ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ ಭವಿಷ್ಯ: 01-5-2022ರಿಂದ 7-5-2022ರ ವರೆಗೆ

ಅಕ್ಷರ ಗಾತ್ರ

ಎಂ.ಎನ್.ಲಕ್ಷ್ಮೀನರಸಿಂಹಸ್ವಾಮಿ, ಮಾದಾಪುರ,
ಜ್ಯೋತಿಷ್ಯ ವಿಶಾರದ, ಸಂಪರ್ಕಕ್ಕೆ: 8197304680

***

ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1)

ಹೊಸ ಉದ್ಯಮ ಪ್ರಾರಂಭಿಸಲು ಸಾಕಷ್ಟು ಚಿಂತನೆ ಮಾಡುವಿರಿ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗುವ ಸಾಧ್ಯತೆಗಳಿವೆ. ದೇಹದಲ್ಲಿ ಉಷ್ಣಾಂಶ ಜಾಸ್ತಿಯಾಗಿ ತಲೆನೋವು ಇತ್ಯಾದಿ ಕಾಯಿಲೆ ಬರಬಹುದು. ಪಾಲುದಾರಿಕೆ ವಿಚಾರದಲ್ಲಿ ಪ್ರಮುಖ ನಿರ್ಧಾರವನ್ನು ಕೈಗೊಳ್ಳುವಾಗ ನಿಮ್ಮ ಪ್ರಾಮುಖ್ಯತೆ ಕಡಿಮೆಯಾಗುವ ಸಂದರ್ಭವಿದೆ. ನೃತ್ಯಪಟುಗಳಿಗೆ ಅವರ ಪ್ರತಿಭಾ ಪ್ರದರ್ಶನಕ್ಕೆ ಬೇಕಾದ ಅವಕಾಶಗಳು ಒದಗಿ ಬರುತ್ತವೆ. ಹಣದ ಒಳಹರಿವು ನಿಮ್ಮ ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಧ್ಯಯನ ಮಾಡುವ ಯೋಗವಿದೆ. ಗಣಿಗಾರಿಕೆ ಮಾಡುವವರಿಗೆ ಉತ್ತಮ ವ್ಯವಹಾರ ನಡೆಯುತ್ತದೆ. ಸಂಗಾತಿಯ ಹೆಸರಿನಲ್ಲಿ ಕೊಟ್ಟಿದ್ದ ಸಾಲಗಳು ಮುಳುಗಬಹುದು.

ವೃಷಭರಾಶಿ(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)

ತರಕಾರಿ, ಹಣ್ಣು ವ್ಯಾಪಾರಸ್ಥರಿಗೆ ಹೆಚ್ಚಿನ ಬೇಡಿಕೆ ಬಂದು ಲಾಭ ಬರುತ್ತದೆ. ಸರ್ಕಾರಿ ಮಟ್ಟದ ಕೆಲಸಕಾರ್ಯಗಳಲ್ಲಿ ಸ್ವಲ್ಪಮಟ್ಟಿನ ನಿಧಾನಗತಿ ಇರಲಿದೆ. ಹಿರಿಯ ಅಧಿಕಾರಿಗಳೊಡನೆ ವಾದ-ವಿವಾದ ಖಂಡಿತ ಬೇಡ. ಸ್ವಂತ ಉದ್ದಿಮೆ ನಡೆಸುತ್ತಿರುವವರಿಗೆ ಅಭಿವೃದ್ಧಿ ಇರುತ್ತದೆ. ಹೊಸ ವಾಹನ ಖರೀದಿ ಮಾಡುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಹಿತ ಶತ್ರುಗಳು ನಿಮ್ಮನ್ನು ಕಾಡಬಹುದು. ಶಾಲಾ ಕಾಲೇಜುಗಳನ್ನು ನಡೆಸುತ್ತಿರುವವರಿಗೆ ಅಭಿವೃದ್ಧಿ ಇರುತ್ತದೆ. ದೀರ್ಘಕಾಲೀನ ಕಾಯಿಲೆ ಇರುವವರು ಎಚ್ಚರವಾಗಿರುವುದು ಮತ್ತು ಔಷಧೋಪಚಾರಗಳನ್ನು ಮಾಡಿಕೊಳ್ಳುವುದು ಉತ್ತಮ. ಹಣದ ಒಳಹರಿವು ನಿಮ್ಮ ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ.

ಮಿಥುನ ರಾಶಿ(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)

ಹಂತಹಂತವಾಗಿ ನಿಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಂಡು ಮುನ್ನಡೆಯುವಿರಿ. ವಿದ್ಯಾರ್ಥಿಗಳು ಅಭ್ಯಾಸದತ್ತ ಹೆಚ್ಚಿನ ಗಮನಹರಿಸುವುದು ಅಗತ್ಯ. ಸರ್ಕಾರದಿಂದ ಬರಬೇಕಾಗಿದ್ದ ಹಣ ಈಗ ಬರುತ್ತದೆ. ಸರ್ಕಾರಿ ಹೂಡಿಕೆಯಲ್ಲಿದ್ದ ಹಣ ಇಡಿ ಗಂಟಾಗಿ ಒದಗಿ ಬರುತ್ತದೆ. ಒಡಹುಟ್ಟಿದವರಿಂದ ನಿಮ್ಮ ವ್ಯಾಪಾರ ವ್ಯವಹಾರಗಳಿಗೆ ಸಾಕಷ್ಟು ಸಹಾಯ ದೊರೆಯುತ್ತದೆ. ಕಗ್ಗಂಟಾಗಿದ್ದ ಪಿತ್ರಾರ್ಜಿತ ಆಸ್ತಿಯಲ್ಲಿ ನಿಮ್ಮ ಪಾಲು ದೊರೆಯುತ್ತದೆ. ಕೃಷಿಕರಿಗೆ ಇದ್ದ ಕೆಲವು ಆತಂಕ ದೂರವಾಗಿ ಅವರ ಬೆಳೆಗೆ ಉತ್ತಮ ಬೆಲೆ ದೊರೆಯುವ ಅವಕಾಶವಿದೆ. ವಿದೇಶಗಳಿಗೆ ಕಚ್ಚಾವಸ್ತುಗಳನ್ನು ಪೂರೈಕೆ ಮಾಡುವವರಿಗೆ ವ್ಯವಹಾರ ವೃದ್ಧಿಸುತ್ತದೆ. ಆದಾಯದಷ್ಟೇ ಖರ್ಚು ಇರುತ್ತದೆ.

ಕಟಕ ರಾಶಿ( ಪುನರ್ವಸು 4 ಪುಷ್ಯ ಆಶ್ಲೇಷ)

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಂಪನ್ಮೂಲ ಕ್ರೋಡೀಕರಣ ಮಾಡುವಿರಿ. ನಿಮಗೆ ಬೇಕಾದ ಸಾಲ ಸೌಲಭ್ಯ ಸರಾಗವಾಗಿ ದೊರೆಯುತ್ತದೆ. ಆತ್ಮಸ್ಥೈರ್ಯದಿಂದ ಮಾಡಿದ ಕೆಲಸಗಳಿಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಬಹುದು. ಹೊಸ ಹೊಸ ವ್ಯವಹಾರಗಳಿಗೆ ಪಾಲ್ಗೊಳ್ಳಲು ಆಹ್ವಾನ ಬರುತ್ತದೆ. ಯೋಚಿಸಿ ಮುಂದಡಿ ಇಡಿರಿ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡುವ ಆಸೆ ಗರಿಗೆದರುತ್ತದೆ. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ಆಹಾರ ವಸ್ತುಗಳನ್ನು ಮಾರಾಟ ಮಾಡುವವರ ವ್ಯವಹಾರ ವಿಸ್ತರಿಸುತ್ತದೆ. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ವಯಸ್ಕರಿಗೆ ವಿವಾಹ ಸಂಬಂಧ ಒದಗಿಬರುವ ಸಾಧ್ಯತೆಗಳಿವೆ. ಕುಟುಂಬ ಸಮೇತರಾಗಿ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ಕೊಡುವಿರಿ.

ಸಿಂಹ ರಾಶಿ( ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)

ಗಣ್ಯರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವ ಅವಕಾಶಗಳು ಕೆಲವರಿಗೆ ಒದಗಿಬರುತ್ತದೆ. ನಿಮ್ಮ ಯೋಜನೆಗಳನ್ನು ಆದ್ಯತೆಯ ಮೇಲೆ ಜಾರಿಗೊಳಿಸುವುದು ಉತ್ತಮ. ಪ್ರಯಾಣ ಕಾಲದಲ್ಲಿ ಅಪರಿಚಿತರ ಜೊತೆ ಎಚ್ಚರವಾಗಿರಿ. ಇವರು ನಿಮ್ಮನ್ನು ದಾರಿತಪ್ಪಿಸಲು ಯತ್ನಿಸುವರು. ಸ್ವತ್ತು ವಿವಾದಗಳಲ್ಲಿ ಬಂಧುಗಳೊಡನೆ ಸೌಹಾರ್ದಯುತವಾಗಿ ಮಾತನಾಡಿದಲ್ಲಿ ಸಮಸ್ಯೆ ಬಗೆಹರಿಯುತ್ತದೆ. ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ಮಾತನಾಡುವಾಗ ಹಗುರವಾದ ಮಾತುಗಳು ಬೇಡ. ಹಲವಾರು ವೈಯಕ್ತಿಕ ಸಮಸ್ಯೆಗಳು ಕುಳಿತು ಆಲೋಚಿಸಿದಲ್ಲಿ ಪರಿಹಾರದ ದಾರಿ ಕಂಡು ಬರುತ್ತದೆ. ಸಂಗಾತಿಗೆ ತವರಿನಿಂದ ಆಸ್ತಿ ದೊರೆಯುವ ಸಾಧ್ಯತೆ ಇದೆ. ಹೊಸ ವ್ಯವಹಾರದಲ್ಲಿ ನಿಮಗೆ ಹೆಚ್ಚಿನ ಪ್ರಾಮುಖ್ಯತೆಯ ದೊರೆಯುತ್ತದೆ.

ಕನ್ಯಾ ರಾಶಿ( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)

ಮನೆಯವರ ಅಸಮ್ಮತಿಯ ನಡುವೆಯೂ ಕೆಲವರು ಸಂಗಾತಿಯ ಆಯ್ಕೆಯನ್ನು ಮಾಡಿಕೊಳ್ಳುವರು. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ ಕಡಿಮೆಯಾಗುವ ಸಂದರ್ಭವಿದೆ. ಸಣ್ಣಪುಟ್ಟ ವ್ಯಾಪಾರ ಮಾಡುವವರಿಗೆ ನಿರೀಕ್ಷಿತ ಲಾಭವಿರುತ್ತದೆ. ಮೂಳೆ ತೊಂದರೆ ಇರುವವರು ಎಚ್ಚರವಹಿಸಿರಿ. ಸಂಶೋಧನೆಯಲ್ಲಿ ಪ್ರಯೋಗಶೀಲರಾಗಿರುವವರಿಗೆ ಅಪೇಕ್ಷಿತ ರೀತಿಯಲ್ಲಿ ಫಲಿತಾಂಶ ದೊರೆಯುವ ಸಂದರ್ಭವಿದೆ. ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ವಿವಾಹ ಅಪೇಕ್ಷಿತರಿಗೆ ಸಂಬಂಧ ಒದಗಿಬರುವ ಸಾಧ್ಯತೆ ಇದೆ. ಸರ್ಕಾರಿ ಸಾಲ ನಿಧಾನವಾಗಿ ಬರುವ ಸಾಧ್ಯತೆ ಇದೆ. ಹೊಸ ವ್ಯವಹಾರಗಳಿಗೆ ಹೂಡಲು ಬಂಡವಾಳ ದೊರೆಯುತ್ತದೆ. ಹೈನುಗಾರಿಕೆಯನ್ನು ಮಾಡುತ್ತಿರುವವರಿಗೆ ಏಳಿಗೆ ಇರುತ್ತದೆ.

ತುಲಾ ರಾಶಿ( ಚಿತ್ತಾ 3 4 ಸ್ವಾತಿ ವಿಶಾಖ 1 2 3)

ಕೃಷಿ ಸಂಬಂಧಿತ ಯಂತ್ರೋಪಕರಣಗಳನ್ನು ತಯಾರಿಸಿ ಮಾರುವವರಿಗೆ ವ್ಯಾಪಾರ ವೃದ್ಧಿಸುತ್ತದೆ. ಲೆಕ್ಕ ಪರೀಕ್ಷಕರಿಗೆ ಅನಿರೀಕ್ಷಿತವಾದ ಸಮಸ್ಯೆಗಳು ತಲೆದೋರಬಹುದು. ಆದಾಯಕ್ಕಿಂತ ವೆಚ್ಚ ಹೆಚ್ಚಾಗುವ ಸಾಧ್ಯತೆಯಿದೆ. ಹಣದ ನಿರ್ವಹಣೆಯನ್ನು ಸರಿಯಾಗಿ ಮಾಡಿಕೊಳ್ಳಿ. ಸಮಾಜಸೇವೆಯ ಹೆಸರಿನಲ್ಲಿ ದೌರ್ಬಲ್ಯಗಳನ್ನು ಮುಚ್ಚಿಕೊಳ್ಳಲು ಹೋದಲ್ಲಿ ಸಿಕ್ಕಿ ಬೀಳುವ ಸಾಧ್ಯತೆಗಳಿವೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಾಕಷ್ಟು ಗಮನ ಅಗತ್ಯ. ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆಯನ್ನು ಕಾಣಬಹುದು. ಭೂ ಸಂಬಂಧಿ ವ್ಯವಹಾರಗಳನ್ನು ಮಾಡುವವರಿಗೆ ಹೆಚ್ಚಿನ ಯಶಸ್ಸು ಇರುತ್ತದೆ. ಪಾಲುದಾರಿಕೆಯ ವ್ಯವಹಾರದಲ್ಲಿ ಆದಾಯ ಕಡಿಮೆಯಿರುತ್ತದೆ.

ವೃಶ್ಚಿಕ ರಾಶಿ(ವಿಶಾಖಾ 4 ಅನುರಾಧ ಜೇಷ್ಠ)

ತಂದೆ-ತಾಯಿಗಳಿಗೆ ಅವರ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಯೋಗವಿದೆ. ಹಣದ ಒಳಹರಿವು ಉತ್ತಮವಾಗಿರುತ್ತದೆ. ನಿರೀಕ್ಷಿತ ಮೂಲಗಳಿಂದ ಆದಾಯವಿರುತ್ತದೆ. ಆಹಾರ ಪದಾರ್ಥಗಳ ವ್ಯವಹಾರ ಮಾಡುವವರಿಗೆ ವ್ಯವಹಾರ ವೃದ್ಧಿಸಿ ಆದಾಯ ಹೆಚ್ಚುತ್ತದೆ. ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರು ಹೆಚ್ಚು ಎಚ್ಚರದಿಂದಿರಿ. ಗೃಹ ನಿರ್ಮಾಣಕ್ಕೆ ಇದ್ದ ಅಡ್ಡಿ ಆತಂಕಗಳು ಈಗ ನಿವಾರಣೆ ಆಗುತ್ತವೆ. ಸಂಗಾತಿಯ ಆದಾಯದಲ್ಲಿ ಏರಿಕೆಯನ್ನು ಕಾಣಬಹುದು. ಅನಿರೀಕ್ಷಿತವಾಗಿ ಆರಂಭಗೊಂಡ ವ್ಯಾಪಾರಗಳು ಕೆಲವರಿಗೆ ಲಾಭ ತರುತ್ತವೆ. ಸ್ನೇಹಿತರೊಡನೆ ಮನಬಿಚ್ಚಿ ಮಾತನಾಡುವುದರಿಂದ ಇದ್ದ ಕಸಿವಿಸಿ ದೂರವಾಗುತ್ತದೆ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವನ್ನು ಕಾಣಬಹುದು.

ಧನಸ್ಸು ರಾಶಿ( ಮೂಲ ಪೂರ್ವಾಷಾಢ ಉತ್ತರಾಷಾಢ 1 )

ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಹೆಚ್ಚುತ್ತದೆ. ಹೊಸ ನಿವೇಶನವನ್ನು ಕೊಳ್ಳುವ ಯೋಗವಿದೆ. ಒಡಹುಟ್ಟಿದವರಿಂದ ಆಸ್ತಿಯ ಬಗ್ಗೆ ತಗಾದೆ ಬರಬಹುದು. ವಾಯುಯಾನ ತಂತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಸಂಶೋಧನೆ ಮಾಡುತ್ತಿರುವವರಿಗೆ ಉತ್ತಮ ಫಲಿತಾಂಶವಿರುತ್ತದೆ. ಪಿತ್ರಾರ್ಜಿತ ಆಸ್ತಿಗಳು ಒದಗುವ ಸಂದರ್ಭವಿರುತ್ತದೆ. ಹಿರಿಯರ ಸಲಹೆಗಳು ನಿಮಗೆ ವ್ಯವಹಾರದಲ್ಲಿ ಉತ್ತಮ ಮಾರ್ಗದರ್ಶನ ಮಾಡುತ್ತವೆ. ತಂದೆಯಿಂದ ಧನಸಹಾಯ ಒದಗಿಬರುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಸಹಕಾರ ದೊರೆಯುತ್ತದೆ. ಸತ್ಕಾರ್ಯಗಳಿಗಾಗಿ ಸಹಾಯ ಕೋರಿಬರುವವರಿಗೆ ಸಹಾಯ ಮಾಡುವಿರಿ.

ಮಕರ ರಾಶಿ(ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)

ನಿಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ಹೆಚ್ಚು ಗಮನಹರಿಸಿರಿ. ನೆರೆಹೊರೆಯವರೊಂದಿಗೆ ಸ್ನೇಹ ಸಂಬಂಧ ವೃದ್ಧಿಸಿಕೊಳ್ಳುವಿರಿ. ಸಂಯಮದಿಂದ ವ್ಯವಹರಿಸಿದಲ್ಲಿ ವೃತ್ತಿಯಲ್ಲಿನ ಕೆಲವು ತೊಂದರೆಗಳು ನಿವಾರಣೆಯಾಗುತ್ತವೆ. ಸಾಮಾಜಿಕ ಕೆಲಸಗಳಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಮುಖ್ಯ. ಗಣ್ಯರೊಂದಿಗೆ ಸಂಭಾಷಣೆ ನಡೆಸಿ ಕೆಲವೊಂದು ವಿಚಾರಗಳ ಬಗ್ಗೆ ಹೆಚ್ಚಿನ ತಿಳಿವಳಿಕೆ ಪಡೆಯುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಎನಿಸಿದರೂ ಯಾವುದೇ ರೀತಿಯ ತೊಂದರೆ ಇರುವುದಿಲ್ಲ. ಅನಿರೀಕ್ಷಿತ ಗೌರವ ಕೆಲವರಿಗೆ ದೊರೆಯಬಹುದು. ಕೃಷಿಕರ ಆದಾಯ ಹೆಚ್ಚಾಗುವ ಸಂದರ್ಭವಿದೆ.

ಕುಂಭ ರಾಶಿ( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)

ಸಾವಯವ ಕೃಷಿ ಪದಾರ್ಥಗಳನ್ನು ಬೆಳೆಯುವವರಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ಜಮೀನಿನ ಕೆಲಸಗಳು ಭರದಿಂದ ಸಾಗುತ್ತವೆ. ಯುವಕರು ಅವರ ಸಾಮರ್ಥ್ಯವನ್ನು ಅರಿತು ಕೆಲಸ ವಹಿಸಿಕೊಳ್ಳುವುದು ಉತ್ತಮ ಇಲ್ಲವಾದಲ್ಲಿ ಎಲ್ಲರ ಮುಂದೆ ಅಗೌರವಕ್ಕೆ ಪಾತ್ರರಾಗುವಿರಿ. ಹಣದ ಒಳಹರಿವು ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ಉದ್ದಿಮೆದಾರರಿಗೆ ಹೊಸ ಶಾಖೆಯನ್ನು ತೆರೆಯಲು ಬೇಕಾದ ಅನುಕೂಲತೆಗಳು ಒದಗುತ್ತವೆ. ದ್ವಿದಳ ಧಾನ್ಯಗಳನ್ನು ಮಾರಾಟ ಮಾಡುವವರ ವ್ಯವಹಾರ ವೃದ್ಧಿಸುತ್ತದೆ. ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವನ್ನು ಈಗ ತೀರಿಸಬಹುದು. ದೈಹಿಕ ಕೆಲಸಗಳನ್ನು ಮಾಡುವವರಿಗೆ ಸ್ವಲ್ಪ ಕೆಲಸ ಕಡಿಮೆಯಾಗುವ ಸಂದರ್ಭವಿದೆ. ಶೀತಬಾಧೆ ಇರುವವರು ಎಚ್ಚರ ವಹಿಸಿರಿ. ಅಲಂಕಾರಿಕ ವಸ್ತುಗಳನ್ನು ಮಾರಾಟ ಮಾಡುವವರಿಗೆ ಲಾಭವಿದೆ.

ಮೀನ ರಾಶಿ( ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)

ಕೆಲವೊಂದು ತುರ್ತು ವಿಷಯಗಳ ಪರಿಹಾರಕ್ಕಾಗಿ ಸಂಬಂಧಿಕರನ್ನು ಓಲೈಸುವಿರಿ. ನೌಕರ ವರ್ಗದವರ ಕಠಿಣ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ದೊರೆತು ಪ್ರೋತ್ಸಾಹಧನ ಸಿಗುವ ಸಾಧ್ಯತೆ ಇದೆ. ಮಹಿಳೆಯರು ಭಾವೋದ್ವೇಗದಿಂದ ಮಾತನಾಡಿದಲ್ಲಿ ಅವರ ಗೌರವಕ್ಕೆ ಕುಂದು ಬರಬಹುದು. ಉಸಿರಾಟದ ತೊಂದರೆ ಇರುವವರು ಎಚ್ಚರಿಕೆಯಿಂದ ಇದ್ದು ಚಿಕಿತ್ಸೆ ಪಡೆಯುವುದು ಉತ್ತಮ. ವೈದ್ಯರುಗಳಿಗೆ ಆದಾಯದಲ್ಲಿ ಹೆಚ್ಚಳ ಕಾಣಬಹುದು. ಹಣದ ಒಳಹರಿವು ಉತ್ತಮವಾಗಿರುತ್ತದೆ. ದುಂದುವೆಚ್ಚಕ್ಕೆ ಕಡಿವಾಣ ಹಾಕುವುದು ಅತಿ ಅಗತ್ಯ. ಸಂಗಾತಿಯೊಡನೆ ಕೆಲವೊಂದು ವಿಚಾರಗಳಲ್ಲಿ ಜಿಜ್ಞಾಸೆ ಮೂಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT