಿರುತ್ತದೆ. ಸಂಗಾತಿಯು ಹೆಚ್ಚು ಖರ್ಚನ್ನು ಮಾಡಬಹುದು.

ತುಲಾ ರಾಶಿ (ಚಿತ್ತಾ 3 4 ಸ್ವಾತಿ ವಿಶಾಖ 1 2 3)
ಬೇರೆಯವರ ಸಮಸ್ಯೆಗಳನ್ನು ಪರಿಹರಿಸಲು ಮಧ್ಯಸ್ಥಿಕೆ ಮಾಡಲು ಹೋಗುವುದು ತಪ್ಪು. ಅಲ್ಲಿ ಯಾರದೋ ಪರವಹಿಸಿಕೊಳ್ಳಲು ಹೋಗಿ ಎಲ್ಲರ ಎದುರಿಗೆ ಮುಜುಗರ ಪಡುವಿರಿ. ನಿಮ್ಮ ಅತಿಯಾದ ಆತ್ಮಗೌರವ ನಿಮಗೆ ಮುಳುವಾಗುತ್ತದೆ. ಹಣದ ಒಳಹರಿವು ಸಾಮಾನ್ಯವಾಗಿರುತ್ತದೆ. ಉದ್ಯೋಗದಲ್ಲಿರುವ ಮಹಿಳೆಯರಿಗೆ ಮೇಲಧಿಕಾರಿಗಳಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತದೆ. ಆರ್ಥಿಕ ಸಂಪನ್ಮೂಲಗಳನ್ನು ಕ್ರೋಡೀಕರಿಸಲು ಹಲವು ಪ್ರಯತ್ನಗಳನ್ನು ಮಾಡುವಿರಿ. ಕೃಷಿಕರಿಗೆ ಬೆಲೆ ಕುಸಿತದ ಆತಂಕಗಳು ಎದುರಾಗಬಹುದು. ಸ್ವಯಂ ಉದ್ಯೋಗ ಮಾಡುವವರಿಗೆ ಉತ್ತಮ ವ್ಯವಹಾರವಿರುತ್ತದೆ ಹಾಗೂ ಆದಾಯ ಹೆಚ್ಚುತ್ತದೆ. ಸಂಗಾತಿ ಕಡೆಯವರ ನೆರವಿಗಾಗಿ ಹೋಗಲೇಬೇಕಾದ ಅನಿವಾರ್ಯತೆ ಬರಬಹುದು.

ವೃಶ್ಚಿಕ ರಾಶಿ (ವಿಶಾಖಾ 4ಅನುರಾಧ ಜೇಷ್ಠ)
ಕುಟುಂಬದ ಸದಸ್ಯರ ಮಧ್ಯೆ ಅಸಹನೆ ಆಗಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಕಡಿಮೆಯಾದರೂ ಸಾಧನೆಗೆ ತೊಡಕಾಗುವುದಿಲ್ಲ. ನಿಕಟವರ್ತಿಗಳ ಸಹಕಾರದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ ಇರುತ್ತದೆ. ವ್ಯವಹಾರದ ವಿಸ್ತರಣೆಗಾಗಿ ಓಡಾಡುತ್ತಿದ್ದ ನಿಮಗೆ ದೂರ ಪ್ರದೇಶದಲ್ಲಿ ವ್ಯವಹಾರದ ವಿಸ್ತರಣೆ ಆಗುತ್ತದೆ. ಹೆಣ್ಣುಮಕ್ಕಳ ಅಭಿವೃದ್ಧಿಯು ಉತ್ತಮವಾಗಿ ಆಗುತ್ತದೆ. ಸಂಗಾತಿಯ ಕಡೆಯಿಂದ ಧನಸಹಾಯವನ್ನು ನಿರೀಕ್ಷಿಸಬಹುದು. ಅನಿರೀಕ್ಷಿತ ಮೂಲಗಳಿಂದ ಆರ್ಥಿಕ ಸಹಾಯ ಒದಗುವ ಸಾಧ್ಯತೆ ಇದೆ. ಬಾಹ್ಯಾಕಾಶ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಮೇಲ್ದರ್ಜೆಯ ಹುದ್ದೆ ದೊರೆಯುವ ಸಾಧ್ಯತೆಗಳಿವೆ. ಸರ್ಕಾರಿ ಮಟ್ಟದ ಕೆಲಸಗಳಲ್ಲಿ ಮಂದಗತಿಯನ್ನು ಕಾಣಬಹುದು.

ಧನಸ್ಸು ರಾಶಿ (ಮೂಲ ಪೂರ್ವಾಷಾಢ ಉತ್ತರಾಷಾಢ 1)
ನಿಮ್ಮ ಕೆಲವೊಂದು ಆಸೆಗಳು ಈಡೇರುವ ಸಾಧ್ಯತೆಗಳಿವೆ. ಕಠಿಣ ಪರಿಶ್ರಮಕ್ಕೆ ಫಲ ದೊರೆತು ಉದ್ಯೋಗದಲ್ಲಿ ಬದಲಾವಣೆಯನ್ನು ಕಾಣುವಿರಿ. ಕೆಲವೊಂದು ವಿಷಯಗಳಲ್ಲಿ ನೀವು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಸ್ವಲ್ಪ ಸಮಾಧಾನ ಚಿತ್ತದಿಂದ ವ್ಯವಹರಿಸಿರಿ. ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ವಿಷಯ ವಿನಿಮಯ ಮಾಡಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮಕ್ಕಳ ಬಗ್ಗೆ ಅತಿಯಾದ ಚಿಂತೆಬೇಡ. ಬ್ಯಾಂಕ್ ವ್ಯವಹಾರ ನಡೆಸುವವರಿಗೆ ವ್ಯವಹಾರದಲ್ಲಿ ಮುನ್ನಡೆ ಇರುತ್ತದೆ. ಬೆಳ್ಳಿಯ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಏರಿಕೆ ಕಾಣಬಹುದು. ಊಟ ಉಪಚಾರಗಳನ್ನು ಒದಗಿಸುವವರ ವ್ಯವಹಾರದ ವಿಸ್ತರಣೆ ಆಗಲಿದೆ. ಕೃಷಿಕರಿಗೆ ತಮ್ಮ ಬೆಳೆಯಿಂದ ಹೆಚ್ಚಿನ ಹಣ ದೊರೆಯುತ್ತದೆ.

ಮಕರ ರಾಶಿ (ಉತ್ತರಾಷಾಢ 2 3 4 ಶ್ರವಣಧನಿಷ್ಠ 1.2)
ನೌಕರ ವರ್ಗದವರ ಕಠಿಣ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ದೊರೆತು ಅವರ ಉದ್ಯೋಗದಲ್ಲಿ ಬದಲಾವಣೆಯನ್ನು ಕಾಣಬಹುದು. ಸತ್ಯಶೋಧನೆಯಿಂದ ತಲೆದೋರಿರುವ ಆಂತರಿಕ ಗೊಂದಲಗಳು ನಿವಾರಣೆಯಾಗುವುದು. ನಿಮ್ಮ ನಿಷ್ಕಲ್ಮಶ ಭಾವನೆಗಳಿಗೆ ಸಹೋದ್ಯೋಗಿಗಳಿಂದ ಸೂಕ್ತವಾದ ಪ್ರಶಂಸೆ ವ್ಯಕ್ತವಾಗುವುದು. ಹಣಕಾಸಿನ ವಿಷಯದಲ್ಲಿ ಸ್ವಲ್ಪ ಜಾಗರೂಕತೆ ಅಗತ್ಯ. ಚಿಕ್ಕ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಹಿಳೆಯರು ಸ್ಥಾಪಿಸಿರುವ ಉದ್ದಿಮೆಗಳಲ್ಲಿ ಪ್ರಗತಿಯನ್ನು ಕಾಣಬಹುದು. ಹಣದ ಒಳಹರಿವು ಸಮಾಧಾನವಾಗಿರುತ್ತದೆ. ಸಂಗಾತಿಯ ಸಂತೋಷಕ್ಕಾಗಿ ದೂರದೂರಿಗೆ ಹೋಗಿ ಬರುವಿರಿ. ಧಾರ್ಮಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತದೆ.

ಕುಂಭ ರಾಶಿ (ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಯಂತ್ರೋಪಕರಣಗಳ ತಂತ್ರಜ್ಞರಿಗೆ ಬಿಡುವಿಲ್ಲದ ಕೆಲಸಗಳಿಂದ ಉತ್ತಮ ಆದಾಯವಿದ್ದು ದೇಹಶ್ರಮ ಹೆಚ್ಚಾಗಬಹುದು. ಕೃಷಿ ಯಂತ್ರಗಳನ್ನು ಹೊಂದಿರುವವರಿಗೆ ಬಾಡಿಗೆಯಿಂದ ಹೆಚ್ಚಿನ ಆದಾಯ ಇದೆ. ನಿಮ್ಮ ಸ್ವಪ್ರಯತ್ನದಿಂದ ಆರ್ಥಿಕ ಸ್ಥಿತಿಯನ್ನು ಮೇಲೆತ್ತಲು ಯತ್ನಿಸುವಿರಿ. ಇಷ್ಟ ಮಿತ್ರರಿಗೆ ಸಾಕಷ್ಟು ಸಹಾಯವನ್ನು ಮಾಡುವಿರಿ. ಪ್ರೀತಿ-ಪ್ರೇಮದಲ್ಲಿ ಬಿದ್ದವರಿಗೆ ಹಿನ್ನಡೆ ಇರುತ್ತದೆ. ಹಿರಿಯರು ಅದಕ್ಕೆ ಒಪ್ಪಿಗೆ ಸೂಚಿಸುವುದು ಕಷ್ಟ. ಬಂಧುಗಳು ನಿಮ್ಮ ಒಳ್ಳೆಯ ಗುಣವನ್ನು ಅರಿತ ಮೇಲೆ ನಿಮ್ಮೊಂದಿಗೆ ಹೊಂದಾಣಿಕೆಯನ್ನು ಬಯಸುವರು. ಸಂಪಾದನೆಗಾಗಿ ವಯಸ್ಕರು ಅಡ್ಡ ಮಾರ್ಗಗಳನ್ನು ಹಿಡಿಯುವುದು ಬೇಡ. ಇದು ಬಹಳ ಹಿನ್ನಡೆಗೆ ಕಾರಣವಾಗಬಹುದು. ವಿದೇಶಿ ವ್ಯವಹಾರಗಳನ್ನು ಮಾಡುವವರಿಗೆ ಮುನ್ನಡೆ ಇರುತ್ತದೆ.

ಮೀನ ರಾಶಿ (ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ನಿಮ್ಮ ಸಾಮರ್ಥ್ಯವನ್ನು ಅರಿತು ಕೆಲಸ ಕಾರ್ಯಗಳನ್ನು ಆಯ್ಕೆಮಾಡಿಕೊಳ್ಳಿ. ನೌಕರಿಯಲ್ಲಿರುವವರಿಗೆ ಬಯಸಿದ್ದ ಸ್ಥಳಕ್ಕೆ ವರ್ಗಾವಣೆ ದೊರೆಯುವ ಸಾಧ್ಯತೆ ಇದೆ. ಅತಿಯಾದ ಆತ್ಮೀಯತೆಯನ್ನು ತೋರಿಸುವವರ ಬಗ್ಗೆ ಎಚ್ಚರದಿಂದಿರಿ. ಇವರೇ ನಿಮಗೆ ಮೋಸ ಮಾಡಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಇರಲಿ. ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ಸರ್ಕಾರದಿಂದ ಆಗಬೇಕಾದ ಕೆಲಸಗಳು ಸ್ವಲ್ಪ ನಿಧಾನವಾಗುತ್ತದೆ. ಒಡಹುಟ್ಟಿದವರೊಡನೆ ಜಿಜ್ಞಾಸೆಗಳು ಬರಬಹುದು. ಲೇವಾದೇವಿ ವ್ಯವಹಾರಗಳು ಸದ್ಯದ ಪರಿಸ್ಥಿತಿಯಲ್ಲಿ ಬೇಡವೇ ಬೇಡ. ಮಕ್ಕಳು ತಮ್ಮ ಖರ್ಚಿಗಾಗಿ ಹೆಚ್ಚಿನ ಹಣಕ್ಕೆ ಬೇಡಿಕೆಯನ್ನು ಇಡಬಹುದು. ಸಂಗಾತಿಗೆ ಹೊಸ ಆದಾಯದ ಮೂಲವೊಂದು ಸಿಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT