<p>ಯಾದಗಿರಿ: ‘ಭಾರತೀಯ ಪರಂ ಪರೆಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದ್ದು, ಮಠ– ಮಾನ್ಯಗಳಲ್ಲಿ ಮಹಿಳೆಯರಿಗೆ ಗೌರವಿಸುವ ಕಾರ್ಯ ಕೃತಜ್ಞತೆಯಿಂದ ಕೂಡಿದೆ’ ಎಂದು ರುಕ್ಮಾಪುರದ ಗುರುಶಾಂತಮೂರ್ತಿ ಶಿವಾಚಾರ್ಯರು ಹೇಳಿದರು.</p>.<p>ನಗರದ ದಾಸಬಾಳಧೀಶ್ವರ ಮಠದಲ್ಲಿ ಈಚೆಗೆ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಹಾಪುರದ ಚರಬಸವೇಶ್ವರ ಗದ್ದುಗೆಯ ಬಸವಾರ್ಯ ಶರಣರು ಮಾತನಾಡಿ, ‘ದಾಶಬಾಳಧೀಶ್ವರ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಶ್ರೀಗಳು ಭಕ್ತರಲ್ಲಿ ತಾಳ್ಮೆ, ಸಹನೆ ಮತ್ತು ಶಾಂತಿಯುತ ಬದುಕು ನಡೆಸಲು ದಾರಿ ಮಾಡಿಕೊಟ್ಟಿದ್ದಾರೆ’ ಎಂದರು.</p>.<p>ಬಿಜೆಪಿ ಮುಖಂಡರಾದ ನಾಗರತ್ನ ಕುಪ್ಪಿ ಮಾತನಾಡಿ, ‘ಸರ್ವರನ್ನು ಸಮಾನತೆಯಿಂದ ಕಾಣುವ ಏಕೈಕ ಮಠ ಇದು. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜ್ಞಾನಾಮೃತವನ್ನು ಧಾರೆ ಎರೆಯಲಾಗಿದೆ’ ಎಂದು ಹೇಳಿದರು.</p>.<p>ಉಪನ್ಯಾಸ ನೀಡಿದ ಜ್ಯೋತಿಲತಾ ತಡಿಬಿಡಿಮಠ, ‘ಭಾರತೀಯ ಸಂಸ್ಕೃತಿ ನಶಿಸಿದರೆ ಭಾರತಕ್ಕೆ ಮಾತ್ರವಲ್ಲ ಇಡೀ ಜಗತ್ತಿಗೆ ನಷ್ಟವಿದೆ. ಸಂಸ್ಕೃತಿಗೆ ನಮ್ಮ ದೇಶದಲ್ಲಿ ಅದ್ಭುತವಾದ ಶಕ್ತಿಯಿದೆ. ಹೊರ ದೇಶದವನ್ನು ನಮ್ಮ ದೇಶದ ಸಂಸ್ಕೃತಿಯನ್ನು ಅನುಸರಿಸುತ್ತಾರೆ’ ಎಂದರು.</p>.<p>ಸಾನಿಧ್ಯ ವಹಿಸಿದ್ದ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ‘ಮಠದ ಜಾತ್ರಾ ದಿನವೇ ಹನುಮಾನ ಜಯಂತಿ ಇದ್ದದ್ದು ಶ್ರೇಷ್ಠ ದಿನವಾಗಿದೆ. ಆಂಜನೇಯ ಸಕಲ ಕಷ್ಟಗಳನ್ನು ದೂರ ಮಾಡುವ ಶಕ್ತಿಯುಳ್ಳವ’ ಎಂದು ಹೇಳಿದರು.</p>.<p>ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಲ್ಲಿಕಾರ್ಜುನ ಸ್ವಾಮಿ, ವೀರಯ್ಯ ಸ್ವಾಮಿ ಹಿರೇಮಠ, ಸಿದ್ದಯ್ಯ ಸ್ವಾಮಿ, ಮಲ್ಲಿಕಾರ್ಜುನ ಶಾಸ್ತ್ರಿಗಳು ನಡೆಸಿಕೊಟ್ಟರು. ಸಂಜೆ ಪಂಚತನಾರತಿ, ಲಕ್ಷ ದೀಪೋತ್ಸವ ಜರುಗಿದವು.</p>.<p>ಪ್ರಮುಖರಾದ ಮಂಜುಳಾ ಘೂಳಿ, ಲಕ್ಷ್ಮಿ ಮಾಲಿ ಪಾಟೀಲ, ಸೋಮನಗೌಡ ಪೊಲೀಸ್ ಪಾಟೀಲ, ಬೀರಪ್ಪ ಪೂಜಾರಿ, ರವಿ ಜಾಕಾ, ಅಮೋಘ ಸಿದ್ದೇಶ್ವರ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-30-762950794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಭಾರತೀಯ ಪರಂ ಪರೆಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದ್ದು, ಮಠ– ಮಾನ್ಯಗಳಲ್ಲಿ ಮಹಿಳೆಯರಿಗೆ ಗೌರವಿಸುವ ಕಾರ್ಯ ಕೃತಜ್ಞತೆಯಿಂದ ಕೂಡಿದೆ’ ಎಂದು ರುಕ್ಮಾಪುರದ ಗುರುಶಾಂತಮೂರ್ತಿ ಶಿವಾಚಾರ್ಯರು ಹೇಳಿದರು.</p>.<p>ನಗರದ ದಾಸಬಾಳಧೀಶ್ವರ ಮಠದಲ್ಲಿ ಈಚೆಗೆ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಹಾಪುರದ ಚರಬಸವೇಶ್ವರ ಗದ್ದುಗೆಯ ಬಸವಾರ್ಯ ಶರಣರು ಮಾತನಾಡಿ, ‘ದಾಶಬಾಳಧೀಶ್ವರ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಶ್ರೀಗಳು ಭಕ್ತರಲ್ಲಿ ತಾಳ್ಮೆ, ಸಹನೆ ಮತ್ತು ಶಾಂತಿಯುತ ಬದುಕು ನಡೆಸಲು ದಾರಿ ಮಾಡಿಕೊಟ್ಟಿದ್ದಾರೆ’ ಎಂದರು.</p>.<p>ಬಿಜೆಪಿ ಮುಖಂಡರಾದ ನಾಗರತ್ನ ಕುಪ್ಪಿ ಮಾತನಾಡಿ, ‘ಸರ್ವರನ್ನು ಸಮಾನತೆಯಿಂದ ಕಾಣುವ ಏಕೈಕ ಮಠ ಇದು. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜ್ಞಾನಾಮೃತವನ್ನು ಧಾರೆ ಎರೆಯಲಾಗಿದೆ’ ಎಂದು ಹೇಳಿದರು.</p>.<p>ಉಪನ್ಯಾಸ ನೀಡಿದ ಜ್ಯೋತಿಲತಾ ತಡಿಬಿಡಿಮಠ, ‘ಭಾರತೀಯ ಸಂಸ್ಕೃತಿ ನಶಿಸಿದರೆ ಭಾರತಕ್ಕೆ ಮಾತ್ರವಲ್ಲ ಇಡೀ ಜಗತ್ತಿಗೆ ನಷ್ಟವಿದೆ. ಸಂಸ್ಕೃತಿಗೆ ನಮ್ಮ ದೇಶದಲ್ಲಿ ಅದ್ಭುತವಾದ ಶಕ್ತಿಯಿದೆ. ಹೊರ ದೇಶದವನ್ನು ನಮ್ಮ ದೇಶದ ಸಂಸ್ಕೃತಿಯನ್ನು ಅನುಸರಿಸುತ್ತಾರೆ’ ಎಂದರು.</p>.<p>ಸಾನಿಧ್ಯ ವಹಿಸಿದ್ದ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ‘ಮಠದ ಜಾತ್ರಾ ದಿನವೇ ಹನುಮಾನ ಜಯಂತಿ ಇದ್ದದ್ದು ಶ್ರೇಷ್ಠ ದಿನವಾಗಿದೆ. ಆಂಜನೇಯ ಸಕಲ ಕಷ್ಟಗಳನ್ನು ದೂರ ಮಾಡುವ ಶಕ್ತಿಯುಳ್ಳವ’ ಎಂದು ಹೇಳಿದರು.</p>.<p>ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಲ್ಲಿಕಾರ್ಜುನ ಸ್ವಾಮಿ, ವೀರಯ್ಯ ಸ್ವಾಮಿ ಹಿರೇಮಠ, ಸಿದ್ದಯ್ಯ ಸ್ವಾಮಿ, ಮಲ್ಲಿಕಾರ್ಜುನ ಶಾಸ್ತ್ರಿಗಳು ನಡೆಸಿಕೊಟ್ಟರು. ಸಂಜೆ ಪಂಚತನಾರತಿ, ಲಕ್ಷ ದೀಪೋತ್ಸವ ಜರುಗಿದವು.</p>.<p>ಪ್ರಮುಖರಾದ ಮಂಜುಳಾ ಘೂಳಿ, ಲಕ್ಷ್ಮಿ ಮಾಲಿ ಪಾಟೀಲ, ಸೋಮನಗೌಡ ಪೊಲೀಸ್ ಪಾಟೀಲ, ಬೀರಪ್ಪ ಪೂಜಾರಿ, ರವಿ ಜಾಕಾ, ಅಮೋಘ ಸಿದ್ದೇಶ್ವರ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-30-762950794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>